ಸಂಜಯ್ ಮಂಜ್ರೇಕರ್ 
ಕ್ರಿಕೆಟ್

T20 World Cup 2026: ಹ್ಯಾಂಡ್ ಶೇಕ್ ವಿವಾದ; ಟೀಂ ಇಂಡಿಯಾ ವಿರುದ್ದ ಸಂಜಯ್ ಮಂಜ್ರೇಕರ್ ಕಿಡಿ! ನೆಟ್ಟಿಗರ ತರಾಟೆ

ಈ ಮಧ್ಯೆ ಭಾರತ ಹ್ಯಾಂಡ್ ಶೇಕ್ ಮಾಡದಿರಲು ನಿರ್ಧರಿಸಿದೆ ಎಂದು ವರದಿ ಮಾಡಿದೆ. ಈ ಬೆನ್ನಲ್ಲೆ ಭಾರತ ತಂಡದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್ ನೋ ಹ್ಯಾಂಡ್‌ ಶೇಕ್ ಅಭಿಯಾನದ ಬಗ್ಗೆ ಕಿಡಿಕಾರಿದ್ದಾರೆ.

ಕೊಲಂಬೊ: ಇಲ್ಲಿನ ಪ್ರೇಮದಾಸ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಭಾರತ - ಪಾಕಿಸ್ತಾನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಉಭಯ ತಂಡಗಳ ನಾಯಕರು ಹ್ಯಾಂಡ್‌ ಶೇಕ್ ಮಾಡುತ್ತಾರೆಯೋ ಇಲ್ಲವೋ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ.

ಈ ಮಧ್ಯೆ ಭಾರತ ಹ್ಯಾಂಡ್ ಶೇಕ್ ಮಾಡದಿರಲು ನಿರ್ಧರಿಸಿದೆ ಎಂದು ವರದಿ ಮಾಡಿದೆ. ಈ ಬೆನ್ನಲ್ಲೆ ಭಾರತ ತಂಡದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್ ನೋ ಹ್ಯಾಂಡ್‌ ಶೇಕ್ ಅಭಿಯಾನದ ಬಗ್ಗೆ ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್‌ ಮಾಡಿರುವ ಸಂಜಯ್ ಮಂಜ್ರೇಕರ್, ಭಾರತ ಆರಂಭಿಸಿರುವ ಈ ನೋ ಹ್ಯಾಂಡ್‌ ಶೇಕ್ ಎಂಬುದು ತುಂಬಾ ಮೂರ್ಖತನದಿಂದ ಕೂಡಿದ ಕೆಲಸ. ನಮ್ಮಂತಹ ರಾಷ್ಟ್ರಕ್ಕೆ ಇದು ಯೋಗ್ಯ ಅಲ್ಲ. ಆಟದ ಉತ್ಸಾಹದಲ್ಲಿ ಸರಿಯಾಗಿ ಆಟವಾಡಿ ಅಥವಾ ಆಟವಾಡಲೇಬೇಡಿ " ಎಂದು ಕಿಡಿಕಾರಿದ್ದಾರೆ.

ಸಂಜಯ್ ಮಂಜ್ರೇಕರ್ ಟ್ವೀಟ್‌ ವಿರುದ್ಧ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.ಈತ ಯಾವಾಗಿನಿಂದ ಪಾಕಿಸ್ತಾನಕ್ಕೆ ಬೆಂಬಲ ಕೊಡಲು ಆರಂಭಿಸಿದ", "ಭಯೋತ್ಪಾದಕರ ಜತೆ ಕೈಕುಲುಕುವುದಕ್ಕೆ ನಮಗೇನು ಬುದ್ದಿಕೆಟ್ಟಿದೆಯಾ " ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಪಾಕಿಸ್ತಾನ ತಂಡದ ಜತೆ ನಿಂತಿರುವ ಫೋಟೋಗಳು, ವ್ಯಂಗ್ಯ ಚಿತ್ರಗಳನ್ನು ರಚಿಸಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!