ಪಾಕಿಸ್ತಾನಕ್ಕೆ ಜಯ 
ಕ್ರಿಕೆಟ್

T20 ವಿಶ್ವಕಪ್ 2026: ತಾರಿಖ್ ಭರ್ಜರಿ ಬೌಲಿಂಗ್, USA ವಿರುದ್ಧ ಪಾಕಿಸ್ತಾನಕ್ಕೆ 32 ರನ್ ಜಯ

ಪಾಕಿಸ್ತಾನ ತಂಡ ನೀಡಿದ್ದ 191 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಅಮೆರಿಕ ನಿಗದಿತ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 158 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು.

ಕೊಲಂಬೋ: ಐಸಿಸಿ ಟಿ20 ವಿಶ್ವಕಪ್ 2026ರ ಟೂರ್ನಿಯ ಇಂದಿನ ಪಂದ್ಯದಲ್ಲಿ ಅಮೆರಿಕ ವಿರುದ್ಧ ಪಾಕಿಸ್ತಾನ ತಂಡ 32 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಇಂದಿನ ಪಂದ್ಯದಲ್ಲಿ ಪಾಕಿಸ್ತಾನ ತಂಡ ನೀಡಿದ್ದ 191 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಅಮೆರಿಕ ನಿಗದಿತ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 158 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ ಪಾಕಿಸ್ತಾನದ ಎದುರು 32 ರನ್ ಗಳ ಅಂತರದ ಹೀನಾಯ ಸೋಲು ಕಂಡಿತು.

ಯುಎಸ್ಎ ಬ್ಯಾಟಿಂಗ್

ಬೃಹತ್ ಮೊತ್ತವನ್ನು ಬೆನ್ನು ಹತ್ತಿದ ಅಮೆರಿಕ, ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್ ಗೆ 42 ರನ್ ಹರಿದುಬಂತು. ಆದರೆ 13 ರನ್ ಗಳಿಸಿದ್ದ ಆರಂಭಿಕ ಆಟಗಾರ ಆಂಡ್ರಿಸ್ ಗೌಸ್ ಮಹಮದ್ ನವಾಜ್ ಬೌಲಿಂಗ್ ನಲ್ಲಿ ಔಟಾದರು.

ಶಯಾನ್ ಜಹಂಗೀರ್ 49 ರನ್ ಗಳಿಸಿದರೆ, ಮಿಲಿಂಗ್ ಕುಮಾರ್ 29ರನ್, ಶುಭಂ ರಂಜನೆ 51 ರನ್ ಗಳಿಸಿ ಅಮೆರಿಕ ಬ್ಯಾಟಿಂಗ್ ಗೆ ಜೀವತುಂಬಿದರು.

ಆದರೆ ಉಳಿದಾವ ಆಟಗಾರಿಂದ ಅವರಿಗೆ ಸಾಥ್ ದೊರೆಯಲಿಲ್ಲ. ಮಧ್ಯಮ ಮತ್ತು ಕೆಳ ಕ್ರಮಾಂಕ ದಿಢೀರ್ ಪತನವಾಯಿತು. ಸಂಜಯ್ ಕೃಷ್ಣಮೂರ್ತಿ, ಮಹಮದ್ ಮೊಹ್ಸಿನ್ ಶೂನ್ಯ ಸುತ್ತಿದರೆ, ಹರ್ಮೀತ್ ಸಿಂಗ್ 6 ರನ್ ಮಾತ್ರ ಕಲೆಹಾಕಿ ನಿರಾಶೆ ಮೂಡಿಸಿದರು.

ಅಂತಿಮವಾಗಿ ಅಮೆರಿಕ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 158 ರನ್ ಕಲೆಹಾಕಿ 32 ರನ್ ಅಂತರದ ಸೋಲು ಕಂಡಿತು.

ಪಾಕ್ ಪರ ತಾರಿಖ್ ಭರ್ಜರಿ ಬೌಲಿಂಗ್

ಇನ್ನು ಪಾಕಿಸ್ತಾನ ಪರ ಉಸ್ಮಾನ್ ತಾರಿಖ್ ಭರ್ಜರಿ ಬೌಲಿಂಗ್ ಮಾಡಿದರು. 4 ಓವರ್ ಎಸೆದ ತಾರಿಖ್ 27 ರನ್ ನೀಡಿ 3 ವಿಕೆಟ್ ಪಡೆದು ಮಿಂಚಿದರು. ಉಳಿದಂತೆ ಶದಾಬ್ ಖಾನ್ 2, ಮಹಮದ್ ನವಾಜ್, ಅಬ್ರಾರ್ ಅಹ್ಮದ್, ಶಾಹೀನ್ ಅಫ್ರಿದಿ ತಲಾ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