ಅಭಿಷೇಕ್ ಶರ್ಮಾ-ಭಾನುಕ ರಾಜಪಕ್ಸೆ 
ಕ್ರಿಕೆಟ್

ಬ್ಯಾಟ್‌ನಲ್ಲಿ ರಬ್ಬರ್ ಇದೆ: Indian ಬ್ಯಾಟರ್ ಅಭಿಷೇಕ್ ಶರ್ಮಾ ವಿರುದ್ಧ ಶ್ರೀಲಂಕಾ ಬ್ಯಾಟರ್‌ನಿಂದ ಬ್ಯಾಟ್ ಟ್ಯಾಂಪರಿಂಗ್ ಆರೋಪ!

ಇತ್ತೀಚೀನ ದಿನಗಳಲ್ಲಿ ಟೀಂ ಇಂಡಿಯಾ ಬ್ಯಾಟರ್ ಗಳು ಸ್ಪೋಟಕ ಬ್ಯಾಟಿಂಗ್ ಮೂಲಕ ಎದುರಾಳಿ ಬೌಲರ್ ಗಳಿಗೆ ನಡುಕ ಹುಟ್ಟಿಸುತ್ತಿದ್ದಾರೆ. ಇನ್ನು 2026ರ ಟಿ20 ವಿಶ್ವಕಪ್ ಪಂದ್ಯಾವಳಿ ಸಹ ಆರಂಭವಾಗಿದೆ.

ಇತ್ತೀಚೀನ ದಿನಗಳಲ್ಲಿ ಟೀಂ ಇಂಡಿಯಾ ಬ್ಯಾಟರ್ ಗಳು ಸ್ಪೋಟಕ ಬ್ಯಾಟಿಂಗ್ ಮೂಲಕ ಎದುರಾಳಿ ಬೌಲರ್ ಗಳಿಗೆ ನಡುಕ ಹುಟ್ಟಿಸುತ್ತಿದ್ದಾರೆ. ಇನ್ನು 2026ರ ಟಿ20 ವಿಶ್ವಕಪ್ ಪಂದ್ಯಾವಳಿ ಸಹ ಆರಂಭವಾಗಿದೆ. ಒಂದು ಹಂತದಲ್ಲಿ ಭಾರತೀಯ ಬ್ಯಾಟರ್ ಗಳನ್ನು ನೋಡಿ ಎದುರಾಳಿ ತಂಡದ ಆಟಗಾರರು ಎದುರಿದಂತಿದೆ. ಶ್ರೀಲಂಕಾದ ಬ್ಯಾಟ್ಸ್‌ಮನ್ ಭಾನುಕ ರಾಜಪಕ್ಸೆ ಭಾರತೀಯ ಕ್ರಿಕೆಟ್ ತಂಡದ ಬ್ಯಾಟ್ಸ್‌ಮನ್‌ಗಳ ಬಗ್ಗೆ ಗಂಭೀರವಾದ ಆರೋಪ ಮಾಡಿದ್ದಾರೆ.

2026ರ ಟಿ20 ವಿಶ್ವಕಪ್‌ನಲ್ಲಿ ಶ್ರೀಲಂಕಾ ತನ್ನ ಮೊದಲ ಪಂದ್ಯವನ್ನು ಐರ್ಲೆಂಡ್ ವಿರುದ್ಧ ಗೆದ್ದಿದೆ. ಟೂರ್ನಿಯಲ್ಲಿ ಸಹ-ಆತಿಥ್ಯ ವಹಿಸಿರುವ ಶ್ರೀಲಂಕಾ ಬ್ಯಾಟರ್ ಗಳು ಬ್ಯಾಟಿಂಗ್ ಮಾಡಲು ತಿಣುಕಾಡಿದ್ದರು. ಆದಾಗ್ಯೂ ಬೌಲರ್ ಗಳು ಅಂತಿಮ ಹಂತದಲ್ಲಿ 20 ರನ್‌ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿದ್ದರು.

Men In Blue ಬ್ಯಾಟ್ಸ್‌ಮನ್‌ಗಳು ವಿಶ್ವದ ಯಾವುದೇ ಭಾಗದಲ್ಲಿ ಉತ್ಪಾದಿಸದ ವಿಶೇಷ ಬ್ಯಾಟ್‌ಗಳನ್ನು ಬಳಸುತ್ತಾರೆ ಎಂದು ಭಾನುಕ ನಂಬುತ್ತಾರೆ. ಕ್ರಿಕೆಟ್ ಆಟದಲ್ಲಿ ಶಕ್ತಿಯುತ ಮತ್ತು ದೀರ್ಘ-ಶ್ರೇಣಿಯ ಹೊಡೆತಗಳನ್ನು ಹೊಡೆಯಲು ಇದು ಕಾರಣವಾಗಿದೆ. ಈ ಬ್ಯಾಟ್‌ಗಳನ್ನು ಜಗತ್ತಿನಾದ್ಯಂತ ಯಾವುದೇ ಇತರ ಕ್ರಿಕೆಟಿಗರು ಖರೀದಿಸಲು ಸಾಧ್ಯವಿಲ್ಲ. ಇತ್ತೀಚಿನ ಸಂದರ್ಶನವೊಂದರಲ್ಲಿ ಭಾನುಕ ರಾಜಪಕ್ಸೆ ಈ ಹೇಳಿಕೆ ನೀಡಿದ್ದಾರೆ.

