ಮುಂಬೈಗೆ ಭರ್ಜರಿ ಜಯ 
ಕ್ರಿಕೆಟ್

IPL 2026: GT ವಿರುದ್ಧ MI ಭರ್ಜರಿ ಜಯ, ತವರಿನಲ್ಲೇ ರನ್ ಗಳಿಸಲು ತಿಣುಕಾಡಿದ Shubman Gill ಪಡೆ!

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟನ್ಸ್ 99 ರನ್ ಗಳ ಹೀನಾಯ ಸೋಲುಕಂಡಿದೆ.

ಅಹ್ಮದಾಬಾದ್: ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 99 ರನ್ ಗಳ ಅಮೋಘ ಜಯಗಳಿಸಿದೆ.

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟನ್ಸ್ 99 ರನ್ ಗಳ ಹೀನಾಯ ಸೋಲುಕಂಡಿದೆ.

ಮುಂಬೈ ನೀಡಿದ್ದ 200 ರನ್ ಗಳ ಬೃಹತ್ ಗುರಿ ಬೆನ್ನು ಹತ್ತಿದ ಗುಜರಾತ್ ತಂಡ 15.5 ಓವರ್ ನಲ್ಲಿ ಕೇವಲ 100 ರನ್ ಗಳಿಸಿ ಆಲೌಟ್ ಆಯಿತು.

ರನ್ ಗಳಿಸಲು ತಿಣುಕಾಡಿದ ಗುಜರಾತ್

ಮುಂಬೈ ನೀಡಿದ 200 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಗುಜರಾತ್ ಆರಂಭದಿಂದಲೇ ರನ್ ಗಳಿಸಲು ತಿಣುಕಾಡಿತು. ಆರಂಭಿಕ ಆಟಗಾರ ಸಾಯಿ ಸುದರ್ಶನ್ ಶೂನ್ಯಕ್ಕೆ ಔಟಾಗಿ ಗುಜರಾತ್ ಗೆ ಆರಂಭಿಕ ಆಘಾತ ನೀಡಿದರು. ಬಳಿಕ ಗುಜರಾತ್ ಯಾವೊಬ್ಬ ಆಟಗಾರ ಕೂಡ ಕ್ರೀಸ್ ನಲ್ಲಿ ಗಟ್ಟಿಯಾಗಿ ನಿಲ್ಲಲಿಲ್ಲ.

ಗುಜರಾತ್ ಬ್ಯಾಟಿಂಗ್ ಎಷ್ಟು ಕಳಪೆಯಾಗಿತ್ತು ಎಂದರೆ ವಾಷಿಂಗ್ಟನ್ ಸುಂದರ್ ಗಳಿಸಿದ 26 ರನ್ ಗಳೇ ಗುಜರಾತ್ ಪರ ಆಟಗಾರನೊಬ್ಬ ಗಳಿಸಿದ ವೈಯುಕ್ತಿಕ ಗರಿಷ್ಠ ಸ್ಕೋರ್ ಆಗಿತ್ತು.

ನಾಯಕ ಶುಭ್ ಮನ್ ಗಿಲ್ (14), ಜಾಸ್ ಬಟ್ಲರ್ (5), ಗ್ಲೇನ್ ಫಿಲಿಪ್ಸ್ (6), ರಾಹುಲ್ ತೆವಾಟಿಯಾ (8), ರಷೀದ್ ಖಾನ್ (4), ಶಾರುಖ್ ಖಾನ್ (17), ಕಗಿಸೋ ರಬಾಡಾ (12) ಮತ್ತು ಮಹಮದ್ ಸಿರಾಜ್ (0) ರನ್ ಗಳಿಸುವಲ್ಲಿ ಸಂಪೂರ್ಣ ವಿಫಲರಾದರು. ಪರಿಣಾಮ ಮುಂಬೈ ಎದುರು 99 ರನ್ ಗಳ ಹೀನಾಯ ಸೋಲು ಕಂಡಿತು.

ಮುಂಬೈ ಪರ ಅಶ್ವನಿ ಕುಮಾರ್ 4 ವಿಕೆಟ್ ಕಬಳಿಸಿದರೆ, ಘಜನ್ಱರ್, ಮಿಚೆಲ್ ಸ್ಯಾಂಥ್ನರ್ ತಲಾ 2 ವಿಕೆಟ್ ಪಡೆದರು. ಮುಂಬೈಗೆ ಸಕಾರಾತ್ಮಕ ಅಂಶ ಎಂದರೆ ಇಷ್ಟು ದಿನ ವಿಕೆಟ್ ಇಲ್ಲದೇ ಬಳಲುತ್ತಿದ್ದ ಜಸ್ ಪ್ರೀತ್ ಬುಮ್ರಾ ಇಂದು ಸಾಯಿ ಸುದರ್ಶನ್ ರ ವಿಕೆಟ್ ಪಡೆದು ತಮ್ಮ ವಿಕೆಟ್ ಕೊರತೆ ನೀಗಿಸಿಕೊಂಡರು. ನಾಯಕ ಹಾರ್ದಿಕ್ ಪಾಂಡ್ಯಾ ಕೂಡ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತುಕತೆ ವಿಫಲವಾದರೆ ಇರಾನ್ "ಸರ್ವನಾಶ": ಟ್ರಂಪ್ ಬೆದರಿಕೆ; ಲೆಬನಾನ್‌ನಲ್ಲಿ ಹೆಚ್ಚಿನ ಸರ್ಜಿಕಲ್ ಸ್ಟ್ರೈಕ್ ಗೆ ಕರೆ!

ಭಾರತದ ಮೇಜರ್ ಅಭಿಲಾಷಾ ಬರಾಕ್ ಗೆ ವಿಶ್ವಸಂಸ್ಥೆಯಿಂದ ಮಿಲಿಟರಿ ಜೆಂಡರ್ ಅಡ್ವೊಕೇಟ್ ಪ್ರಶಸ್ತಿ; ಮೋದಿ ಅಭಿನಂದನೆ!

ಹೀನಾ ಬಂಗಾರದ ಬೇಟೆ: 40 ಚಿನ್ನದ ಪದಕಗಳೊಂದಿಗೆ ವಿಶ್ವ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲಿ ಅಗ್ರಸ್ಥಾನದಲ್ಲಿ ಭಾರತ!

ಮಡಿಕೇರಿ: ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ಮೈಸೂರಿನ ಯುವತಿ ಹೋಂ ಸ್ಟೇನಲ್ಲಿ ಅನುಮಾನಾಸ್ಪದ ಸಾವು

DKS ಸಿಎಂ ಆದ ಬೆನ್ನಲ್ಲೇ ಹಲವು ಅಧಿಕಾರಿಗಳ ವರ್ಗ: ಧರ್ಮಸ್ಥಳ ಕೇಸ್ ತನಿಖೆ ನಡೆಸಿದ್ದ ಪ್ರಣಬ್ ಮೊಹಂತಿ CID ಡಿಜಿಪಿಯಾಗಿ ನೇಮಕ!

SCROLL FOR NEXT