ಅಭಿಷೇಕ್ ಪೊರೆಲ್ 
ಕ್ರಿಕೆಟ್

ಕರ್ನಾಟಕದ ವೈದ್ಯಕೀಯ ವಿದ್ಯಾರ್ಥಿನಿ ದೂರಿನ ಮೇರೆಗೆ ಕ್ರಿಕೆಟಿಗ ಅಭಿಷೇಕ್ ಪೊರೆಲ್ ಬಂಧನ: ವಿಚಾರಣೆ ಮುಂದೂಡಿದ ಕಲ್ಕತ್ತಾ ಹೈಕೋರ್ಟ್!

ದೂರಿನ ಪ್ರಕಾರ, ಸುಮಾರು ಒಂದೂವರೆ ವರ್ಷದ ಹಿಂದೆ ಇವರಿಬ್ಬರ ನಡುವೆ ವಿವಾದವೊಂದು ಉಂಟಾಗಿ ಅದು ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತಾದರೂ, ಆ ಸಮಯದಲ್ಲಿ ಯಾವುದೇ ದೂರು ದಾಖಲಾಗಿರಲಿಲ್ಲ.

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) 'ಡೆಲ್ಲಿ ಕ್ಯಾಪಿಟಲ್ಸ್' ತಂಡದ ಪರ ಆಡುವ ಬಂಗಾಳದ ಕ್ರಿಕೆಟಿಗ ಅಭಿಷೇಕ್ ಪೊರೆಲ್ ಅವರನ್ನು ಅತ್ಯಾಚಾರ, ಹಲ್ಲೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪಗಳ ಮೇಲೆ ಹೂಗ್ಲಿ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಮದುವೆಯಾಗುವುದಾಗಿ ಭರವಸೆ ನೀಡಿ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದರು ಎಂದು ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಕ್ರಿಕೆಟಿಗನನ್ನು ಬಂಧಿಸಲಾಗಿದೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದ್ದು, ಅಧಿಕಾರಿಗಳು ಮಂಗಳವಾರ ಈ ವಿಷಯವನ್ನು ತಿಳಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 69 ಸೇರಿದಂತೆ ವಿವಿಧ ನಿಬಂಧನೆಗಳು ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ನಂತರ, ಸೋಮವಾರ ತಡರಾತ್ರಿ ಪೊಲೀಸರು ಕ್ರಿಕೆಟಿಗನನ್ನು ಬಂಧಿಸಿದರು.

ಇತ್ತೀಚಿನ ಬೆಳವಣಿಗೆಯಲ್ಲಿ, ಕಲ್ಕತ್ತಾ ಹೈಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 14ರವರೆಗೆ ಮುಂದೂಡಿದೆ. ಪೊಲೀಸ್ ತನಿಖೆಯನ್ನು ಮುಂದುವರಿಸಲು ಅನುಕೂಲವಾಗುವಂತೆ ವಿಚಾರಣೆಯನ್ನು ಮುಂದೂಡುವಂತೆ ರಾಜ್ಯ ಸರ್ಕಾರವು ನ್ಯಾಯಮೂರ್ತಿ ಸೌಗತ ಭಟ್ಟಾಚಾರ್ಯ ಅವರಿದ್ದ ಪೀಠದ ಮುಂದೆ ಕೋರಿತ್ತು. ಸುದ್ದಿ ಸಂಸ್ಥೆಯೊಂದರ ವರದಿ ಪ್ರಕಾರ, ಈ ಪ್ರಕರಣದಲ್ಲಿ ಭಾಗಿಯಾಗಿರುವ ಪೊರೆಲ್‌ನ ಸ್ನೇಹಿತ ಎಂದು ಹೇಳಲಾದ ಮತ್ತೊಬ್ಬ ಆರೋಪಿಯನ್ನು ಇನ್ನೂ ಬಂಧಿಸಬೇಕಿದೆ.

