ವಿರಾಟ್ ಕೊಹ್ಲಿ online desk
ಕ್ರಿಕೆಟ್

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಆರ್ ಸಿಬಿ ತಂಡ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 240 ರನ್ ಗಳಿಸಿ ಮುಂಬೈಗೆ ಗೆಲ್ಲಲು 241 ರನ್ ಗಳ ಬೃಹತ್ ಗುರಿ ನೀಡಿತ್ತು.

ಮುಂಬೈ: ಮುಂಬೈ ನ ವಾಂಖೆಡೆ ಕ್ರಿಕೆಟ್ ಮೈದಾನದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 18 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಆರ್ ಸಿಬಿ ತಂಡ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 240 ರನ್ ಗಳಿಸಿ ಮುಂಬೈಗೆ ಗೆಲ್ಲಲು 241 ರನ್ ಗಳ ಬೃಹತ್ ಗುರಿ ನೀಡಿತ್ತು.

ಆರಂಭದಿಂದಲೂ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಫಿಲ್ ಸಾಲ್ಟ್ ಕೇವಲ 36 ಎಸೆತಗಳಲ್ಲಿ ಆರು ಸಿಕ್ಸರ್ ಮತ್ತು ಆರು ಬೌಂಡರಿ ಸಹಿತ 78 ರನ್ ಕಲೆಹಾಕಿ ಶಾರ್ದೂಲ್ ಠಾಕೂರ್ ಗೆ ವಿಕೆಟ್ ಒಪ್ಪಿಸಿದರು.

ಮತ್ತೊಂದು ಬದಿಯಲ್ಲಿ ಸಮಯೋಚಿತ ಬ್ಯಾಟಿಂಗ್ ನಡೆಸುತ್ತಿದ್ದ ವಿರಾಟ್ ಕೊಹ್ಲಿ ಬಳಿಕ ನಾಯಕ ರಜತ್ ಪಾಟಿದಾರ್ ಜೊತೆಗೂಡಿ ಇನ್ನಿಂಗ್ಸ್ ಕಟ್ಟಿದರು. ಈ ಹಂತದಲ್ಲಿ 38 ಎಸೆತಗಳನ್ನು ಎದುರಿಸಿದ ಕೊಹ್ಲಿ 5 ಬೌಂಡರಿ ಮತ್ತು 1 ಸಿಕ್ಸರ್ ಸಹಿತ ಅರ್ಧಶತಕ (50 ರನ್) ಗಳಿಸಿ ಹಾರ್ದಿಕ್ ಪಾಂಡ್ಯಾಗೆ ವಿಕೆಟ್ ಒಪ್ಪಿಸಿದರು.

ಬೃಹತ್ ರನ್ ಗುರಿ ಬೆನ್ನಟ್ಟಿದ ಮುಂಬೈ ತಂಡ, ರಯಾನ್ ರಿಕಲ್ಟನ್ 22 ಎಸೆತಗಳಲ್ಲಿ 37 ರನ್ ಗಳಿಸಿದರೆ, ರೋಹಿತ್ ಶರ್ಮಾ 13 ಎಸೆತಗಳಲ್ಲಿ 19 ರನ್ ಗಳಿಸಿ ರಿಟೈರ್ಡ್ ಹರ್ಟ್ ಆದರು. ಬಳಿಕ ಸೂರ್ಯಕುಮಾರ್ ಯಾದವ್ 22 ಎಸೆತಗಳಲ್ಲಿ 33 ರನ್ ಗಳಿಸಿದರಾದರೂ ತಿಲಕ್ ವರ್ಮಾ ಒಂದು ರನ್ ಗಳಿಸಿ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು. ಬಳಿಕ ಹಾರ್ದಿಕ್ ಪಾಂಡ್ಯ 22 ಎಸೆತಗಳಲ್ಲಿ 40 ರನ್ ಗಳಿಸಿದರೆ, ಶೆರ್ಫೇನ್ ರುದರ್ಫೋರ್ಡ್ 31 ಎಸೆತಗಳಲ್ಲಿ 71 ರನ್ ಗಳಿಸಿದರೂ ಏಕಾಂಗಿ ಹೋರಾಟ ಫಲಿಸಲಿಲ್ಲ. ಅಂತಿಮವಾಗಿ 20 ಓವರ್ ಗಳಲ್ಲಿ ಮುಂಬೈ ತಂಡ 5 ವಿಕೆಟ್ ನಷ್ಟಕ್ಕೆ 222 ರನ್ ಗಳಿಸಿ ಸೋಲೊಪ್ಪಿಕೊಂಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತ್ರಿಶೂರ್‌ನಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ತಮಿಳು ನಾಡಿನ 8 ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಸಾವು; Video

ಮತ್ತೊಂದು ಮಹಾಯುದ್ಧದ ಭೀತಿ: ಇರಾನ್‌ನ 'Pickaxe Mountain' ಧ್ವಂಸಕ್ಕೆ ಅಮೆರಿಕ ಸ್ಕೆಚ್, "ಶೀಘ್ರದಲ್ಲೇ ದಾಳಿ" ಎಂದ ಡೊನಾಲ್ಡ್ ಟ್ರಂಪ್..!

China ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅಮೆರಿಕಕ್ಕೆ; ಸೆ.24ರಂದು ಶ್ವೇತಭವನದಲ್ಲಿ ಔತಣಕೂಟ, Iran ಸಂಘರ್ಷವನ್ನು ‘ಸಣ್ಣ ವಿಚಾರ’ ಎಂದ Trump

ಒಬ್ಬ ರಾಜಿನಾಮೆ ಕೊಟ್ಟರೇನು? ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ; ಸಿಎಂ ಡಿಕೆ ಶಿವಕುಮಾರ್

Park Billiಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಕ್ಷೇಪ: ಸ್ಪಷ್ಟನೆ ಕೋರಿ ಸರ್ಕಾರಕ್ಕೆ ವಾಪಸ್..!