ಕ್ರಿಕೆಟ್

IPL 2026: ರಿಕಲ್ಟನ್ ಶತಕ ವ್ಯರ್ಥ; ಮುಂಬೈ ನೀಡಿದ ಟಾರ್ಗೆಟ್ ಧೂಳಿಪಟ, ದಾಖಲೆಯ 249 ರನ್ ಬಾರಿಸಿದ ಗೆದ್ದ SRH!

ಮುಂಬೈ ಇಂಡಿಯನ್ಸ್ 243 ರನ್ ಬಾರಿಸಿದ್ದು ಹೈದರಾಬಾದ್ ಗೆ 244 ರನ್ ಗುರಿ ನೀಡಿತ್ತು. ಈ ಬೃಹತ್ ಮೊತ್ತದ ಗುರಿ ಬೆನ್ನಟ್ಟಿದ ಹೈದರಾಬಾದ್ 8 ಎಸೆತಗಳು ಬಾಕಿ ಇರುವಂತೆ 249 ರನ್ ಬಾರಿಸಿ ಗೆಲುವಿನ ನಗೆ ಬೀರಿತು.

ಮುಂಬೈ: ರಯಾನ್ ರಿಕಲ್ಟನ್ (ಅಜೇಯ 123), ವಿಲ್ ಜ್ಯಾಕ್ಸ್ (46) ಮತ್ತು ಹಾರ್ದಿಕ್ ಪಾಂಡ್ಯ (31) ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡವು ಬುಧವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026 ರ 41 ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಐದು ವಿಕೆಟ್ ನಷ್ಟಕ್ಕೆ 243 ರನ್ ಗಳಿಸಿತು.

ಮುಂಬೈ ಇಂಡಿಯನ್ಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಅಬ್ಬರದ ಬ್ಯಾಟಿಂಗ್ ನಡೆಸಿದ ಮುಂಬೈ ಇಂಡಿಯನ್ಸ್ 243 ರನ್ ಬಾರಿಸಿದ್ದು ಹೈದರಾಬಾದ್ ಗೆ 244 ರನ್ ಗುರಿ ನೀಡಿತ್ತು. ಈ ಬೃಹತ್ ಮೊತ್ತದ ಗುರಿ ಬೆನ್ನಟ್ಟಿದ ಹೈದರಾಬಾದ್ 8 ಎಸೆತಗಳು ಬಾಕಿ ಇರುವಂತೆ 249 ರನ್ ಬಾರಿಸಿ ಗೆಲುವಿನ ನಗೆ ಬೀರಿತು.

ಹೈದರಾಬಾದ್ ಪರ ಅಭಿಷೇಕ್ ಶರ್ಮಾ 45, ಟ್ರಾವಿಸ್ ಹೆಡ್ 76 ರನ್ ಬಾರಿಸಿದರು. ಇಶಾನ್ ಕಿಶನ್ ಡಕೌಟ್ ಆಗಿ ಪೆವಿಲಿಯನ್ ಸೇರಿದರು. ನಂತರ ನಿತೀಶ್ ಕುಮಾರ್ ರೆಡ್ಡಿ 21 ರನ್ ಗಳಿಸಿ ಔಟಾದರು. ಅಂತಿಮವಾಗಿ ಕ್ಲಾಸೆನ್ ಅಜೇಯ 65 ಮತ್ತು ಸಲೀಲ್ ಅರೋರಾ ಅಜೇಯ 30 ರನ್ ಬಾರಿಸಿ ತಂಡಕ್ಕೆ ಗೆಲುವಿನ ನಗೆ ಬೀರಿತು.

ಮುಂಬೈ ತಂಡದ ಆರಂಭಿಕ ಜೋಡಿ ವಿಲ್ ಜ್ಯಾಕ್ಸ್ ಮತ್ತು ರಯಾನ್ ರಿಕೆಲ್ಟನ್ ಮೊದಲ ವಿಕೆಟ್‌ಗೆ 93 ರನ್ ಸೇರಿಸುವ ಮೂಲಕ ಉತ್ತಮ ಆರಂಭವನ್ನು ನೀಡಿದರು. ನಿತೀಶ್ ಕುಮಾರ್ ರೆಡ್ಡಿ ಎಂಟನೇ ಓವರ್‌ನಲ್ಲಿ ಜ್ಯಾಕ್ಸ್ ಅವರನ್ನು ಔಟ್ ಮಾಡುವ ಮೂಲಕ ಜೋಡಿಯನ್ನು ಕೊನೆಗೊಳಿಸಿದರು. ಜ್ಯಾಕ್ಸ್ ತಮ್ಮ 22 ಎಸೆತಗಳಲ್ಲಿ 46 ರನ್ ಗಳಿಸಿ ಐದು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳನ್ನು ಬಾರಿಸಿದರು. ಮುಂದಿನ ಓವರ್‌ನಲ್ಲಿಯೇ ಇಶಾನ್ ಮಾಲಿಂಗ ಸೂರ್ಯಕುಮಾರ್ ಯಾದವ್ (5) ಅವರನ್ನು ಔಟ್ ಮಾಡಿದರು. ನಮನ್ ಧೀರ್ 17 ಎಸೆತಗಳಲ್ಲಿ ಮೂರು ಬೌಂಡರಿಗಳ ಸಹಾಯದಿಂದ 22 ರನ್ ಗಳಿಸಿದರು. ಏತನ್ಮಧ್ಯೆ, ರಯಾನ್ ರಿಕಲ್ಟನ್ 44 ಎಸೆತಗಳಲ್ಲಿ ಶತಕ ಗಳಿಸಿದರು. ಇದು ಮುಂಬೈ ಇಂಡಿಯನ್ಸ್ ಪರ ಅತ್ಯಂತ ವೇಗದ ಶತಕವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೌರಿಂಗ್ ಆಸ್ಪತ್ರೆ ದುರಂತ: ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಷಣೆ

ಬಾಂಗ್ಲಾದೇಶ ಸರ್ಕಾರ ದೊಡ್ಡ ತಪ್ಪು ಮಾಡಿದೆ... ಟಿ20 ವಿಶ್ವಕಪ್ ಬಗ್ಗೆ ಶಕೀಬ್ ಅಲ್ ಹಸನ್ 'ಸ್ಫೋಟಕ ಹೇಳಿಕೆ'!

IPL 2026: 'ಬ್ಯಾಟಲ್ಲಿ AI Chip ಇದೆ' ಎಂದ ಪಾಕಿಸ್ತಾನದ Nouman Niaz ಗೆ ಬಟ್ಟೆ ಸುತ್ತಿ ಹೊಡೆದ ವೈಭವ್ ಸೂರ್ಯವಂಶಿ

Exit polls: ದೀದಿಗೆ ಶಾಕ್; BJP ತೆಕ್ಕೆಗೆ ಬಂಗಾಳ; ಅಸ್ಸಾಂನಲ್ಲೂ ಕಮಲ ಮ್ಯಾಜಿಕ್!

ಕೇಂದ್ರ ಪಡೆಗಳಿಂದ ಮತದಾರರ ಮೇಲೆ ಹಲ್ಲೆ; ವೃದ್ಧ ಸಾವು- ಅಭಿಷೇಕ್ ಬ್ಯಾನರ್ಜಿ ಆರೋಪ

SCROLL FOR NEXT