ಸಿಡಿ ಗೋಪಿನಾಥ್ 
ಕ್ರಿಕೆಟ್

Chennai: ಚೊಚ್ಚಲ ಟೆಸ್ಟ್ ವಿಜೇತ ಭಾರತ ತಂಡದ ಹಿರಿಯ ಆಟಗಾರ CD ಗೋಪಿನಾಥ್ ನಿಧನ!

ಮಾರ್ಚ್ 1, 1930 ರಂದು ಮದ್ರಾಸ್‌ನಲ್ಲಿ (ಈಗ ಚೆನ್ನೈ) ಜನಿಸಿದ ಚಿಂಗಲ್‌ಪುಟ್ ದುರೈಕಣ್ಣು ಗೋಪಿನಾಥ್ 1951 ರಲ್ಲಿ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ್ದರು.

ಚೆನ್ನೈ: ಚೊಚ್ಚಲ ಟೆಸ್ಟ್ ವಿಜೇತ ಭಾರತ ತಂಡದ ಕೊನೆಯ ಆಟಗಾರರಾಗಿದ್ದ ಮಾಜಿ ಟೆಸ್ಟ್ ಕ್ರಿಕೆಟಿಗ ಸಿ ಡಿ ಗೋಪಿನಾಥ್ ಗುರುವಾರ ಚೆನ್ನೈನಲ್ಲಿರುವ ತಮ್ಮ ಮಗಳ ನಿವಾಸದಲ್ಲಿ ಚಿರನಿದ್ರೆಗೆ ಜಾರಿದರು. ಅವರಿಗೆ 96 ವರ್ಷ ವಯಸ್ಸಾಗಿತ್ತು.

ಗೋಪಿನಾಥ್ ಅವರು ಭಾರತದ ಅತ್ಯಂತ ಹಿರಿಯ ಟೆಸ್ಟ್ ಕ್ರಿಕೆಟಿಗರಾಗಿದ್ದರು ಹಾಗೂ ಆಸ್ಟ್ರೇಲಿಯಾದ ನೀಲ್ ಹಾರ್ವೆ ನಂತರ ವಿಶ್ವದ ಎರಡನೇ ಹಿರಿಯ ಆಟಗಾರರಾಗಿದ್ದರು. ಅವರ ಸಾವಿನೊಂದಿಗೆ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಮಹತ್ವದ ಅಧ್ಯಾಯವೊಂದು ಅಂತ್ಯಗೊಂಡಿದೆ.

ಮಾರ್ಚ್ 1, 1930 ರಂದು ಮದ್ರಾಸ್‌ನಲ್ಲಿ (ಈಗ ಚೆನ್ನೈ) ಜನಿಸಿದ ಚಿಂಗಲ್‌ಪುಟ್ ದುರೈಕಣ್ಣು ಗೋಪಿನಾಥ್ 1951 ರಲ್ಲಿ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ್ದರು.

ನಂ. 8 ರಲ್ಲಿ ಬ್ಯಾಟಿಂಗ್ ಮಾಡಿದ ಅವರು ತಮ್ಮ ಮೊದಲ ಇನ್ನಿಂಗ್ಸ್‌ನಲ್ಲಿ ಅಜೇಯ 50 ರನ್ ಗಳಿಸಿದರು. ಅದು ಅವರ ಅತ್ಯಧಿಕ ಟೆಸ್ಟ್ ಸ್ಕೋರ್. ಬಳಿಕ ಎರಡನೇ ಇನ್ನಿಂಗ್ಸ್‌ನಲ್ಲಿ 42 ರನ್ ಗಳಿಸಿ ಭಾರತ ಪಂದ್ಯ ಡ್ರಾ ಆಗುವಲ್ಲಿ ಪ್ರಮುಖ ಕೊಡುಗೆ ನೀಡಿದ್ದರು.

ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ತಂಡವನ್ನು ಇನಿಂಗ್ಸ್ ಮತ್ತು ಎಂಟು ರನ್‌ಗಳಿಂದ ಸೋಲಿಸಿದ ಭಾರತ ತನ್ನ ಚೊಚ್ಚಲ ಟೆಸ್ಟ್ ಗೆದ್ದಿತ್ತು. ಆ ಐತಿಹಾಸಿಕ ಪಂದ್ಯದಲ್ಲಿ ಗೋಪಿನಾಥ್ 35 ರನ್ ಹೊಡೆದಿದ್ದರು.

ಭಾರತ ಪರ ಎಂಟು ಟೆಸ್ಟ್ ಪಂದ್ಯಗಳನ್ನಾಡಿದ CD ಗೋಪಿನಾಥ್, ಮದ್ರಾಸ್ ಪರ 83 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದರು. 1958-59 ರಲ್ಲಿ ಮೈಸೂರು ವಿರುದ್ಧ ಅತ್ಯಧಿಕ 234 ರನ್ ಗಳೊಂದಿಗೆ ರಣಜಿಯಲ್ಲಿ 2,349 ರನ್ ಗಳಿಸಿದ್ದರು. ನಂತರ ಅವರು 1955-56 ರಿಂದ 1962-63 ರವರೆಗೆ ಮದ್ರಾಸ್ ತಂಡದ ಕ್ಯಾಪ್ಟನ್ ಆಗಿದ್ದರು. ರಾಷ್ಟ್ರೀಯ ಆಯ್ಕೆಗಾರರಾಗಿ ಸೇವೆ ಸಲ್ಲಿಸಿದರು ಮತ್ತು 1979 ರಲ್ಲಿ ಭಾರತ ತಂಡದ ಇಂಗ್ಲೆಂಡ್ ಪ್ರವಾಸವನ್ನು ನಿರ್ವಹಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೆ ಏರಿದ ಇಂಧನ ದರ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳ; 2 ವಾರಗಳಲ್ಲಿ ರೂ. 7.5 ಏರಿಕೆ, ತೈಲ ಕಂಪನಿಗಳಿಂದ ವಾಹನ ಸವಾರರಿಗೆ ಮತ್ತೆ ಶಾಕ್..!

ನಿತಿನ್ ನಬೀನ್ ಭೇಟಿ ಬಳಿಕ BJP ನಾಯಕತ್ವ ಚರ್ಚೆ ಮತ್ತೆ ಮುನ್ನೆಲೆಗೆ: ವಿಜಯೇಂದ್ರ ಭವಿಷ್ಯ ಕುರಿತು ಹೆಚ್ಚಿದ ಕುತೂಹಲ; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ತೀವ್ರ..!

ಬೆಂಗಳೂರು ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ಗಳೇ ಕಾರಣ? ‘Heat island’ ಪರಿಣಾಮ ಕುರಿತು ತಜ್ಞರ ಗಂಭೀರ ಎಚ್ಚರಿಕೆ..!

SIR ಹೆಸರಿನಲ್ಲಿ ಮತದಾರರ ಹೆಸರು ಡಿಲೀಟ್ ಆರೋಪ; war room ಸ್ಥಾಪಿಸಿದ ಕಾಂಗ್ರೆಸ್, ಎಚ್ಚರ ವಹಿಸುವಂತೆ 'ಕೈ' ನಾಯಕರಿಗೆ ಸಿದ್ದು-ಡಿಕೆಶಿ ಸೂಚನೆ

ಕೇದಾರನಾಥಕ್ಕೆ ಹೋಗ್ತಿದ್ದೀರಾ? ಹಾಗಾದ್ರೆ ದೇವಸ್ಥಾನದ ಹಿಂಭಾಗದಲ್ಲಿರುವ ಈ ಅದ್ಭುತ ಜಾಗಗಳನ್ನ ಮಿಸ್ ಮಾಡ್ಬೇಡಿ..!

SCROLL FOR NEXT