ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ 
ಕ್ರಿಕೆಟ್

ವಿರಾಟ್ ಕೊಹ್ಲಿ ಸಿಕ್ಸರ್ ಬಾರಿಸುತ್ತಿದ್ದಂತೆಯೇ ಕುಳಿತ್ತಲೇ ಕುಣಿದು ಕುಪ್ಪಳಿಸಿದ ಅನುಷ್ಕಾ ಶರ್ಮಾ! ನೆಟ್ಟಿಗರು ಏನಾಂತರೇ ಗೊತ್ತಾ? Video

ಗುಜರಾತ್ ನೀಡಿದ 206 ರನ್ ಗಳ ಗುರಿ ಬೆನ್ನಟ್ಟಿದ್ದ ಆರ್‌ಸಿಬಿ ಜಾಕೋಬ್ ಬೆಥೆಲ್ ಅವರನ್ನು ಬೇಗನೆ ಕಳೆದುಕೊಂಡಿತು. ಈ ಹಂತದಲ್ಲಿ ದೇವದತ್ ಪಡಿಕ್ಕಲ್, ಕೊಹ್ಲಿ ಜೊತೆ ಸೇರುತ್ತಿದ್ದಂತೆ ಆಟದ ಗತಿ ಬದಲಾಯಿತು.

ಬೆಂಗಳೂರು: ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ಆರ್ ಸಿಬಿ ಗುಜರಾತ್ ನೀಡಿದ ಬೃಹತ್ ಮೊತ್ತವನ್ನು ಯಶಸ್ವಿಯಾಗಿ ಚೇಸ್ ಮಾಡಿ ಗೆಲುವು ದಾಖಲಿಸಿದೆ.

ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ ಸಂಭ್ರಮಿಸಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡಿದೆ.ಇವರಿಬ್ಬರ ನಡುವಿನ ಪ್ರೀತಿ, ಒಬ್ಬರಿಗೊಬ್ಬರು ಬೆನ್ನೆಲುವಾಗಿ ನಿಲ್ಲುವುದು, ಪಂದ್ಯದಲ್ಲಿ ಹುರಿದುಂಬಿಸುವುದು, ಸಂಗಾತಿಯ ಸಾಧನೆ ಕಂಡು ಸಂತೋಷಪಡುವುದನ್ನು ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

ಹೌದು. ಗುಜರಾತ್ ನೀಡಿದ 206 ರನ್ ಗಳ ಗುರಿ ಬೆನ್ನಟ್ಟಿದ್ದ ಆರ್‌ಸಿಬಿ ಜಾಕೋಬ್ ಬೆಥೆಲ್ ಅವರನ್ನು ಬೇಗನೆ ಕಳೆದುಕೊಂಡಿತು. ಈ ಹಂತದಲ್ಲಿ ದೇವದತ್ ಪಡಿಕ್ಕಲ್, ಕೊಹ್ಲಿ ಜೊತೆ ಸೇರುತ್ತಿದ್ದಂತೆ ಆಟದ ಗತಿ ಬದಲಾಯಿತು. ಈ ಜೋಡಿ ವೇಗವಾಗಿ ಸ್ಕೋರ್ ಹೆಚ್ಚಿಸಿತು. ಏಳು ಓವರ್‌ಗಳಲ್ಲಿ 70 ರನ್ ಗಳಿಗೆ ಕೊಂಡೊಯ್ಯಿತು.

ಈ ಜೋಡಿ ಬೇರ್ಪಡಿಸಲು ತಿಣುಕಾಡಿದ ಗುಜರಾತ್ ಟೈಟಾನ್ಸ್ ನಾಯಕ ಶುಭ್‌ಮನ್ ಗಿಲ್ ರಶೀದ್ ಖಾನ್ ಗೆ ಬೌಲಿಂಗ್ ಕೊಟ್ಟರು. ಆದರೆ ಕೊಹ್ಲಿ ಆ ಎಸೆತವನ್ನು ಬೌಂಡರಿ ಯಾಚೆಗೆ ಅಟ್ಟಿದರು.

