ಕ್ರಿಕೆಟ್

ತಂಡಕ್ಕೆ ತಕ್ಕಂತೆ ICC ನಿಯಮ ಬದಲಾಗುತ್ತಾ? India ಹಿಡಿದ ಕ್ಯಾಚ್ ನಾಟೌಟ್, ಅದೇ Pak ಹಿಡಿದರೇ ಔಟ್, video!

ಪುರುಷರ ಟಿ20 ವಿಶ್ವಕಪ್ 2026 ಪಂದ್ಯಾವಳಿ ಪಾಕಿಸ್ತಾನ ಮತ್ತು ನೆದರ್‌ಲ್ಯಾಂಡ್ಸ್ ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗಿದೆ. ಮೊದಲ ಪಂದ್ಯದಲ್ಲೇ ಪಾಕಿಸ್ತಾನ ಗೆಲುವು ಸಾಧಿಸಿದೆ. ಟಿ20 ವಿಶ್ವಕಪ್​ನ ಮೊದಲ ಪಂದ್ಯವೇ ವಿವಾದಕ್ಕೀಡಾಗಿದೆ. ಐಸಿಸಿ ನಿಮಯ ಕಾರಣಕ್ಕೆ ವಿವಾದ ಸೃಷ್ಟಿಯಾಗಿದೆ.

ಪುರುಷರ ಟಿ20 ವಿಶ್ವಕಪ್ 2026 ಪಂದ್ಯಾವಳಿ ಪಾಕಿಸ್ತಾನ ಮತ್ತು ನೆದರ್‌ಲ್ಯಾಂಡ್ಸ್ ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗಿದೆ. ಮೊದಲ ಪಂದ್ಯದಲ್ಲೇ ಪಾಕಿಸ್ತಾನ ಗೆಲುವು ಸಾಧಿಸಿದೆ. ಟಿ20 ವಿಶ್ವಕಪ್​ನ ಮೊದಲ ಪಂದ್ಯವೇ ವಿವಾದಕ್ಕೀಡಾಗಿದೆ. ಐಸಿಸಿ ನಿಮಯ ಕಾರಣಕ್ಕೆ ವಿವಾದ ಸೃಷ್ಟಿಯಾಗಿದೆ. ಬಾಬರ್ ಅಜಮ್ ಮತ್ತು ಶಾಹೀನ್ ಅಫ್ರಿದಿ ಒಟ್ಟಾಗಿ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಗ್ರೂಪ್ ಎ ಪಂದ್ಯದಲ್ಲಿ ರಿಲೇ ಕ್ಯಾಚ್ ಹಿಡಿದರು. ನೆದರ್‌ಲ್ಯಾಂಡ್ಸ್‌ನ ಇನ್ನಿಂಗ್ಸ್‌ನ ಐದನೇ ಓವರ್‌ನಲ್ಲಿ ಮೊಹಮ್ಮದ್ ನವಾಜ್ ಎಸೆತವನ್ನು ಲೆವಿಟ್‌ ಭರ್ಜರಿಯಾಗಿ ಹೊಡೆದರು. ಚೆಂಡು ಬೌಂಡರಿ ಗೆರೆಯನ್ನು ದಾಟಿದಂತೆ ತೋರುತ್ತಿತ್ತು. ಆದರೆ ಲಾಂಗ್-ಆಫ್ ನಲ್ಲಿದ್ದ ಬಾಬರ್ ಅಜಮ್ ಓಡಿ ಎರಡೂ ಕೈಗಳಿಂದ ಚೆಂಡನ್ನು ಗಾಳಿಯಲ್ಲಿ ಮಧ್ಯದಲ್ಲಿ ಹಿಡಿದರು. ಆದರೆ ಚೆಂಡಿನೊಂದಿಗೆ ಬೌಂಡರಿ ಗೆರೆ ದಾಟುತ್ತೇನೆಂದು ಭಾವಿಸಿ ಬಾಬರ್ ಬುದ್ಧಿವಂತಿಕೆ ಪ್ರದರ್ಶಿಸಿ ಚೆಂಡನ್ನು ಬೌಂಡರಿ ಗೆರೆ ತಲುಪುವ ಮೊದಲೇ ಅದನ್ನು ಮತ್ತೆ ಮೈದಾನಕ್ಕೆ ಎಸೆದರು.

