ರಿಷಭ್ ಪಂತ್ 
ಕ್ರಿಕೆಟ್

ಪಂಜಾಬ್ ಕಿಂಗ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್‌ಗೆ ಹೀನಾಯ ಸೋಲು; LSG ನಾಯಕ ರಿಷಭ್ ಪಂತ್ ಹಳೇ ಹೇಳಿಕೆ ವೈರಲ್

ಪಂದ್ಯದ ನಂತರದ ಪ್ರಸ್ತುತಿಯಲ್ಲಿ ಮಾತನಾಡಿದ ಎಲ್‌ಎಸ್‌ಜಿ ನಾಯಕ ರಿಷಭ್ ಪಂತ್, ಈ ಆವೃತ್ತಿಯಲ್ಲಿ ಆಡುತ್ತಿರುವ ಆಕ್ರಮಣಕಾರಿ ಕ್ರಿಕೆಟ್‌ಗಾಗಿ ಪಂಜಾಬ್ ಕಿಂಗ್ಸ್ ಅನ್ನು ಶ್ಲಾಘಿಸಿದರು.

ಐಪಿಎಲ್ 2026ರಲ್ಲಿ ಪಂಜಾಬ್ ಕಿಂಗ್ಸ್‌ ತಂಡವು ತನ್ನ ಅಜೇಯ ಓಟವನ್ನು ಮುಂದುವರಿಸಿದ್ದು, ಭಾನುವಾರ ಮುಲ್ಲನ್‌ಪುರದಲ್ಲಿ ನಡೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವನ್ನು 54 ರನ್‌ಗಳಿಂದ ಸೋಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಿಬಿಕೆಎಸ್ ಆರಂಭದಲ್ಲಿಯೇ ಪ್ರಭ್ಸಿಮ್ರನ್ ಸಿಂಗ್ ಅವರ ವಿಕೆಟ್ ಕಳೆದುಕೊಂಡಿತು. ನಂತರ ಪ್ರಿಯಾಂಶ್ ಆರ್ಯ (93) ಮತ್ತು ಕೂಪರ್ ಕೊನೊಲಿ (87) 182 ರನ್‌ಗಳ ಭರ್ಜರಿ ಜೊತೆಯಾಟವು, ಎಲ್‌ಎಸ್‌ಜಿ ಬೌಲರ್‌ಗಳನ್ನು ತರಾಟೆಗೆ ತೆಗೆದುಕೊಂಡಿತು. ಆತಿಥೇಯರು 20ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ ಬರೋಬ್ಬರಿ 254 ರನ್ ಕಲೆಹಾಕಿದರು. ಇದಕ್ಕೆ ಉತ್ತರವಾಗಿ, ಲಕ್ನೋ ಸೂಪರ್ ಜೈಂಟ್ಸ್ ಹೋರಾಟ ನೀಡಲು ಪ್ರಯತ್ನಿಸಿತಾದರೂ ಐದು ವಿಕೆಟ್ ಕಳೆದುಕೊಂಡು ಕೇವಲ 200 ರನ್ ಗಳಿಸಲಷ್ಟೇ ಶಕ್ತವಾಯಿತು. ಅಂತಿಮವಾಗಿ 54 ರನ್‌ಗಳಿಂದ ಸೋತಿತು.

ಪಂದ್ಯದ ನಂತರದ ಪ್ರಸ್ತುತಿಯಲ್ಲಿ ಮಾತನಾಡಿದ ಎಲ್‌ಎಸ್‌ಜಿ ನಾಯಕ ರಿಷಭ್ ಪಂತ್, ಈ ಆವೃತ್ತಿಯಲ್ಲಿ ಆಡುತ್ತಿರುವ ಆಕ್ರಮಣಕಾರಿ ಕ್ರಿಕೆಟ್‌ಗಾಗಿ ಪಂಜಾಬ್ ಕಿಂಗ್ಸ್ ಅನ್ನು ಶ್ಲಾಘಿಸಿದರು.

