ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ 
ಕ್ರಿಕೆಟ್

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

ಎಂಟು ಬಾರಿ ಚಾಂಪಿಯನ್ ಆಗಿರುವ ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ತಂಡ 6 ವಿಕೆಟ್ ನಷ್ಟಕ್ಕೆ 527 ರನ್ ಗಳಿಸಿ, ಎರಡನೇ ದಿನದಾಟವನ್ನು ಅಂತ್ಯಗೊಳಿಸಿದೆ.

ಹುಬ್ಬಳ್ಳಿ: ಹುಬ್ಬಳ್ಳಿಯ ಕೆಎಸ್ ಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್‌ನ 2ನೇ ದಿನವಾದ ಬುಧವಾರ, ಮೊದಲ ಬಾರಿ ರಣಜಿ ಟ್ರೋಫಿ ಫೈನಲ್ ತಲುಪಿರುವ ಜಮ್ಮು ಮತ್ತು ಕಾಶ್ಮೀರ ತಂಡ, ಕರ್ನಾಟಕದ ವಿರುದ್ಧ ದಿಟ್ಟ ಪ್ರದರ್ಶನ ನೀಡಿ ಬೃಹತ್ ಮೊತ್ತ ಸೇರಿಸಿದೆ.

ಎಂಟು ಬಾರಿ ಚಾಂಪಿಯನ್ ಆಗಿರುವ ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ತಂಡ 6 ವಿಕೆಟ್ ನಷ್ಟಕ್ಕೆ 527 ರನ್ ಗಳಿಸಿ, ಎರಡನೇ ದಿನದಾಟವನ್ನು ಅಂತ್ಯಗೊಳಿಸಿದೆ.

ಮೊದಲನೇ ದಿನಾಂತ್ಯಕ್ಕೆ ಎರಡು ವಿಕೆಟ್ ಕಳೆದುಕೊಂಡು 284 ರನ್ ಗಳಿಸಿದ್ದ ಜಮ್ಮು ಮತ್ತು ಕಾಶ್ಮೀರ ತಂಡ, ಇಂದು ಆಟ ಮುಂದುವರಿಸಿ, ಕನ್ಹಯ್ಯಾ ವಾಧವನ್ ಮತ್ತು ನಾಯಕ ಪರಾಸ್ ದೋಗ್ರಾ ಅವರ ತಲಾ 70 ರನ್ ಗಳ ನೆರವಿನಿಂದ 527 ರನ್ ಗಳನ್ನು ಕಲೆ ಹಾಕಿದೆ.

ಶುಭಮ್ ಪುಂಡಿರ್(121) ಈ ಹಿಂದೆಯೇ ಉತ್ತಮ ಪ್ರದರ್ಶನ ನೀಡಿದ್ದರು. ಆದರೆ ಯಾವರ್ ಹಸನ್(88) ಮತ್ತು ಅಬ್ದುಲ್ ಸಮದ್ (61) ಕರ್ನಾಟಕ ಬೌಲರ್‌ಗಳನ್ನು ದೀರ್ಘಾವಧಿಯವರೆಗೆ ದಂಡಿಸಿದರು.

ಕರ್ನಾಟಕ ಪರ ವಿದ್ಯಾಧರ ಪಾಟೀಲ್(1-104), ಶಿಖರ್ ಶೆಟ್ಟಿ(1-112)ಹಾಗೂ ಶ್ರೇಯಸ್ ಗೋಪಾಲ್(1-130)ತಲಾ ಒಂದು ವಿಕೆಟ್‌ಗಳನ್ನು ಪಡೆದಿದ್ದಾರೆ.

ಸಂಕ್ಷಿಪ್ತ ಸ್ಕೋರ್‌

ಜಮ್ಮು ಮತ್ತು ಕಾಶ್ಮೀರ 156 ಓವರ್‌ಗಳಲ್ಲಿ 527/6

ಶುಭಮ್ ಪುಂಡೀರ್ 121, ಯಾವರ್ ಹಸನ್ 88, ಪಾರಸ್ ಡೋಗ್ರಾ 70, ಕನ್ಹಯ್ಯಾ ವಾಧವನ್ 70, ಅಬ್ದುಲ್ ಸಮದ್ 61, ಸಾಹಿಲ್ ಲೋತ್ರಾ 57 ಹಾಗೂ ಅಬಿದ್ ಮುಷ್ತಾಕ್ 20 ರನ್ ಗಳೊಂದಿಗೆ ಬ್ಯಾಟಿಂಗ್ ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿ.ಕೆ ಶಿವಕುಮಾರ್; ಸಿದ್ದರಾಮಯ್ಯ ಮಾಹಿತಿ; ಮಧ್ಯಾಹ್ನ 2.30ಕ್ಕೆ ರಾಜೀನಾಮೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT