ನಾಂಡ್ರೆ ಬರ್ಗರ್‌ 
ಕ್ರಿಕೆಟ್

LSG vs RR ಪಂದ್ಯದ ವೇಳೆ 'ಆಕ್ರಮಣಕಾರಿ ಸಂಭ್ರಮಾಚರಣೆ': ರಾಜಸ್ಥಾನ್ ರಾಯಲ್ಸ್ ವೇಗಿ ನಾಂಡ್ರೆ ಬರ್ಗರ್‌ಗೆ ಶಿಕ್ಷೆ!

ಎಲ್‌ಎಸ್‌ಜಿ vs ಆರ್‌ಆರ್ ಪಂದ್ಯದಲ್ಲಿ ರಿಷಭ್ ಪಂತ್ ಅವರ ಅಮೂಲ್ಯ ವಿಕೆಟ್ ಪಡೆದ ಬರ್ಗರ್ ಅತಿಯಾಗಿ ಆಚರಿಸಿದಂತೆ ತೋರುತ್ತಿತ್ತು.

ಬುಧವಾರ ರಾತ್ರಿ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ತಂಡವು ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ವಿರುದ್ಧ ಅದ್ಭುತ ಜಯ ಸಾಧಿಸಿತು. ರವೀಂದ್ರ ಜಡೇಜಾ ತಮ್ಮ ಆಲ್‌ರೌಂಡ್ ಪ್ರದರ್ಶನಕ್ಕಾಗಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರೆ, ವಿದೇಶಿ ವೇಗಿಗಳಾದ ನಾಂಡ್ರೆ ಬರ್ಗರ್ ಮತ್ತು ಜೋಫ್ರಾ ಆರ್ಚರ್ ಎಲ್‌ಎಸ್‌ಜಿ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿಹಾಕುವ ಮೂಲಕ ತಂಡದ ಗೆಲುವಿಗೆ ಕಾರಣರಾದರು. ಆದಾಗ್ಯೂ, ಪವರ್‌ಪ್ಲೇನಲ್ಲಿ 1/15 ಪಡೆದ ಎಡಗೈ ಸೀಮರ್‌ ಅನಗತ್ಯವಾಗಿ ಸುದ್ದಿಯಾಗಿದ್ದು, ಶಿಕ್ಷೆಗೆ ಗುರಿಯಾಗಿದ್ದಾರೆ.

ಎಲ್‌ಎಸ್‌ಜಿ vs ಆರ್‌ಆರ್ ಪಂದ್ಯದಲ್ಲಿ ರಿಷಭ್ ಪಂತ್ ಅವರ ಅಮೂಲ್ಯ ವಿಕೆಟ್ ಪಡೆದ ಬರ್ಗರ್ ಅತಿಯಾಗಿ ಆಚರಿಸಿದಂತೆ ತೋರುತ್ತಿತ್ತು. ಹೀಗೆ ಮಾಡಿದ್ದದರಿಂದ, ಅವರ ಪಂದ್ಯ ಶುಲ್ಕದ ಶೇ 10 ರಷ್ಟು ದಂಡ ವಿಧಿಸಲಾಗಿದೆ. ಈಮಧ್ಯೆ, ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಅವರಿಗೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿದೆ.

ಎದುರಾಳಿ ಆಟಗಾರನಿಂದ ಕೋಪ ಅಥವಾ ಆಕ್ರಮಣಕಾರಿ ಪ್ರತಿಕ್ರಿಯೆಯನ್ನು ಉಂಟುಮಾಡುವ ಭಾಷೆ, ಕ್ರಿಯೆಗಳು ಅಥವಾ ಸನ್ನೆಗಳನ್ನು ಬಳಸುವುದಕ್ಕೆ ಸಂಬಂಧಿಸಿದ ಲೆವೆಲ್ 1 ಅಪರಾಧವನ್ನು ಬರ್ಗರ್ ಒಪ್ಪಿಕೊಂಡಿದ್ದಾರೆ. ಪಂದ್ಯದ ನಂತರ ದಕ್ಷಿಣ ಆಫ್ರಿಕಾದ ವೇಗಿಗೆ ಶಿಕ್ಷೆ ನೀಡಲಾಗಿದೆ.

