ಅಫ್ಘಾನಿಸ್ತಾನದ ಅನುಭವಿ ಆಲ್‌ರೌಂಡರ್ ಮೊಹಮ್ಮದ್ ನಬಿ 
ಕ್ರಿಕೆಟ್

T20 World Cup 2026: ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದ ವೇಳೆ ಅಂಪೈರ್ ಜೊತೆ ವಾಗ್ವಾದ; ಅಫ್ಘಾನಿಸ್ತಾನದ ಆಲ್‌ರೌಂಡರ್‌ಗೆ ದಂಡ!

ಅಫ್ಘಾನಿಸ್ತಾನದ ಇನಿಂಗ್ಸ್‌ನ 14ನೇ ಓವರ್‌ನ ಆರಂಭದಲ್ಲಿ ದಕ್ಷಿಣ ಆಫ್ರಿಕಾದ ಬೌಲರ್ ಲುಂಗಿ ಎನ್‌ಗಿಡಿ ಅವರ wrist-band ಕುರಿತು ನಬಿ ಅಂಪೈರ್‌ಗಳೊಂದಿಗೆ ದೀರ್ಘಕಾಲ ವಾಗ್ವಾದದಲ್ಲಿ ತೊಡಗಿದ್ದರು.

ಅಹಮದಾಬಾದ್: ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಅಂಪೈರ್ ತೀರ್ಪನ್ನು ಪಾಲಿಸದಿದ್ದಕ್ಕಾಗಿ ಅಫ್ಘಾನಿಸ್ತಾನದ ಅನುಭವಿ ಆಲ್‌ರೌಂಡರ್ ಮೊಹಮ್ಮದ್ ನಬಿ ಅವರಿಗೆ ಪಂದ್ಯ ಶುಲ್ಕದ ಶೇ 15 ರಷ್ಟು ದಂಡ ವಿಧಿಸಲಾಗಿದೆ.

ಅಫ್ಘಾನಿಸ್ತಾನದ ಇನಿಂಗ್ಸ್‌ನ 14ನೇ ಓವರ್‌ನ ಆರಂಭದಲ್ಲಿ ದಕ್ಷಿಣ ಆಫ್ರಿಕಾದ ಬೌಲರ್ ಲುಂಗಿ ಎನ್‌ಗಿಡಿ ಅವರ wrist-band ಕುರಿತು ನಬಿ ಅಂಪೈರ್‌ಗಳೊಂದಿಗೆ ದೀರ್ಘಕಾಲ ವಾಗ್ವಾದದಲ್ಲಿ ತೊಡಗಿದ್ದರು.

'ಅಂತರರಾಷ್ಟ್ರೀಯ ಪಂದ್ಯದ ಸಮಯದಲ್ಲಿ ಅಂಪೈರ್ ಸೂಚನೆಯನ್ನು ಪಾಲಿಸದಿರುವಿಕೆಗೆ ಸಂಬಂಧಿಸಿದ ಐಸಿಸಿ ಆಟಗಾರರು ಮತ್ತು ಆಟಗಾರರ ಬೆಂಬಲ ಸಿಬ್ಬಂದಿ ನೀತಿ ಸಂಹಿತೆಯ ಆರ್ಟಿಕಲ್ 2.4 ಅನ್ನು ನಬಿ ಉಲ್ಲಂಘಿಸಿದ್ದಾರೆ ಎಂದು ಕಂಡುಬಂದಿದೆ' ಎಂದು ಐಸಿಸಿ ಹೇಳಿಕೆಯಲ್ಲಿ ತಿಳಿಸಿದೆ.

ದಂಡದ ಜೊತೆಗೆ, ನಬಿಗೆ ಡಿಮೆರಿಟ್ ಪಾಯಿಂಟ್ ಕೂಡ ನೀಡಲಾಗಿದೆ ಮತ್ತು ಇದು 24 ತಿಂಗಳ ಅವಧಿಯಲ್ಲಿ ಅವರ ಮೊದಲ ಅಪರಾಧವಾಗಿದೆ.

'ನಬಿ ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಮತ್ತು ಐಸಿಸಿ ಅಂತರರಾಷ್ಟ್ರೀಯ ಪಂದ್ಯ ರೆಫರಿಗಳ ಸಮಿತಿಯ ಡೇವಿಡ್ ಗಿಲ್ಬರ್ಟ್ ಪ್ರಸ್ತಾಪಿಸಿದ ಶಿಕ್ಷೆಯನ್ನು ಸ್ವೀಕರಿಸಿದ್ದಾರೆ. ಆದ್ದರಿಂದ ಔಪಚಾರಿಕ ವಿಚಾರಣೆಯ ಅಗತ್ಯವಿರಲಿಲ್ಲ' ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.

ಮೈದಾನದಲ್ಲಿದ್ದ ಅಂಪೈರ್‌ಗಳಾದ ಜಯರಾಮನ್ ಮದನಗೋಪಾಲ್ ಮತ್ತು ಶರ್ಫುದ್ದೌಲಾ ಇಬ್ನೆ ಶಾಹಿದ್, ಮೂರನೇ ಅಂಪೈರ್ ನಿತಿನ್ ಮೆನನ್ ಮತ್ತು ನಾಲ್ಕನೇ ಅಂಪೈರ್ ಕೆಎನ್ ಅನಂತಪದ್ಮನಾಭನ್ ನಬಿ ಅವರ ಮೇಲೆ ಆರೋಪ ಹೊರಿಸಿದ್ದರು.

ಬುಧವಾರ ನಡೆದ ಟಿ20 ವಿಶ್ವಕಪ್ 2026ರ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಎರಡು ಸೂಪರ್ ಓವರ್‌ಗಳ ನಂತರ ಅಫ್ಘಾನಿಸ್ತಾನವನ್ನು ಸೋಲಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

OP Sindoor ಎಫೆಕ್ಟ್: ಮೆಗಾ Rafale ಜೆಟ್ ಯೋಜನೆಗೆ 'ಕೇಂದ್ರ' ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ!

ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣ: ಏರ್ ಪೋರ್ಟ್ ನಲ್ಲಿ ಬಿಜೆಪಿ MLA ಬೈರತಿ ಬಸವರಾಜ್ ಬಂಧನ!

ವೈಯಕ್ತಿಕ ಆದಾಯ ತೆರಿಗೆ ಸಂಗ್ರಹ ಹೆಚ್ಚಳ: ಮಧ್ಯಮ ವರ್ಗ ತುಳಿಯುವ ಪ್ರಯತ್ನವೇ? ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

ಮಾರಾಟವಾಗದೇ ಉಳಿದದ್ದಾ? or ಕುಡಿದು ಉಳಿದದ್ದಾ?: ದೆಹಲಿ ಸ್ಟೇಡಿಯಂ ಸಿಬ್ಬಂದಿ ಪಾನೀಯ ತುಂಬುತ್ತಿರುವ Video Viral

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ರದ್ದುಗೊಳಿಸಲು ಬಿಜೆಪಿ ಸಂಸದ ನೋಟಿಸ್; ಕಾರಣ ಏನು ಗೊತ್ತಾ?

SCROLL FOR NEXT