ವೈಭವ್ ಸೂರ್ಯವಂಶಿ online desk
ಕ್ರಿಕೆಟ್

IPL 2026: ವೈಭವ್‌ ಸೂರ್ಯವಂಶಿ ಅಬ್ಬರ; ಆರ್ ಸಿಬಿ ವಿರುದ್ಧ ರಾಜಸ್ಥಾನ್ ಗೆ 6 ವಿಕೆಟ್ ಗಳ ಗೆಲುವು

ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 201 ರನ್​ಗಳಿಸಿತ್ತು. 202 ರನ್ ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ 18 ಓವರ್​ಗಳಲ್ಲಿ 4 ನಷ್ಟಕ್ಕೆ 202 ರನ್ ಗಳಿಸಿ ಗುರಿ ತಲುಪಿತು.

ಗುವಾಹಟಿ: ಗುವಾಹಟಿಯಲ್ಲಿ ನಡೆದ 16 ನೇ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್- ಆರ್ ಸಿಬಿ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಮಿಂಚಿದ್ದು, ರಾಜಸ್ಥಾನ ತಂಡ 6 ವಿಕೆಟ್ ಗಳ ಜಯ ಗಳಿಸಿದೆ.

15ರ ಬಾಲಕ ವೈಭವ್‌ ಸೂರ್ಯವಂಶಿ, ಧ್ರುವ್‌ ಜುರೆಲ್‌ ಅಬ್ಬರದ ನೆರವಿನಿಂದ ರಾಜಸ್ಥಾನ್‌ ರಾಯಲ್ಸ್‌, ಹಾಲಿ ಚಾಂಪಿಯನ್ಸ್‌ ಆರ್‌ಸಿಬಿ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸುವ ಮೂಲಕ ಸತತ 4ನೇ ಪಂದ್ಯ ಗೆದ್ದು, ಗೆಲುವಿನ ಓಟ ಮುಂದುವರಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 201 ರನ್​ಗಳಿಸಿತ್ತು. 202 ರನ್ ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ 18 ಓವರ್​ಗಳಲ್ಲಿ 4 ನಷ್ಟಕ್ಕೆ 202 ರನ್ ಗಳಿಸಿ ಗುರಿ ತಲುಪಿತು. ವೈಭವ್ ಸೂರ್ಯವಂಶಿ 78 ರನ್​ಗಳಿಸಿದರೆ, ಧ್ರುವ್ ಜುರೆಲ್ ಅಜೇಯ 81 ರನ್​ಗಳಿಸಿ ಗೆಲುವಿನ ರೂವಾರಿಗಳಾದರು.

ರಾಜಸ್ಥಾನ್ ರಾಯಲ್ಸ್ ತಂಡದ ಯುವ ಆಟಗಾರ ವೈಭವ್ ಸೂರ್ಯವಂಶಿ ತಮ್ಮ ಅಬ್ಬರದ ಬ್ಯಾಟಿಂಗ್ ನಿಂದ ಐಪಿಎಲ್ 2026 ರಲ್ಲಿ ಎಲ್ಲರ ಗಮನಸೆಳೆದಿದ್ದಾರೆ. ಕೇವಲ 15 ಎಸೆತಗಳಲ್ಲಿ ಅರ್ಧಶತಕ ಗಳಿಸುವ ಮೂಲಕ ದಂತಕಥೆಯ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸದರು. ವೈಭವ್ ಸೂರ್ಯವಂಶಿ 353.33 ಸ್ಟ್ರೈಕ್ ರೇಟ್ ನೊಂದಿಗೆ 78 ರನ್ ಗಳಿಸಿದ್ದನ್ನು ವಿಶ್ಲೇಷಕರು ಆಶ್ಚರ್ಯಚಕಿತರಗಿದ್ದಾರೆ.

