ಆಸ್ಟ್ರೇಲಿಯಾ ವಿರುದ್ಧ ಬಾಂಗ್ಲಾದೇಶಕ್ಕೆ ಜಯ 
ಕ್ರಿಕೆಟ್

1st Test: ಆಸಿಸ್ ನೆಲದಲ್ಲೇ ಕಾಂಗರೂಗಳ ಬಗ್ಗು ಬಡಿದು ಇತಿಹಾಸ ಬರೆದ ಬಾಂಗ್ಲಾದೇಶ

ಡಾರ್ವಿನ್‌ನಲ್ಲಿ ಭಾನುವಾರ ಮುಕ್ತಾಯವಾಗ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 9 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಬಾಂಗ್ಲಾದೇಶ ಟೆಸ್ಟ್ ಕ್ರಿಕೆಟ್‌ನ ಅತ್ಯಂತ ದೊಡ್ಡ ಅಚ್ಚರಿಯ ಫಲಿತಾಂಶ...

ಡಾರ್ವಿನ್: ಜಾಗತಿಕ ಕ್ರಿಕೆಟ್ ನಲ್ಲಿ ಬಾಂಗ್ಲಾದೇಶ ತಂಡ ಭಾನುವಾರ ಇತಿಹಾಸ ಸೃಷ್ಟಿ ಮಾಡಿದ್ದು ಆಸಿಸ್ ನೆಲದಲ್ಲಿ ಪ್ರಬಲ ಆಸ್ಟ್ರೇಲಿಯಾ ತಂಡವನ್ನು ಮಣಿಸುವ ಮೂಲಕ ದಾಖಲೆ ನಿರ್ಮಿಸಿದೆ.

ಹೌದು.. ಡಾರ್ವಿನ್‌ನಲ್ಲಿ ಭಾನುವಾರ ಮುಕ್ತಾಯವಾಗ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 9 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಬಾಂಗ್ಲಾದೇಶ ಟೆಸ್ಟ್ ಕ್ರಿಕೆಟ್‌ನ ಅತ್ಯಂತ ದೊಡ್ಡ ಅಚ್ಚರಿಯ ಫಲಿತಾಂಶಗಳಲ್ಲಿ ಒಂದನ್ನು ದಾಖಲಿಸಿದೆ.

ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್ ಪಂದ್ಯ ಗೆದ್ದ ಎಲೈಟ್ ತಂಡಗಳ ಪಟ್ಟಿಗೆ ಇದೀಗ ಬಾಂಗ್ಲಾದೇಶ ಸೇರ್ಪಡೆಯಾಗಿದೆ. ಭಾರತ ಮತ್ತು ಪಾಕಿಸ್ತಾನದ ಬಳಿಕ ಅಲ್ಲದೆ ಈ ಸಾಧನೆ ಮಾಡಿದ ಮೂರನೇ ಏಷ್ಯಾ ತಂಡ ಎಂಬ ಹೆಗ್ಗಳಿಕೆಗೂ ಬಾಂಗ್ಲಾದೇಶ ಪಾತ್ರವಾಗಿದೆ.

ಕುತೂಹಲ ಕೆರಳಿಸಿದ್ದ ಪಂದ್ಯ

ಗೆಲುವಿಗೆ ಬಾಂಗ್ಲಾದೇಶಕ್ಕೆ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಕೇವಲ 57 ರನ್‌ಗಳ ಅಗತ್ಯವಿತ್ತು. ನಾಲ್ಕನೇ ದಿನದ ಎರಡನೇ ಸೆಷನ್‌ನಲ್ಲೇ ಪ್ರವಾಸಿ ತಂಡ ಸುಲಭವಾಗಿ ಗುರಿ ಬೆನ್ನಟ್ಟಿ ಗೆಲುವು ಸಾಧಿಸಿತು. ಮೊಮಿನುಲ್ ಹಕ್ 30 ರನ್‌ಗಳೊಂದಿಗೆ ಅಜೇಯರಾಗಿ ಉಳಿದರೆ, ಶಾದ್ಮಾನ್ ಇಸ್ಲಾಂ 25 ರನ್‌ಗಳೊಂದಿಗೆ ಅಜೇಯರಾಗಿ ಪಂದ್ಯ ಮುಗಿಸಿದರು.