'ಖಂಡಿತವಾಗಿಯೂ, ನಾವು ನಮ್ಮ ತಂಡವನ್ನು ನಂಬುತ್ತೇವೆ. ಆದರೆ ಅದೇ ಸಮಯದಲ್ಲಿ, ಎದುರಾಳಿಗಳು ಚೆನ್ನಾಗಿ ಆಡುತ್ತಿರುವಾಗ, ಪಂಜಾಬ್ ಕಿಂಗ್ಸ್ ತಂಡವು ಉತ್ತಮ, ಕಠಿಣ ಕ್ರಿಕೆಟ್ ಆಡಿದ್ದಕ್ಕಾಗಿ ನೀವು ಅವರಿಗೂ ಕ್ರೆಡಿಟ್ ನೀಡಬೇಕು' ಎಂದು ಪಂತ್ ಹೇಳಿದರು.

LSG ತಂಡವು ಭಾರಿ ಸೋಲನ್ನು ಅನುಭವಿಸುತ್ತಿದ್ದಂತೆ, ಪಂತ್ ಅವರ ಹಳೆಯ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ಮತ್ತೆ ಕಾಣಿಸಿಕೊಂಡು, ವೈರಲ್ ಆಗಿದೆ.

ಐಪಿಎಲ್ 2025ರ ಮೆಗಾ ಹರಾಜಿನಲ್ಲಿ LSG ಪಂತ್ ಅವರನ್ನು ₹27 ಕೋಟಿಗೆ ಖರೀದಿಸಿದ ನಂತರ ಸಂದರ್ಶನವೊಂದರಲ್ಲಿ, ಅವರು ಯಾವ ಒಂದು ತಂಡಕ್ಕೆ ಬಿಕರಿಯಾಗಲು ಬಯಸುವುದಿಲ್ಲ ಎಂದು ಕೇಳಲಾಯಿತು.

'ನಾನು ಹೋಗಲು ಇಷ್ಟಪಡದ ಒಂದೇ ಒಂದು ತಂಡವಿದೆ. ಅದು ಪಂಜಾಬ್. ಅವರ ಬಳಿ ಗರಿಷ್ಠ ಹಣವಿತ್ತು ಮತ್ತು ಬೇರೆ ಯಾವುದೇ ತಂಡ ಅವರನ್ನು ಮೀರಿಸುತ್ತಿರಲಿಲ್ಲವಾದ್ದರಿಂದ ನನಗೆ ಭಯವಾಗಿತ್ತು. ಅವರು ಶ್ರೇಯಸ್‌ ಅಯ್ಯರ್ ಅವರನ್ನು ಆಯ್ಕೆ ಮಾಡಿಕೊಂಡಾಗ, ಅವರು ನನ್ನ ಹಿಂದೆ ಹೋಗುವುದಿಲ್ಲ ಎಂದು ನನಗೆ ಸ್ವಲ್ಪ ಸಮಾಧಾನವಾಯಿತು' ಎಂದು ಪಂತ್ ಆ ಸಮಯದಲ್ಲಿ ಹೇಳಿದ್ದರು.

ಈಮಧ್ಯೆ, ಡ್ರೆಸ್ಸಿಂಗ್ ಕೋಣೆಯೊಳಗೆ ನಡೆದ ಹಗುರವಾದ ಸಿಕ್ಸ್‌ ಹೊಡೆಯುವ ಸ್ಪರ್ಧೆಯು ಪಂಜಾಬ್‌ನ ಆಕ್ರಮಣಕಾರಿ ಬ್ಯಾಟಿಂಗ್‌ಗೆ ಪ್ರಮುಖ ಕಾರಣವಾಗಿದೆ ಎಂದು ಪಿಬಿಕೆಎಸ್ ನಾಯಕ ಶ್ರೇಯಸ್ ಅಯ್ಯರ್ ಬಹಿರಂಗಪಡಿಸಿದರು. ಐಪಿಎಲ್ 2026ರಲ್ಲಿ ತಮ್ಮ ಪ್ರಾಬಲ್ಯವನ್ನು ವಿಸ್ತರಿಸುವ ಮೂಲಕ ಟೇಬಲ್-ಟಾಪರ್‌ ಆಗಿರುವ ಪಂಜಾಬ್ ಈ ಆವೃತ್ತಿಯಲ್ಲಿ ಟ್ರೋಫಿ ಮೇಲೆ ಕಣ್ಣಿಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