ಭಾರತೀಯ ಆಟಗಾರರು ಹೆಚ್ಚಿನ ಶಕ್ತಿಯನ್ನು ಉತ್ಪಾದಿಸುವ ಬ್ಯಾಟ್‌ಗಳನ್ನು ಬಳಸುತ್ತಿದ್ದಾರೆ. ಭಾರತೀಯ ಆಟಗಾರರು ನಾವು ಪಡೆಯುವ ಅತ್ಯುತ್ತಮ ಬ್ಯಾಟ್‌ಗಳಿಗಿಂತ ಉತ್ತಮವಾದ ಬ್ಯಾಟ್‌ಗಳನ್ನು ಹೊಂದಿದ್ದಾರೆ. ಅವರ ಬ್ಯಾಟ್ ಗಳಲ್ಲಿ ರಬ್ಬರ್ ಪದರ ಇರುವಂತೆ ಭಾಸವಾಗುತ್ತದೆ. ಅದು ಹೇಗೆ ಸಾಧ್ಯ ಎಂದು ನನಗೆ ಊಹಿಸಲು ಸಾಧ್ಯವಿಲ್ಲ. ಈ ಬ್ಯಾಟ್‌ಗಳನ್ನು ಇತರರು ಖರೀದಿಸಲು ಸಾಧ್ಯವಿಲ್ಲ. ಎಲ್ಲಾ ಆಟಗಾರರಿಗೆ ಇದು ತಿಳಿದಿದೆ ಎಂದರು.

ವಿಶ್ವಕಪ್ ಈವೆಂಟ್‌ಗಳಲ್ಲಿ ಭಾರತದ ಕ್ರಿಕೆಟ್ ಉಪಕರಣಗಳ ಬಳಕೆಯನ್ನು ಪ್ರಶ್ನಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ 2023ರ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಹಸನ್ ರಜಾ ಭಾರತವು ಐಸಿಸಿ ಅಥವಾ ಬಿಸಿಸಿಐನಿಂದ ವಿಶೇಷ ಚೆಂಡುಗಳನ್ನು ಪಡೆಯುತ್ತಿರುವುದನ್ನು ಪ್ರಶ್ನಿಸಿದರು. ಇದರಿಂದಾಗಿ ಆಟಗಾರರು ಬ್ಯಾಟಿಂಗ್ ಸ್ನೇಹಿ ಟ್ರ್ಯಾಕ್‌ಗಳಲ್ಲಿ ಹೆಚ್ಚುವರಿ ಸ್ವಿಂಗ್ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ನೋಟಿಸ್ ಸಲ್ಲಿಸಿದ ಪ್ರತಿಪಕ್ಷಗಳು; 100 ಕ್ಕೂ ಹೆಚ್ಚು ಸಂಸದರ ಬೆಂಬಲವಿದೆ- ಕಾಂಗ್ರೆಸ್

ಬಾಯಿ ಮುಚ್ಚಿಕೊಂಡು ಇರಬೇಕೆಂಬ ಆದೇಶವನ್ನು ಎಲ್ಲರೂ ಪಾಲಿಸಬೇಕು; ನಾನು-ಸಿದ್ದರಾಮಯ್ಯ ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ: ಡಿ.ಕೆ ಶಿವಕುಮಾರ್; Video

ಅಕ್ರಮ ಹಣ ವರ್ಗಾವಣೆ ಪ್ರಕರಣ: ಅನಿಲ್ ಅಂಬಾನಿ, ಪತ್ನಿಗೆ EDಯಿಂದ ಹೊಸ ಸಮನ್ಸ್ ಜಾರಿ

ನೀವು ಪೆಂಗ್ವಿನ್ ಸಂಸ್ಥೆಯನ್ನು ನಂಬುತ್ತೀರೋ ಎಂಎಂ ನರವಾಣೆ ಅವರನ್ನು ನಂಬುತ್ತೀರೋ?: ವರದಿಗಾರರಿಗೆ ರಾಹುಲ್ ಗಾಂಧಿ ಪ್ರಶ್ನೆ

ಜೈಪುರದಲ್ಲಿ ಇಬ್ಬರು ಜಪಾನಿ ಪ್ರವಾಸಿಗರು ನಾಪತ್ತೆ!

SCROLL FOR NEXT