ಪಂದ್ಯಕ್ಕೆ ಭಾರೀ ಫೇವರಿಟ್ ಆಗಿ ಕಣಕ್ಕಿಳಿದಿದ್ದ ಆಸ್ಟ್ರೇಲಿಯಾ, ಬಾಂಗ್ಲಾದೇಶದ ಬೌಲರ್‌ಗಳು ಇಡೀ ದಿನ ನಿರಂತರ ಒತ್ತಡ ಹೇರಿದ ಪರಿಣಾಮ ಎರಡನೇ ಇನ್ನಿಂಗ್ಸ್‌ನಲ್ಲಿ 284 ರನ್‌ಗಳಿಗೆ ಆಲೌಟ್ ಆಯಿತು. ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಮೆಹಿದಿ ಹಸನ್ ಮಿರಾಜ್ ಆಸ್ಟ್ರೇಲಿಯಾದ ಕುಸಿತದ ಪ್ರಮುಖ ಶಿಲ್ಪಿಯಾಗಿದ್ದರು.

ಆಫ್ ಸ್ಪಿನ್ನರ್ ಮೆಹಿದಿ ಹಸನ್ ಮಿರಾಜ್ ಐದು ವಿಕೆಟ್‌ಗಳನ್ನು ಕಬಳಿಸಿದರು. ಇದರೊಂದಿಗೆ ಅವರ ಟೆಸ್ಟ್ ವೃತ್ತಿಜೀವನದಲ್ಲಿ ಐದು ವಿಕೆಟ್‌ಗಳ ಗೊಂಚಲುಗಳ ಸಂಖ್ಯೆ 15ಕ್ಕೆ ಏರಿದೆ. ಇದಕ್ಕೂ ಮುನ್ನ ಬ್ಯಾಟಿಂಗ್‌ನಲ್ಲೂ ಅವರು ಮಹತ್ವದ ಕೊಡುಗೆ ನೀಡಿದ್ದು, 65 ರನ್ ಗಳಿಸಿ ಬಾಂಗ್ಲಾದೇಶದ ಪರ ನಿರ್ಣಾಯಕ ಪಾತ್ರ ವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Shocking: ವಾರಾಣಾಸಿ ಏರ್‌ಪೋರ್ಟ್‌ನಲ್ಲಿ ಆಕಸ್ಮಿಕ ಗುಂಡಿನ 'ದಾಳಿ': ಭದ್ರತಾ ಸಿಬ್ಬಂದಿ ಸೇರಿ ಇಬ್ಬರಿಗೆ ಗಾಯ

'ಮಿಸ್ಟರ್ 10 ಪರ್ಸೆಂಟ್'; ಶೇ 3-4ರಷ್ಟಿರುವ ಹಿಂದೂಗಳನ್ನು ಸಹಿಸಿಕೊಳ್ಳುತ್ತಿದ್ದೇವೆ ಎಂದ ಪಾಕ್ ಅಧ್ಯಕ್ಷನಿಗೆ ತಿರುಗೇಟು ನೀಡಿದ ಜಾವೇದ್ ಅಖ್ತರ್!

ಪಾನ್ ಮಸಾಲಾ ಜಾಹೀರಾತು: ಶಾರುಖ್, ಅಜಯ್ ದೇವಗನ್, ಟೈಗರ್ ಶ್ರಾಫ್‌ಗೆ ನೋಟಿಸ್; 15 ದಿನದಲ್ಲಿ ಉತ್ತರಿಸುವಂತೆ ಸೂಚನೆ

'ರಾಜಕೀಯ ಪ್ರವೇಶವೇ ತಪ್ಪು ನಿರ್ಧಾರ': ನಾನು ಎಂದಿಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಲಿಲ್ಲ': ಡೆತ್ ನೋಟ್ ನಲ್ಲಿ ಆಸೀಶ್ ಬ್ಯಾನರ್ಜಿ ಪಶ್ಚಾತ್ತಾಪ!

ಮಮತಾ ಆಪ್ತ ಹಾಗೂ ಮಾಜಿ ಉಪಸಭಾಪತಿ ಅಸೀಶ್ ಬ್ಯಾನರ್ಜಿ TMC ಕಚೇರಿಯಲ್ಲಿ ಶವವಾಗಿ ಪತ್ತೆ!