ಕ್ರೀಡಾಂಗಣ ತೊರೆದ ಮೊಹ್ಸಿನ್ ನಖ್ವಿ 
ಕ್ರಿಕೆಟ್

T20 ವಿಶ್ವಕಪ್ 2026: ಮುಜುಗರ ತಪ್ಪಿಸಿಕೊಳ್ಳಲು ಪಂದ್ಯ ಮುಕ್ತಾಯಕ್ಕೂ ಮೊದಲೇ ಮೈದಾನದಿಂದ ಕಾಲ್ಕಿತ್ತ Mohsin Naqvi!

ಕೊಲಂಬೋದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಭಾರತದ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ 61 ರನ್ ಗಳ ಹೀನಾಯ ಸೋಲುಕಂಡಿತು.

ಕೊಲಂಬೋ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ನಿನ್ನೆಯ ಭಾರತದ ವಿರುದ್ಧದ ಪಂದ್ಯದಲ್ಲಿ ಸೋಲು ಖಚಿತವಾಗುತ್ತಲೇ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಮುಖ್ಯಸ್ಥ ಮೊಹ್ಸಿನ್ ನಖ್ವಿ ಕ್ರೀಡಾಂಗಣದಿಂದ ಕಾಲ್ಕಿತ್ತ ಪ್ರಸಂಗ ನಡೆದಿದೆ.

ನಿನ್ನೆ ಕೊಲಂಬೋದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಭಾರತದ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ 61 ರನ್ ಗಳ ಹೀನಾಯ ಸೋಲುಕಂಡಿತು. ಅಂತೆಯೇ ಈ ಭರ್ಜರಿ ಗೆಲುವಿನೊಂದಿಗೆ ಭಾರತ ಟೂರ್ನಿಯ ಸೂಪರ್ 8 ಹಂತ ಪ್ರವೇಶಿಸಿದ್ದು, ಗ್ರೂಪ್ ಎ ನಿಂದ ಸೂಪರ್ 8 ಪ್ರವೇಶಿಸಿದ ಮೊದಲ ತಂಡ ಎಂಬ ಕೀರ್ತಿಗೂ ಭಾಜನವಾಗಿದೆ.

ಮೊದಲು ಬೌಲಿಂಗ್-ಬಳಿಕ ಬ್ಯಾಟಿಂಗ್.. ತಿಣುಕಾಡಿದ ಪಾಕಿಸ್ತಾನ

ಟಾಸ್ ಗೆದ್ದರೂ ಭಾರತಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ನೀಡಿದ ಪಾಕಿಸ್ತಾನ ಭಾರತದ ಅಭಿಷೇಕ್ ಶರ್ಮಾರನ್ನು ಔಟ್ ಮಾಡುವ ಮೂಲಕ ಆರಂಭಿಕ ಆಘಾತ ನೀಡಿತಾದರೂ ಬಳಿಕ ಇಶಾನ್ ಕಿಶನ್ ರ ಸ್ಫೋಟಕ ಬ್ಯಾಟಿಂಗ್ ಗೆ ತತ್ತರಿಸಿತು.

ಇಶಾನ್ ಕಿಶನ್ 40 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 10 ಬೌಂಡರಿಗಳ ನೆರವಿನಿಂದ 77 ರನ್ ಪೇರಿಸಿ ಭಾರತದ ಸವಾಲಿನ ಮೊತ್ತಕ್ಕೆ ಕಾರಣರಾದರು.

ಭಾರತ ನೀಡಿದ 176 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಪಾಕಿಸ್ತಾನಕ್ಕೆ ಭಾರತದ ಸ್ಪಿನ್ನರ್ ಗಳು ಅಪಾಯಕಾರಿಯಾಗುತ್ತಾರೆ ಎಂದು ಎಣಿಸಲಾಗಿತ್ತು. ಆದರೆ ತಮ್ಮ ಓವರ್ ನಲ್ಲೇ ವೇಗಿ ಬುಮ್ರಾ ಪಾಕಿಸ್ತಾನಕ್ಕೆ ಡಬಲ್ ಆಘಾತ ನೀಡಿದರು.

ಬಳಿಕ ಹಾರ್ದಿಕ್ ಪಾಂಡ್ಯಾ ಕೂಡ 2 ವಿಕೆಟ್ ಪಡೆದು ಪಾಕಿಸ್ತಾನಕ್ಕೆ ಮತ್ತೆ ಶಾಕ್ ಕೊಟ್ಟರು. ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಪಾಕಿಸ್ತಾನ ಅಂತಿಮವಾಗಿ 18 ಓವರ್ ನಲ್ಲಿ 114 ರನ್ ಗಳಿಸಿ ಆಲೌಟ್ ಆಯಿತು. ಆ ಮೂಲಕ 61 ರನ್ ಗಳ ಹೀನಾಯ ಸೋಲುಕಂಡಿತು.

