ಹರ್ಷಿತ್ ರಾಣಾ 
ಕ್ರಿಕೆಟ್

'ಮನಸ್ಸಿಗೆ ಅತೀವ ನೋವಾಗಿದೆ': T20 Worldcup ಕನಸು ಭಗ್ನಗೊಂಡ ಬೆನ್ನಲ್ಲೇ ಶಸ್ತ್ರಚಿಕಿತ್ಸೆಯ ಫೋಟೋ ಹಂಚಿಕೊಂಡ ರಾಣಾ!

ಅಭ್ಯಾಸ ಪಂದ್ಯದಲ್ಲಿ ಹರ್ಷಿತ್ ರಾಣಾ ಮೊಣಕಾಲಿನ ಗಾಯದಿಂದಾಗಿ ಮೈದಾನ ತೊರೆಯಬೇಕಾಯಿತು. ಗಾಯದ ಸಮಸ್ಯೆಯಿಂದಾಗಿ ಅವರು 2026ರ ಟಿ20 ವಿಶ್ವಕಪ್‌ನಲ್ಲಿ ಆಡುವ ಕನಸು ಭಗ್ನವಾಯಿತು.

ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಗಾಯಗೊಂಡಿದ್ದರಿಂದ ಭಾರತದ ವೇಗಿ ಹರ್ಷಿತ್ ರಾಣಾ ಅವರ 2026 ರ ಟಿ20 ವಿಶ್ವಕಪ್‌ನಲ್ಲಿ ಆಡುವ ಕನಸು ಭಗ್ನವಾಯಿತು. ಅಭ್ಯಾಸ ಪಂದ್ಯದಲ್ಲಿ ಕೇವಲ ಒಂದು ಓವರ್ ಬೌಲಿಂಗ್ ಮಾಡಿದ್ದ ಅವರು ನಂತರ ಮೊಣಕಾಲಿನ ಗಾಯದಿಂದಾಗಿ ಮೈದಾನವನ್ನು ತೊರೆಯಬೇಕಾಯಿತು. ಇದೀಗ ಗಾಯದ ಕುರಿತಂತೆ ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದು ಸದ್ಯ ತಾನು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಯಶಸ್ವಿಯಾಗಿದೆ. ಚಿಕಿತ್ಸೆಯ ನಂತರ ತಾನೂ ಸಾಧ್ಯವಾದಷ್ಟು ಬೇಗ ಕ್ರಿಕೆಟ್ ಮೈದಾನಕ್ಕೆ ಮರಳಲು ಬಯಸುವುದಾಗಿ ಹೇಳಿದ್ದಾರೆ.

ಸೋಮವಾರ ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋ ಹಂಚಿಕೊಂಡ ಹರ್ಷಿತ್, "ಶಸ್ತ್ರಚಿಕಿತ್ಸೆ ಚೆನ್ನಾಗಿ ನಡೆಯಿತು. ಈಗ ನನ್ನ ಗಮನ ಚೇತರಿಕೆ ಮತ್ತು ನಾನು ಇಷ್ಟಪಡುವ ಆಟಕ್ಕೆ ಮರಳುವುದರ ಮೇಲಿದೆ ಎಂದು ಬರೆದಿದ್ದಾರೆ. ಬೌಲರ್‌ನ ಪೋಸ್ಟ್‌ಗೆ ಅಭಿಮಾನಿಗಳು ಮತ್ತು ಹಿತೈಷಿಗಳಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ. ಒಬ್ಬ ಬಳಕೆದಾರರು 'ಬೇಗ ಗುಣಮುಖರಾಗಿ ಸಹೋದರ' ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, 'ನೀವು ಬೇಗನೆ ಚೇತರಿಸಿಕೊಳ್ಳಬೇಕೆಂದು ಹಾರೈಸುತ್ತೇನೆ' ಎಂದು ಬರೆದಿದ್ದಾರೆ. ಮತ್ತೊಬ್ಬರು, 'ನಿಮ್ಮನ್ನು ಮೈದಾನದಲ್ಲಿ ನೋಡಲು ಕಾಯಲು ಸಾಧ್ಯವಿಲ್ಲ' ಎಂದು ಹೇಳಿದರು.

2024ರ ನವೆಂಬರ್ ನಲ್ಲಿ ಹರ್ಷಿತ್ ರಾಣಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಅವರು ಇದುವರೆಗೆ ಎರಡು ಟೆಸ್ಟ್‌ಗಳು, 14 ಏಕದಿನ ಪಂದ್ಯಗಳು ಮತ್ತು ಒಂಬತ್ತು T20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಹರ್ಷಿತ್ ಅವರನ್ನು ಸ್ಥಾನಕ್ಕೆ 18 ತಿಂಗಳ ನಂತರ ವೇಗಿ ಮೊಹಮ್ಮದ್ ಸಿರಾಜ್ ಅವರು ಭಾರತೀಯ ಟಿ20 ತಂಡಕ್ಕೆ ಮರಳುವಂತೆ ಮಾಡಿತು. ಆರಂಭದಲ್ಲಿ ಸಿರಾಜ್ ಟಿ20 ವಿಶ್ವಕಪ್‌ಗಾಗಿ ಭಾರತದ ಯೋಜನೆಗಳ ಭಾಗವಾಗಿರಲಿಲ್ಲ. ಅವರು ಟೂರ್ನಮೆಂಟ್‌ನ ತಮ್ಮ ಮೊದಲ ಪಂದ್ಯದಲ್ಲಿ ಪರಿಣಾಮಕಾರಿಯಾಗಿ ಬೌಲಿಂಗ್ ಮಾಡಿದ್ದು USA ವಿರುದ್ಧ ನಾಲ್ಕು ಓವರ್‌ಗಳಲ್ಲಿ 29 ರನ್‌ಗಳಿಗೆ ಮೂರು ವಿಕೆಟ್‌ಗಳನ್ನು ಕಬಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಂಸತ್ತಿನಲ್ಲಿ ಕೋಲಾಹಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳಿಂದ ಸಭಾತ್ಯಾಗ; ಲೋಕಸಭೆ ನಾಳೆಗೆ ಮುಂದೂಡಿಕೆ

ಹುಬ್ಬಳ್ಳಿ: ಕನ್ನಡ, ಕನ್ನಡ ವಿವಾದದ ಬಳಿಕ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ ಬಾಲಿವುಡ್ ಗಾಯಕ ಸೋನು ನಿಗಮ್

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ: ಎಸ್‌ಐಟಿಯಿಂದ 9 ಪುಟಗಳ ಟಿಪ್ಪಣಿ ಪರಿಶೀಲನೆ; ಅಧಿಕಾರಿಳು ಹೇಳಿದ್ದೇನು?

ಟಿ20 ವಿಶ್ವಕಪ್ 2026: ಇಂಗ್ಲೆಂಡ್ ಬೆವರಳಿಸಿದ ನೇಪಾಳಕ್ಕೆ Dale Steyn ಫಿದಾ, ಕೋಚಿಂಗ್ ಆಫರ್ ಕೊಟ್ಟ ದಕ್ಷಿಣ ಆಫ್ರಿಕಾ ಮಾಜಿ ವೇಗಿ!

Ranji Trophy: ಕೆಎಲ್ ರಾಹುಲ್- ಸ್ಮರಣ್ ರವಿಚಂದ್ರನ್ ಭರ್ಜರಿ ಜೊತೆಯಾಟ; ಮುಂಬೈ ವಿರುದ್ಧ ಗೆದ್ದು ಸೆಮಿಫೈನಲ್ ತಲುಪಿದ ಕರ್ನಾಟಕ!

SCROLL FOR NEXT