ಕರ್ನಾಟಕದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಜೂನ್ 23 ರಂದು ಮೊಗ್ರಾ ಪೊಲೀಸ್ ಠಾಣೆಯಲ್ಲಿ ಪೊರೆಲ್ ವಿರುದ್ಧ ದೂರು ದಾಖಲಿಸಿದ್ದರು; ತಾವು ಸುಮಾರು ಮೂರೂವರೆ ವರ್ಷಗಳ ಕಾಲ ಸಂಬಂಧದಲ್ಲಿದ್ದೆವು ಮತ್ತು ಮದುವೆಯಾಗಲು ನಿರ್ಧರಿಸಿದ್ದೆವು. ನಾವು ಒಟ್ಟಿಗೆ ವಿದೇಶ ಪ್ರವಾಸವನ್ನೂ ಮಾಡಿದ್ದೆವು. ಆದರೆ ನಂತರ ಪೊರೆಲ್ ತಮ್ಮ ಸಂಬಂಧವನ್ನು ನಿರಾಕರಿಸಿದರು. ಹೀಗಾಗಿ, ಪೊಲೀಸಿಗೆ ದೂರು ನೀಡಬೇಕಾಯಿತು ಎಂದು ಅವರು ಆರೋಪಿಸಿದ್ದಾರೆ.

ದೂರಿನ ಪ್ರಕಾರ, ಸುಮಾರು ಒಂದೂವರೆ ವರ್ಷದ ಹಿಂದೆ ಇವರಿಬ್ಬರ ನಡುವೆ ವಿವಾದವೊಂದು ಉಂಟಾಗಿ ಅದು ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತಾದರೂ, ಆ ಸಮಯದಲ್ಲಿ ಯಾವುದೇ ದೂರು ದಾಖಲಾಗಿರಲಿಲ್ಲ.

ಜೂನ್‌ನಲ್ಲಿ ದಾಖಲಾದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದರು; ತನಿಖಾ ತಂಡಗಳು ಚಂದನ್‌‌ನಗರದಲ್ಲಿರುವ ಪೊರೆಲ್ ಅವರ ನಿವಾಸಕ್ಕೆ ಹಲವು ಬಾರಿ ಭೇಟಿ ನೀಡಿದರೂ, ಅವರು ಅಲ್ಲಿ ಪತ್ತೆಯಾಗಲಿಲ್ಲ.

ನಂತರ ಆ ಮಹಿಳೆ ಕಲ್ಕತ್ತಾ ಹೈಕೋರ್ಟ್‌ನ ಮೊರೆ ಹೋದರು; ಇದರ ಪರಿಣಾಮವಾಗಿ, ಜುಲೈ 20 ರಂದು ಪೊರೆಲ್ ಅವರನ್ನು ಬಂಧಿಸುವಂತೆ ನ್ಯಾಯಾಲಯವು ಪೊಲೀಸರಿಗೆ ನಿರ್ದೇಶನ ನೀಡಿತು. ಪೊರೆಲ್ ಈ ಹಿಂದೆ ಆ ಆರೋಪಗಳನ್ನು ನಿರಾಕರಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನಾನೇ ಲಾಸ್ಟ್, ಇನ್ನು ಇರಾನ್ ನಂಬಲ್ಲ, ಹಾರ್ಮುಜ್ ಅಮೆರಿಕ ನಿಯಂತ್ರದಣದಲ್ಲಿದೆ': Donald Trump

ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ: ಮುನಿಯಪ್ಪಗೆ ಸಮಾಜಕಲ್ಯಾಣ, ಜಮೀರ್ – ವಸತಿ ಖಾತೆ?

‘ರಾಂಗ್ ರೂಟ್’ ರಕ್ಕಸ SUVಗೆ ಯೋಧ ಬಲಿ; ಕಾರು ಗುದ್ದಿದ ರಭಸಕ್ಕೆ ಗಾಳಿಯಲ್ಲಿ ಹಾರಿ ಬಿದ್ದ ಸೈನಿಕ, ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ

ಮುಂದುವರಿದ ಕೌತುಕ: ಅಮಾವಾಸ್ಯೆ ಕಳೆದ ಬಳಿಕವಷ್ಟೇ ಖಾತೆ ಹಂಚಿಕೆ 'ಗ್ರಹಣ ಮುಕ್ತ'!

'ನನ್ನ ಮುಂದೆ ನಿಂತು ಟೈಪ್ ಮಾಡಿಸಿ ಸಹಿ ಹಾಕಿಸಿದ್ರು: ಆಸ್ಪತ್ರೆಯಲ್ಲಿದ್ದಾಗಲೂ CM ರಾಜೀನಾಮೆ ನೀಡುವಂತೆ ಒತ್ತಡ; ಮನಸ್ಸಿಗೆ ನೋವಾಗಿದೆ'