ಈ ಶಾಟ್ ಅಭಿಮಾನಿಗಳಿಗೆ ಪುಲ್ ಖುಷಿ ನೀಡಿತು. ಸ್ಟ್ಯಾಂಡ್‌ ನಲ್ಲಿ ಕುಳಿತವರು ಕುಣಿದು ಕುಪ್ಪಳಿಸಿದರು. ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ ಕೂಡಾ ಕುಳಿತ್ತಲೇ ಕುಣಿದು ಕುಪ್ಪಳಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಫಿದಾ ಆಗಿದ್ದಾರೆ.

ಅನುಷ್ಕಾ ಅವರ ಪ್ರತಿಕ್ರಿಯೆ ಈಗ ನಮ್ಮೆಲ್ಲರ ಪ್ರತಿಕ್ರಿಯೆಯಾಗಿದೆ ಎಂದು ಅಭಿಮಾನಿಯೊಬ್ಬರು ಬರೆದುಕೊಂಡಿದ್ದಾರೆ. ಮತ್ತೊಬ್ಬರು "ವಿರಾಟ್‌ನ ಅತಿದೊಡ್ಡ ಚಿಯರ್‌ಲೀಡರ್" ಎಂದು ಬರೆದಿದ್ದಾರೆ. ವಿರುಷ್ಕಾ ಕ್ಷಣಗಳು ಎಂದಿಗೂ ಮಾಸಲ್ಲ ಎಂದು ಮತ್ತೊಬ್ಬರು ಬರೆದಿದ್ದಾರೆ. ಇದಕ್ಕಾಗಿಯೇ ನಾವು ನಮ್ಮ ಇಂಟರ್ನೆಟ್ ಬಿಲ್‌ ಪಾವತಿಸುತ್ತೇವೆ" ಎಂದು ಇನ್ನೊಬ್ಬರು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅರಮನೆಯಂತಾದ 'ಕಾಮನ್​ ಮ್ಯಾನ್'​​ ಕೇಜ್ರಿವಾಲ್​ ನಿವಾಸ: ‘Sheesh Mahal 2’ ಎಂದು BJP ಟೀಕೆ; ಮಾನನಷ್ಟ ಮೊಕದ್ದಮೆ ಎಚ್ಚರಿಕೆ ಕೊಟ್ಟ AAP

ಬೆದರಿಕೆ ರಾಜಕಾರಣದ ವಿರುದ್ಧ ಅಂತಿಮವಾಗಿ ಗೆಲ್ಲುವುದು ನ್ಯಾಯವೇ: ಪವನ್ ಖೇರಾ ಬೆನ್ನಿಗೆ ನಿಂತ ಕಾಂಗ್ರೆಸ್

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಕಾಲೇಜು ಲೈಸೆನ್ಸ್ ರದ್ದು ಮಾಡಿ ದಂಡ ವಿಧಿಸಿ: ಸಿಎಂಗೆ ಬ್ರಾಹ್ಮಣ ಮಹಾಸಭೆ ಪತ್ರ

10 ವರ್ಷಗಳ ಪ್ಲ್ಯಾನ್, 2 ಗಂಟೆಗಳಲ್ಲಿ ಪರಾರಿ: ಕಿಮ್ ಕಪಿಮುಷ್ಠಿಯಿಂದ ತಪ್ಪಿಸಿಕೊಂಡ ಫ್ಯಾಮಿಲಿ, ವಿಶ್ವದ ಗಮನ ಸೆಳೆದ ಗ್ರೇಟ್ ಎಸ್ಕೇಪ್ ಸ್ಟೋರಿ..!

AAP ತೊರೆದು ಬಿಜೆಪಿ ಸೇರಿದ 7 ಸಂಸದರು, ಮೇಲ್ಮನೆಯಲ್ಲಿ ಬಲ ಹೆಚ್ಚಿಸಿಕೊಂಡ NDA: ಮೂರನೇ ಎರಡು ಬಹುಮತಕ್ಕೆ ಕೇವಲ 17 ಸೀಟು ಬಾಕಿ

SCROLL FOR NEXT