ಕಪೀಲ್ ದೇವ್, ಪಾಕ್ ತಂಡದ ಸಾಂದರ್ಭಿಕ ಚಿತ್ರ 
ಕ್ರಿಕೆಟ್

T20 ವಿಶ್ವಕಪ್ ನಲ್ಲಿ ಭಾರತದ ವಿರುದ್ಧ ಆಡಲು ನಕಾರ: ಪಾಕಿಸ್ತಾನಕ್ಕೆ ಕಪಿಲ್ ದೇವ್ ವಾರ್ನಿಂಗ್ ಏನು?

ಮಂಡಳಿ ಮಟ್ಟದ ಬಲವಂತದ ನಿರ್ಧಾರಗಳು ಆಟಗಾರರ ಮೇಲೆ ಧೀರ್ಘಾವಧಿಯ ಪರಿಣಾಮ ಉಂಟುಮಾಡಲಿದೆ ಎಂದು ಕಪಿಲ್ ದೇವ್ ಕಳವಳ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಮುಂಬರುವ ಟಿ-20 ವಿಶ್ವಕಪ್ ನಲ್ಲಿ ಭಾರತದ ವಿರುದ್ಧದ ಗುಂಪು ಹಂತದ ಪಂದ್ಯವನ್ನು ಬಹಿಷ್ಕರಿಸುವ ಪಾಕಿಸ್ತಾನಕ್ಕೆ ನಿರ್ಧಾರದ ಬಗ್ಗೆ ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಬಲವಾದ ಎಚ್ಚರಿಕೆ ನೀಡಿದ್ದಾರೆ.

ಫೆಬ್ರವರಿ 15 ರಂದು ಭಾರತ ವಿರುದ್ಧದ ಪಂದ್ಯ ಆಡದಿದ್ದರೆ ಪಾಕಿಸ್ತಾನ ಕ್ರಿಕೆಟಿಗೆ ಭಾರಿ ಹೊಡೆತ ಬೀಳಲಿದೆ. ದೇಶದ ವರ್ಚಸ್ಸು ಕುಸಿಯುತ್ತದೆ ಎಂದು ಹೇಳಿದ್ದಾರೆ. ಅಲ್ಲದೇ ವಿಶ್ವ ಕಪ್ ನಲ್ಲಿ ಆಡಲು ಹಾತೊರೆಯುತ್ತಿರುವ ಪಾಕಿಸ್ತಾನದ ಯುವ ಆಟಗಾರರ ಭವಿಷ್ಯದ ಮೇಲೂ ತೀವ್ರ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ.

ಮಂಡಳಿ ಮಟ್ಟದ ಬಲವಂತದ ನಿರ್ಧಾರಗಳು ಆಟಗಾರರ ಮೇಲೆ ಧೀರ್ಘಾವಧಿಯ ಪರಿಣಾಮ ಉಂಟುಮಾಡಲಿದೆ ಎಂದು ಕಪಿಲ್ ದೇವ್ ಕಳವಳ ವ್ಯಕ್ತಪಡಿಸಿದ್ದಾರೆ.

ಒಂದು ವೇಳೆ ಆಟಗಾರರು ಅಂತಹ ನಿರ್ಧಾರ ತೆಗೆದುಕೊಂಡರೆ, ಅವರು ಹೊರಗೆ ಬಂದು ಹಾಗೆ ಹೇಳಬಹುದು. ಆದರೆ ಆಟಗಾರರು ಆಡುವುದಿಲ್ಲ ಎಂದು ಮಂಡಳಿಯು ನಿರ್ಧರಿಸಿದಾಗ, ದೇಶದ ಖ್ಯಾತಿ ಕುಸಿಯುತ್ತದೆ. ಇದು ಪಾಕಿಸ್ತಾನಕ್ಕೆ ಸರಿಯಲ್ಲ. ಪಾಕಿಸ್ತಾನ ಅನೇಕ ಅದ್ಬುತ ಪ್ರತಿಭೆಗಳನ್ನು ಕ್ರಿಕೆಟಿಗೆ ನೀಡಿದೆ. ಆದರೆ ಅಂತಹ ಆಟಗಾರರನ್ನು ವಿಶ್ವಕಪ್ ಆಡಲು ಅನುಮತಿಸದಿದ್ದರೆ, ಆಟಕ್ಕೆ ಹಾಗೂ ಸ್ವಂತ ಆಟಗಾರರಿಗೆ ಅನ್ಯಾಯ ಮಾಡುತ್ತಿದ್ದೀರಿ ಎಂದು ಕಿಡಿಕಾರಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸಲಿರುವ ಪಾಕಿಸ್ತಾನ, ಕೊಲಂಬೊದಲ್ಲಿ ಭಾರತದ ವಿರುದ್ಧ ಪಂದ್ಯವನ್ನಾಡುವುದಿಲ್ಲ ಎಂದು ಭಾನುವಾರ ಘೋಷಿಸಿದೆ. ಭದ್ರತಾ ಕಾರಣಗಳನ್ನುಉಲ್ಲೇಖಿಸಿ ಭಾರತದಿಂದ ವಿಶ್ವಕಪ್ ಪಂದ್ಯಗಳನ್ನು ಸ್ಥಳಾಂತರಿಸಲು ಬಾಂಗ್ಲಾದೇಶದ ಮನವಿಯನ್ನು ICC ತಿರಸ್ಕರಿಸಿದ ನಂತರ ಪಾಕಿಸ್ತಾನ ಈ ನಿರ್ಧಾರವನ್ನು ತೆಗೆದುಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಬಿ-ಜಿ ರಾಮ್ ಜಿ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ; ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

'ಜವಾಬ್ದಾರಿಯಿಂದ ಪ್ರಧಾನಿ ಮೋದಿ ನುಣುಚಿಕೊಂಡರು': ಸಂಸತ್ ಹೊರಗೆ ನರವಾಣೆ ಆತ್ಮಚರಿತ್ರೆ ಪ್ರದರ್ಶಿಸಿದ Rahul Gandhi; Video

ಮಾತು ನಿಲ್ಲಿಸಿದ್ದಕ್ಕೆ ಪ್ರೇಮಿಯನ್ನು ಇರಿದುಕೊಂದ ಮಹಿಳೆ!

ಪ್ರಯಾಣಿಕರಿಗೆ ಶಾಕ್: ಮೆಟ್ರೋ ರೈಲು ಟಿಕೆಟ್ ದರ ಏರಿಕೆಗೆ ಸರ್ಕಾರ ಅಸ್ತು!; ಫೆಬ್ರವರಿ 9 ರಿಂದಲೇ ಜಾರಿ ಸಾಧ್ಯತೆ

ಬೆಳಗಾವಿ: ವಂಟಮೂರಿ ಮಹಿಳೆ‌‌ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; 12 ಜನರಿಗೆ ಐದು ವರ್ಷ ಜೈಲು ಶಿಕ್ಷೆ

SCROLL FOR NEXT