ಪಿಎಸ್ಎಲ್ ಟ್ರೋಫಿ 
ಕ್ರಿಕೆಟ್

PSL 2026: ಪ್ಲೇಆಫ್‌ ಪಂದ್ಯಗಳಿಗೆ ಮುನ್ನ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಪಾಕಿಸ್ತಾನ ಕ್ರಿಕೆಟ್ ಮಂಡಳಿ!

ಆರು ನಗರಗಳಲ್ಲಿ ನಡೆಯಬೇಕಿದ್ದ ಪಿಎಸ್‌ಎಲ್ 11 ಅನ್ನು ಲಾಹೋರ್ ಮತ್ತು ಕರಾಚಿಯಲ್ಲಿ ಮಾತ್ರ ನಡೆಸಬೇಕೆಂದು ಪಿಸಿಬಿ ಮಾರ್ಚ್‌ನಲ್ಲಿ ನಿರ್ಧರಿಸಿತು.

ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್ಎಲ್) ನ ಉಳಿದಿರುವ ನಿರ್ಣಾಯಕ ಪಂದ್ಯಗಳನ್ನು ವೀಕ್ಷಿಸಲು ಅಭಿಮಾನಿಗಳಿಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅವಕಾಶ ನೀಡಿದೆ. ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಅವರು ಪಿಎಸ್ಎಲ್ ಪ್ಲೇಆಫ್ ಪಂದ್ಯಗಳನ್ನು ಮುಚ್ಚಿದ ಬಾಗಿಲುಗಳ ಹಿಂದೆ ಆಡುವುದಿಲ್ಲ. ಅಭಿಮಾನಿಗಳು ಈಗ ಕ್ರೀಡಾಂಗಣಗಳಿಂದ ಪಂದ್ಯ ವೀಕ್ಷಿಸಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಆರು ನಗರಗಳಲ್ಲಿ ನಡೆಯಬೇಕಿದ್ದ ಪಿಎಸ್‌ಎಲ್ 11 ಅನ್ನು ಲಾಹೋರ್ ಮತ್ತು ಕರಾಚಿಯಲ್ಲಿ ಮಾತ್ರ ನಡೆಸಬೇಕೆಂದು ಪಿಸಿಬಿ ಮಾರ್ಚ್‌ನಲ್ಲಿ ನಿರ್ಧರಿಸಿತು. ಇರಾನ್ ಮತ್ತು ಇಸ್ರೇಲ್-ಅಮೆರಿಕ ನಡುವಿನ ಯುದ್ಧದ ವೇಳೆ ದೇಶಕ್ಕೆ ಇಂಧನ ಸಿಗುವುದು ಕಷ್ಟವಾದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಯಿತು. ಇಂಧನ ಉಳಿತಾಯ ಮಾಡುವ ಸಲುವಾಗಿ, ಅಭಿಮಾನಿಗಳು ಪಂದ್ಯಾವಳಿಯ ಲೀಗ್ ಪಂದ್ಯಗಳನ್ನು ವೀಕ್ಷಿಸಲು ಅವಕಾಶ ನೀಡಿರಲಿಲ್ಲ.

'ಪ್ರಧಾನಿ ಶೆಹಬಾಜ್ ಷರೀಫ್ ಅವರೊಂದಿಗೆ ಈಗಷ್ಟೇ ಸಭೆ ನಡೆಸಿದೆ. ಪಿಎಸ್ಎಲ್‌ನ ಮೂರು ಪ್ಲೇಆಫ್ ಪಂದ್ಯಗಳಲ್ಲಿಯೂ ಸಾರ್ವಜನಿಕರ ಹಾಜರಾತಿಗೆ ಅನುಮೋದನೆಯನ್ನು ನಾವು ಪಡೆದುಕೊಂಡಿದ್ದೇವೆ ಎಂದು ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ' ಎಂದು ನಖ್ವಿ ಸೋಮವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಆದಾಗ್ಯೂ, ಸದ್ಯದ ರಾಷ್ಟ್ರೀಯ ಪ್ರಯತ್ನಗಳಿಗೆ ಅನುಗುಣವಾಗಿ, ಅಭಿಮಾನಿಗಳು ಸಾರ್ವಜನಿಕ ಸಾರಿಗೆಯನ್ನು ಬಳಸಲು ಅಥವಾ ಪಂದ್ಯಗಳಿಗೆ ಹಾಜರಾಗುವಾಗ ಇಂಧನ ಬಳಕೆಯನ್ನು ಕಡಿಮೆ ಮಾಡಲು ಪ್ರೋತ್ಸಾಹಿಸಬೇಕು ಎಂಬ ಷರತ್ತು ವಿಧಿಸಿದೆ.