ಪಂದ್ಯ ಮುಕ್ತಾಯಕ್ಕೂ ಮೊದಲೇ ಮೈದಾನದಿಂದ ಕಾಲ್ಕಿತ್ತ ಮೊಹ್ಸಿನ್ ನಖ್ವಿ

ಇನ್ನು ಈ ಪಂದ್ಯ ವೀಕ್ಷಣೆಗೆ ಬಂದಿದ್ದ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಅಧ್ಯಕ್ಷ ಮೊಹ್ಸಿನ್ ನಖ್ವಿ ಪಂದ್ಯ ಮುಕ್ತಾಯಕ್ಕೂ ಮೊದಲೇ ಕ್ರೀಡಾಂಗಣ ತೊರೆದ ಪ್ರಸಂಗ ನಡೆದಿದೆ. ಅತ್ತ ಪಾಕಿಸ್ತಾನ ತಂಡದ ವಿಕೆಟ್ ಗಳು ಉರುಳುತ್ತಲೇ ತಂಡದ ಸೋಲು ಖಚಿತವಾಗಿತ್ತು.

ಹೀಗಾಗಿ ಮೊಹ್ಸಿನ್ ನಖ್ವಿ ಕ್ರೀಡಾಂಗಣದಲ್ಲಿ ಆಗಬಹುದಾಗಿದ್ದ ಮುಜುಗರ ತಪ್ಪಿಸಿಕೊಳ್ಳಲು ಕ್ರೀಡಾಂಗಣದಿಂದ ಕಾಲ್ಕಿತ್ತಿದ್ದಾರೆ.

ನಖ್ವಿ ಕ್ರೀಡಾಂಗಣ ತೊರೆಯುತ್ತಿರುವ ವಿಡಿಯೋಗಳು ಇದೀಗ ವ್ಯಾಪಕ ವೈರಲ್ ಆಗುತ್ತಿದೆ. ನಖ್ವಿ ಕಪ್ಪು ಬಣ್ಣದ ಕಾರಿನಲ್ಲಿ ಕ್ರೀಡಾಂಗಣದಿಂದ ನಿರ್ಗಮಿಸುವ ವಿಡಿಯೋ ಹರಿದಾಡುತ್ತಿದೆ. ನಖ್ವಿ ಕ್ರೀಡಾಂಗಣದಿಂದ ಬೇಗನೆ ನಿರ್ಗಮಿಸಲು ಅಧಿಕೃತ ಕಾರಣ ತಿಳಿದಿಲ್ಲವಾದರೂ, ಅವರು ನಿರ್ಗಮಿಸಿದ ಸಮಯಕ್ಕೆ ಪಾಕಿಸ್ತಾನ ಚೇಸಿಂಗ್ ತೀವ್ರ ಕುಸಿತ ಅನುಭವಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತದ ಹಿತಾಸಕ್ತಿಯನ್ನು ಮಾರಾಟ ಮಾಡಬೇಡಿ: ರಾಹುಲ್ ಪ್ರಶ್ನೆಗೆ ಪ್ರಾಮಾಣಿಕ ಉತ್ತರ ನೀಡಿ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಆಗ್ರಹ

ಪವರ್​ಫುಲ್ ಮ್ಯಾನ್ ಯತೀಂದ್ರ ನಮ್ಮ ಹೈಕಮಾಂಡ್ -ಗಣಿಗ ರವಿ: ಖರ್ಗೆ ಒಗ್ಗಟ್ಟಿನ ಪಾಠಕ್ಕೂ ಡೋಂಟ್ ಕೇರ್; ಇಮ್ಮಡಿಯಾದ ಕಾಂಗ್ರೆಸ್ ಬಣ ಬಡಿದಾಟ!

'2048 ಬಂದ್ರೂ ಡಿಕೆ ಶಿವಕುಮಾರ್ ಸಿಎಂ ಆಗಲ್ಲ: ಏಕಂದ್ರೆ ನಾವು ಬಿಡಲ್ಲ; ಇನ್ನು ಮುಂದೆ ದೇಶವೂ ನಮ್ಮದೇ, ರಾಜ್ಯವೂ ನಮ್ಮದೇ'

4 ಕೋಟಿ ರೂ. ಮೌಲ್ಯದ ಗ್ರಾಹಕರ ಚಿನ್ನಾಭರಣ ಕದ್ದು, ಆನ್‌ಲೈನ್ ಬೆಟ್ಟಿಂಗ್‌: ಬ್ಯಾಂಕ್ ಮ್ಯಾನೇಜರ್ ಬಂಧನ, ಸಿಕ್ಕಿಬಿದ್ದಿದ್ದೇ ರೋಚಕ!

ಗದ್ದುಗೆ ಗುದ್ದಾಟ: ಹೈಕಮಾಂಡ್ ಜೊತೆ ಆಗಿರುವ ಮಾತುಕತೆ ಸಿಎಂ, ಡಿಸಿಎಂಗೆ ಮಾತ್ರ ಗೊತ್ತು; ಮುನಿಯಪ್ಪ

SCROLL FOR NEXT