ಹತ್ತಿರದಲ್ಲಿದ್ದ ಶಾಹೀನ್ ಅಫ್ರಿದಿ ಚೆಂಡನ್ನು ಹಿಡಿದರು. ಈ ರಿಲೇ ಪ್ರಯತ್ನವು ಲೆವಿಟ್ ಅವರ 15 ಎಸೆತಗಳಲ್ಲಿ 24 ರನ್ ಗಳಿಸಿದ ಇನ್ನಿಂಗ್ಸ್ ಅನ್ನು ಕೊನೆಗೊಳಿಸಿತು. ಆದರೆ ಇಂಟರ್​ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ ಇತ್ತೀಚೆಗೆ ರಿಲೇ ಕ್ಯಾಚ್ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಐಸಿಸಿ ರಿಲೇ ಕ್ಯಾಚ್ ನಿಯಮ 19.5.2 ಪ್ರಕಾರ, ರಿಲೇ ಕ್ಯಾಚ್​ ಹಿಡಿದಾಗ ಬೌಂಡರಿ ಲೈನ್ ದಾಟಿದ ಫೀಲ್ಡರ್ ತನ್ನ ಸಹ ಆಟಗಾರನಿಗೆ ಎಸೆದ ಚೆಂಡು ಹಿಡಿಯುವ ಮೊದಲೇ ಮೈದಾನದ ಒಳಕ್ಕೆ ಬರಬೇಕು. ಆಗ ಮಾತ್ರ ಅದನ್ನು ಕ್ಯಾಚ್ ಔಟ್ ಎಂದು ಪರಿಗಣಿಸಲಾಗುತ್ತದೆ. ಈ ನಿಯಮವು ಜೂನ್ ತಿಂಗಳಿಂದಲೇ ಜಾರಿಯಲ್ಲಿದೆ.

ಹೀಗಾಗಿ ಕಳೆದ ರೈಸಿಂಗ್ ಸ್ಟಾರ್ ಏಷ್ಯಾಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಎ ವಿರುದ್ಧ ಭಾರತ ಎ ತಂಡದ ಆಟಗಾರ ನೆಹಾಲ್ ವಧೇರಾ ಹಿಡಿದ ಕ್ಯಾಚ್ ಅನ್ನು ಅಮಾನ್ಯ ಎಂದು ಪರಿಗಣಿಸಲಾಗಿತ್ತು. ಈ ಪಂದ್ಯದ 10ನೇ ಓವರ್​ನ ಮೊದಲ ಎಸೆತವನ್ನು ಮಾಝ್ ಸದಾಖತ್ ಲಾಂಗ್ ಆಫ್​​ನತ್ತ ಬಾರಿಸಿದ್ದರು. ಆದರೆ ಬೌಂಡರಿ ಲೈನ್​ನಲ್ಲಿ ಫೀಲ್ಡಿಂಗ್​ನಲ್ಲಿದ್ದ ನೆಹಾಲ್ ವಧೇರಾ ಅದ್ಭುತವಾಗಿ ಚೆಂಡನ್ನು ಹಿಡಿದಿದ್ದರು. ಕ್ಯಾಚ್ ಹಿಡಿದ ಬಳಿಕ ನಿಯಂತ್ರಣ ಕಳೆದುಕೊಂಡ ವಧೇರಾ ಬೌಂಡರಿ ಲೈನ್ ದಾಟಿದರು. ಅಷ್ಟರಲ್ಲಾಗಲೇ ಸಹ ಆಟಗಾರ ನಮನ್​ ಧೀರ್​ಗೆ ವಧೇರಾ ಚೆಂಡನ್ನು ಎಸೆದರು. ಆದರೆ ಕ್ಯಾಚ್ ಪರಿಶೀಲಿಸಿದ ಮೂರನೇ ಅಂಪೈರ್ ನಾಟೌಟ್ ಎಂದು ತೀರ್ಪು ನೀಡಿದ್ದರು. ಇತ್ತ ನೆಹಾಲ್ ವಧೇರಾ ತನ್ನ ಕಾಲು ಬೌಂಡರಿ ಲೈನ್​ಗೆ ತಾಗಿಲ್ಲ ಎಂಬ ವಾದವನ್ನು ಫೀಲ್ಡ್ ಅಂಪೈರ್ ಮುಂದಿಟ್ಟಿದ್ದರು.