ಕರಾಚಿಯಲ್ಲಿ ನಡೆಯಲಿರುವ ಪೇಶಾವರ್ ಝಲ್ಮಿ vs ಇಸ್ಲಾಮಾಬಾದ್ ಯುನೈಟೆಡ್ ಕ್ವಾಲಿಫೈಯರ್ ಪಂದ್ಯಕ್ಕೆ ಕೇವಲ ಒಂದು ದಿನಕ್ಕೂ ಮೊದಲು ನಖ್ವಿ ಈ ಮಾಹಿತಿ ನೀಡಿದ್ದಾರೆ. ಸದ್ಯ, ಪಿಸಿಬಿಯ ಉನ್ನತ ಅಧಿಕಾರಿಗಳು ಇನ್ನೂ ಟಿಕೆಟ್ ಮತ್ತು ಲಾಜಿಸ್ಟಿಕ್ಸ್ ವಿವರಗಳ ಬಗ್ಗೆ ಯೋಜನೆ ರೂಪಿಸುತ್ತಿದ್ದಾರೆ. ಬುಧವಾರ ಲಾಹೋರ್‌ನಲ್ಲಿ ಎಲಿಮಿನೇಟರ್ 1 ನಡೆಯಲಿದ್ದು, ಮುಲ್ತಾನ್ ಸುಲ್ತಾನ್ಸ್ ತಂಡವು ಹೈದರಾಬಾದ್ ಕಿಂಗ್ಸ್‌ಮೆನ್ ತಂಡವನ್ನು ಎದುರಿಸಲಿದೆ. ಶುಕ್ರವಾರ ಅದೇ ಮೈದಾನದಲ್ಲಿ ಎಲಿಮಿನೇಟರ್ 2 ಪಂದ್ಯ ನಡೆಯಲಿದೆ. ಕ್ವಾಲಿಫೈಯರ್‌ನಲ್ಲಿ ಸೋತ ತಂಡ ಮತ್ತು ಎಲಿಮಿನೇಟರ್ 1 ವಿಜೇತ ತಂಡದ ನಡುವೆ ಪಂದ್ಯ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈಶಾನ್ಯ ರಾಜ್ಯಗಳು 'ಭಾರತದ ಅಷ್ಟಲಕ್ಷ್ಮಿ'ಯರಿದ್ದಂತೆ, 'Act East', 'Act Fast' ನೀತಿಗೆ ಹೆಚ್ಚಿನ ಒತ್ತು: ಪ್ರಧಾನಿ ಮೋದಿ

ಹೆಸರಿನಲ್ಲಿ ಅಹಿಂಸೆ, ಮಾತಿನಲ್ಲಿ ಕನ್ನಡಿಗರಿಗೆ ಹಿಂಸೆ, ಚೇತನ್ ಗೆ ನಿಖಿಲ್ ಖಡಕ್ ತಿರುಗೇಟು!

Delhi Liquor Scam: ನ್ಯಾ.ಸ್ವರ್ಣ ಕಾಂತ ಶರ್ಮಾ ಮುಂದೆ ವಿಚಾರಣೆಗೆ ಹಾಜರಾಗಲ್ಲ: ಕೇಜ್ರಿವಾಲ್ ಬೆನ್ನಲ್ಲೇ ಕೋರ್ಟ್ ಬಹಿಷ್ಕರಿಸಿದ ಸಿಸೋಡಿಯಾ..!

2013-18 ರಲ್ಲಿ ಇದ್ದ ಸಿದ್ದರಾಮಯ್ಯ ಈಗ ಇಲ್ಲ- ಅವರೀಗ ಅಧಿಕಾರ ಬಿಟ್ಟು ಕೊಡೋಕೆ 'ಸಿದ್ಧ'ರಾಮಯ್ಯ: ಕೆ.ಎನ್ ರಾಜಣ್ಣ

ಹಾರ್ಮುಜ್ ಜಲಸಂಧಿ ಮೇಲೆ ಇರಾನ್ ಹಿಡಿತ: ಟೆಹ್ರಾನ್ ಷರತ್ತುಗಳಿಗೆ ‘NO’ ಎಂದ ಅಮೆರಿಕಾ; ಸಂದಿಗ್ಧ ಸ್ಥಿತಿಯಲ್ಲಿ ಶಾಂತಿ ಮಾತುಕತೆ

SCROLL FOR NEXT