'ಪಂದ್ಯದ ವೇಳೆ ಇನ್ನೊಬ್ಬ ಆಟಗಾರನನ್ನು ಪ್ರಚೋದಿಸುವ ಭಾಷೆ, ಕ್ರಿಯೆಗಳು ಅಥವಾ ಸನ್ನೆಗಳನ್ನು ಬಳಸುವುದಕ್ಕೆ ಸಂಬಂಧಿಸಿದಂತೆ - ಆರ್ಟಿಕಲ್ 2.5ರ ಅಡಿಯಲ್ಲಿ ಲೆವೆಲ್ 1 ಅಪರಾಧವನ್ನು ನಾಂಡ್ರೆ ಬರ್ಗರ್ ಒಪ್ಪಿಕೊಂಡಿದ್ದಾರೆ ಮತ್ತು ಪಂದ್ಯದ ರೆಫರಿಯ ಶಿಕ್ಷೆಯನ್ನು ಸ್ವೀಕರಿಸಿದ್ದಾರೆ. ನೀತಿ ಸಂಹಿತೆಯ ಲೆವೆಲ್ 1 ಉಲ್ಲಂಘನೆಗಾಗಿ, ಪಂದ್ಯದ ರೆಫರಿಯ ನಿರ್ಧಾರವು ಅಂತಿಮ ಮತ್ತು ಬದ್ಧವಾಗಿರುತ್ತದೆ' ಎಂದು ಐಪಿಎಲ್‌ನ ಮಾಧ್ಯಮ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Parliament Monsoon Session: ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ತೀವ್ರ ಗದ್ದಲ, ಲೋಕಸಭೆ-ರಾಜ್ಯಸಭೆ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ..!

ಮೇಕೆದಾಟು ಯೋಜನೆಗೆ ಸಿಕ್ಕಿತು ಕೇಂದ್ರದ ಬಲ; ಕರ್ನಾಟಕಕ್ಕೆ ಕಾನೂನುಬದ್ಧ ಹಕ್ಕಿದೆ, ತಮಿಳುನಾಡಿನ ಸಮ್ಮತಿ ಅಗತ್ಯವೇ ಇಲ್ಲ ಎಂದ ಜಲಶಕ್ತಿ ಸಚಿವಾಲಯ

ಮರಳು ಮಾಫಿಯಾ ಹೆಡೆಮುರಿ ಕಟ್ಟಲು ಸರ್ಕಾರ ನಿರ್ಧಾರ; ಗೂಂಡಾ ಕಾಯ್ದೆ ಅಸ್ತ್ರ ಪ್ರಯೋಗಕ್ಕೆ ಮುಂದು, ಕಣ್ಮುಚ್ಚಿ ಕೂರುವ ಪೊಲೀಸರಿಗೂ ತಟ್ಟಲಿದೆ ಬಿಸಿ..!

VB-G RAM G ಯೋಜನೆಗೆ ಹಣದ ಕೊರತೆಯೇ ಇಲ್ಲ, ಗ್ರಾಮೀಣ ಉದ್ಯೋಗಕ್ಕೆ 2,900 ಕೋಟಿ ರೂ. ಬಿಡುಗಡೆ: ರಾಜ್ಯ ಸರ್ಕಾರ

ಮೇಕೆದಾಟು ಯೋಜನೆಗೆ ಸಮ್ಮತಿ ಅಗತ್ಯವೇ ಇಲ್ಲ: ಕರ್ನಾಟಕದ ಹಕ್ಕು ಪುನರುಚ್ಚರಿಸಿದ ಕೇಂದ್ರ ಸರ್ಕಾರ ಡಿಕೆಶಿ ಧನ್ಯವಾದ