ಸಂಜು ಸ್ಯಾಮ್ಸನ್ ಮಿಂಚಿನ ವಿಕೆಟ್ ಕೀಪಿಂಗ್ 
ಕ್ರಿಕೆಟ್

IPL 2026: MS Dhoniಗೆ ಪರ್ಫೆಕ್ಟ್ ಉತ್ತರಾಧಿಕಾರಿ; ಮಿಂಚಿನ ವೇಗದ ಸ್ಟಂಪಿಂಗ್; ಶುಭ್ ಮನ್ ಗಿಲ್ ಗೆ ನಕ್ಷತ್ರ ತೋರಿಸಿದ Sanju Samson

ಭಾನುವಾರ ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 8 ವಿಕೆಟ್ ಗಳ ಹೀನಾಯ ಸೋಲು ಕಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡ ನಿಗಧಿತ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 158 ರನ್ ಕಲೆಹಾಕಿತ್ತು.

ಚೆನ್ನೈ: ಭಾನುವಾರ ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ತೋರಿದ ನೀರಸ ಪ್ರದರ್ಶನದ ಹೊರತಾಗಿಯೂ ಚೆನ್ನೈ ತಂಡದ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಅದ್ಭುತ ಕ್ಷಣವನ್ನು ತಮ್ಮದಾಗಿಸಿಕೊಂಡರು.

ಭಾನುವಾರ ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 8 ವಿಕೆಟ್ ಗಳ ಹೀನಾಯ ಸೋಲು ಕಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡ ನಿಗಧಿತ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 158 ರನ್ ಕಲೆಹಾಕಿತ್ತು.

ಇದನ್ನು ಬೆನ್ನು ಹತ್ತಿದ ಗುಜರಾತ್ ಟೈಟನ್ಸ್ 16.4 ಓವರ್ ನಲ್ಲಿ 2 ವಿಕೆಟ್ ನಷ್ಟಕ್ಕೆ 162 ರನ್ ಕಲೆಹಾಕಿ 8 ವಿಕೆಟ್ ಅಂತರದಲ್ಲಿ ಜಯಭೇರಿ ಭಾರಿಸಿತು.

ಸಂಜು ಸ್ಯಾಮ್ಸನ್ ಮಿಂಚಿನ ಸ್ಟಂಪಿಂಗ್

ಇನ್ನು ಈ ಪಂದ್ಯದಲ್ಲಿ ಚೆನ್ನೈ ತಂಡ ಹೀನಾಯ ಸೋಲು ಕಂಡಿತಾದರೂ ಸಂಜು ಸ್ಯಾಮ್ಸನ್ ಮಾತ್ರ ತಮ್ಮ ಅದ್ಭುತ ವಿಕೆಟ್ ಕೀಪಿಂಗ್ ಮೂಲಕ ಗಮನ ಸೆಳೆದರು. ಗುಜರಾತ್ ಇನ್ನಿಂಗ್ಸ್ ನ ಏಳನೇ ಓವರ್‌ನಲ್ಲಿ ಸಿಎಸ್‌ಕೆ ಸ್ಪಿನ್ನರ್ ನೂರ್ ಅಹ್ಮದ್ ಎಸೆದ ಚೆಂಡನ್ನು ಗಿಲ್ ಫ್ಲಿಕ್ ಮಾಡಲು ಮುಂದಾದರು. ಈ ವೇಳೆ ಚೆಂಡು ಅವರ ಬ್ಯಾಟ್ ಅನ್ನು ವಂಚಿಸಿ ನೇರವಾಗಿ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಕೈ ಸೇರಿತ್ತು.

ಈ ವೇಳೆ ಸಂಜು ಕೊಂಚವೂ ಕೂಡ ತಡ ಮಾಡದೇ ಮಿಂಚಿನ ವೇಗದಲ್ಲಿ ಬೇಲ್ಸ್ ಎಗರಿಸಿ ಗಿಲ್ ರನ್ನು ಸ್ಟಂಪೌಟ್ ಮಾಡಿದರು. ಬಳಿಕ ಅಂಪೈರ್ ಗಳು ಮೂರನೇ ಅಂಪೈರ್ ಮೊರೆ ಹೋದರೂ ಗಿಲ್ ಕಾಲು ಗಾಳಿಯಲ್ಲಿ ಇದ್ದರಿಂದ ಗಿಲ್ ರನ್ನು ಔಟ್ ಎಂದು ತೀರ್ಪು ನೀಡಲಾಯಿತು.

ಧೋನಿ ನೆನಪಿಸಿದ ಸಂಜು ಸ್ಯಾಮ್ಸನ್

ಇನ್ನು ಇಂದಿನ ತಮ್ಮ ಅದ್ಭುತ ವಿಕೆಟ್ ಕೀಪಿಂಗ್ ಮೂಲಕ ಸಂಜು ಸ್ಯಾಮ್ಸನ್ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ವಿಕೆಟ್ ಕೀಪಿಂಗ್ ದಿನಗಳನ್ನು ನೆನಪಿಸಿದರು.

ಧೋನಿ ಕೂಡ ತಮ್ಮ ವೃತ್ತಿ ಜೀವನದಲ್ಲಿ ಅತ್ಯದ್ಭುತ ವಿಕೆಟ್ ಕೀಪಿಂಗ್ ಮಾಡುವ ಮೂಲಕ ಗಮನ ಸೆಳೆದಿದ್ದರು. ಇಂದು ಸಂಜು ಕೂಡ ಅದೇ ರೀತಿಯ ಮಿಂಚಿನ ವಿಕೆಟ್ ಕೀಪಿಂಗ್ ಮೂಲಕ ಶ್ಲಾಘನೆಗೆ ಪಾತ್ರರಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