ಬ್ಯಾಟಿಂಗ್ ವಿಭಾಗದಲ್ಲಿ ಆರಂಭದಲ್ಲಿ ಆರ್‌ಸಿಬಿ ತಂಡ ಲಯ ಕಳೆದುಕೊಂಡು ಪದೇ ಪದೇ ವಿಕೆಟ್‌ ಕಳೆದುಕೊಂಡಿತು. ಪವರ್‌ಪ್ಲೇನಲ್ಲಿ ಬೆಂಗಳೂರಿನ ಅಗ್ರ ಕ್ರಮಾಂಕ ಕುಸಿಯಿತು. ಸಾಲ್ಟ್ ಮತ್ತು ಪಡಿಕ್ಕಲ್ ನಂತರ ವಿರಾಟ್ ಕೊಹ್ಲಿ ಕೂಡ ಕ್ಲೀನ್‌ ಬೋಲ್ಡ್‌ ಆಗಿ ಔಟಾದರು. ವಿರಾಟ್ ಕೊಹ್ಲಿ 16 ಎಸೆತಗಳಲ್ಲಿ 32 ರನ್‌ಗಳಿಗೆ ಔಟಾದರು, ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ಪಂದ್ಯದಲ್ಲಿ ಟಿಮ್ ಡೇವಿಡ್ ಅತಿ ಬೇಗ ಔಟಾಗಿದ್ದು, ಆರ್‌ಸಿಬಿ ಅಭಿಮಾನಿಗಳಿ ನಿರಾಶೆ ಉಂಟು ಮಾಡಿತ್ತು. ನಾಯಕನ ಇನ್ನಿಂಗ್ಸ್ ಆಡಿದ ರಜತ್ ಪಾಟಿದಾರ್ (63 ರನ್) ಅರ್ಧಶತಕ ಗಳಿಸಿ ತಂಡಕ್ಕೆ ನೆರವಾದರು

ಲೆಬನಾನ್‌ನಲ್ಲಿ ನಾಗರಿಕರ ಸಾವಿನ ಘಟನೆಗಳ ಬಗ್ಗೆ ಭಾರತ ಕಳವಳ; ಇಸ್ರೇಲ್ ಗೆ ತೀವ್ರ ಹಿನ್ನಡೆ!

Hormuz ಮೇಲೆ ಹಾರುತ್ತಿದ್ದ 200 ಮಿಲಿಯನ್ ಡಾಲರ್ ಮೌಲ್ಯದ ಅಮೆರಿಕ ಡ್ರೋನ್ ದಿಢೀರ್ ನಾಪತ್ತೆ; ಯುದ್ಧಕ್ಕೆ ಪ್ರತಿ ದಿನದ US ಖರ್ಚು 3,040 ಕೋಟಿ ರೂ!

ಇರಾನ್ ಜೊತೆಗೆ ನಾಳೆ ಮಹತ್ವದ ಮಾತುಕತೆ: ಇಸ್ಲಾಮಾಬಾದ್‌ಗೆ ತೆರಳುವ ಮುನ್ನಾ ಜೆಡಿ ವ್ಯಾನ್ಸ್ ನೀಡಿದ ವಾರ್ನಿಂಗ್ ಏನು!

ಅಪರಿಚಿತ ದೆವ್ವಕ್ಕಿಂತ ಪರಿಚಿತ ದೆವ್ವವೇ ವಾಸಿ! ಇರಾನ್ ಹೊಸ ಆಡಳಿತ ಹಳೆಯದ್ದಕ್ಕಿಂತ ಕ್ರೂರ: 40 ದಿನಗಳ ಬಳಿಕ ಇಸ್ರೇಲ್ ಹೀಗೆ ಹೇಳಿದ್ದೇಕೆ?

'ಒಳನುಸುಳುವಿಕೆ' ಹೇಳಿಕೆ: ಅಮಿತ್ ಶಾಗೆ ಅಭಿಷೇಕ್ ಬ್ಯಾನರ್ಜಿ ತಿರುಗೇಟು, ರಾಷ್ಟ್ರೀಯ ಭದ್ರತೆ ಲೋಪದ ಪ್ರಶ್ನೆ!

SCROLL FOR NEXT