ಬೌಂಡರಿ ಲೈನ್ ಚೆಕ್ಕಿಂಗ್ ವೇಳೆಯೂ ವಧೇರಾ ಅವರ ಕಾಲು ಲೈನ್​ಗೆ ತಾಗಿಲ್ಲ ಎಂಬುದು ಸ್ಪಷ್ಟವಾಗಿತ್ತು. ಹೀಗಾಗಿ ಭಾರತೀಯ ಆಟಗಾರರು ತೀರ್ಪನ್ನು ಪ್ರಶ್ನಿಸಿದರು. ಅದಕ್ಕೆ ಅಂಪೈರ್ ರಿಲೇ ಕ್ಯಾಚ್​ ಹಿಡಿದಾಗ ಬೌಂಡರಿ ಲೈನ್ ದಾಟಿದ ಫೀಲ್ಡರ್ ತನ್ನ ಸಹ ಆಟಗಾರನಿಗೆ ಚೆಂಡು ನೀಡಿದ ಬೆನ್ನಲ್ಲೇ ಮೈದಾನದ ಒಳಕ್ಕೆ ಬರಬೇಕು. ಆದರೆ ನಮನ್​ಧೀರ್ ಕ್ಯಾಚ್ ಹಿಡಿಯುವಷ್ಟರಲ್ಲಿ ನೇಹಾಲ್ ವಧೇರಾ ಮೈದಾನಕ್ಕೆ ಹಿಂತಿರುಗಿರಲಿಲ್ಲ. ಹೀಗಾಗಿಯೇ ಥರ್ಡ್ ಅಂಪೈರ್ ನಾಟೌಟ್ ಎಂದು ತೀರ್ಪು ನೀಡಿದ್ದಾರೆ ಎಂದು ಹೇಳಿದ್ದರು. ಆದರೆ ಇಂದಿನ ಪಂದ್ಯದಲ್ಲಿ ಶಾಹೀನ್ ಅಫ್ರಿದಿ ಕ್ಯಾಚ್ ಹಿಡಿಯುವ ವೇಳೆಗೆ ಬಾಬರ್ ಅಜಂ ಬೌಂಡರಿ ಹೊರಗೆ ಇದ್ದರು. ಹೀಗಾಗಿ ಭಾರತಕ್ಕೆ ಒಂದು ನಿಯಮ. ಪಾಕಿಸ್ತಾನಕ್ಕೆ ಒಂದು ನಿಯಮನಾ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಶ್ಮೀರ ಭಾರತದ ಅವಿಭಾಜ್ಯ ಅಂಗ: ವ್ಯಾಪಾರ ಒಪ್ಪಂದದಲ್ಲಿ ಪಾಕಿಸ್ತಾನಕ್ಕೆ ಸದ್ದಿಲ್ಲದೆ 'ಶಾಕ್' ನೀಡಿದ ಅಮೆರಿಕಾ !

ಅಜಿತ್ ಪವಾರ್ ಸಾವಿನ ಬಗ್ಗೆ ಇನ್ನೂ ಅನುಮಾನ ಇದೆ: ಶಾಸಕ ರೋಹಿತ್ ಪವಾರ್

1995ರ ಪಾಟ್ನಾ ಪ್ರಕರಣದಲ್ಲಿ ಸಂಸದ ಪಪ್ಪು ಯಾದವ್ ಬಂಧನ; ಸೇಡಿನ ಕೃತ್ಯ ಎಂದ ರಾಹುಲ್ ಗಾಂಧಿ

ಮುಂಬಯಿ ಮಹಾನಗರ ಪಾಲಿಕೆ ಮೇಯರ್‌ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ರಿತು ತಾವಡೆ ಆಯ್ಕೆ

India-US ವ್ಯಾಪಾರ ಒಪ್ಪಂದ 'ಮೇಕ್ ಇನ್ ಇಂಡಿಯಾ' ಬಲಪಡಿಸುತ್ತದೆ, ಉದ್ಯೋಗಗಳನ್ನು ಸೃಷ್ಟಿಸುತ್ತದೆ: ಪ್ರಧಾನಿ ಮೋದಿ

SCROLL FOR NEXT