ರಿಂಕು ಸಿಂಗ್ 
ಕ್ರಿಕೆಟ್

ರಿಂಕು ಸಿಂಗ್ ತಂದೆಗೆ ಲಿವರ್ ಕ್ಯಾನ್ಸರ್; ಮನೆಗೆ ಮರಳಿದ ಟೀಂ ಇಂಡಿಯಾ ಬ್ಯಾಟರ್; ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೆ ಅಲಭ್ಯ?

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ವಿಷಯದ ಬಗ್ಗೆ ಇನ್ನೂ ಯಾವುದೇ ಮಾಹಿತಿ ನೀಡಿಲ್ಲ. ಭಾರತ ಮತ್ತು ಜಿಂಬಾಬ್ವೆ ನಡುವಿನ ಪಂದ್ಯಕ್ಕೆ ರಿಂಕು ಲಭ್ಯರಿರುತ್ತಾರೆಯೇ ಎಂಬುದು ತಿಳಿದಿಲ್ಲ.

ಫೆಬ್ರುವರಿ 26 ರಂದು ನಡೆಯಲಿರುವ ಭಾರತ vs ಜಿಂಬಾಬ್ವೆ ಪಂದ್ಯಕ್ಕೂ ಮುನ್ನ ಭಾರತ ಕ್ರಿಕೆಟ್ ತಂಡದ ಬ್ಯಾಟ್ಸ್‌ಮನ್ ರಿಂಕು ಸಿಂಗ್ ತವರಿಗೆ ಮರಳಿದ್ದಾರೆ. ಪಂದ್ಯಕ್ಕಾಗಿ ಅಭ್ಯಾಸ ಮಾಡಲು ಟೀಂ ಇಂಡಿಯಾ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಸೇರಿದೆ.

ಟೀಂ ಇಂಡಿಯಾ ಸಂಜೆ 5.30ಕ್ಕೆ ಅಭ್ಯಾಸ ಆರಂಭಿಸಬೇಕಿತ್ತು. ಆದರೆ, ರಿಂಕು ಎಲ್ಲಿಯೂ ಕಾಣಿಸಲಿಲ್ಲ. ತರಬೇತಿ ಅವಧಿಯ ಅರ್ಧಭಾಗದ ನಂತರ, ರಿಂಕು ಕುಟುಂಬದ ತುರ್ತು ಪರಿಸ್ಥಿತಿಯಿಂದಾಗಿ ಮನೆಗೆ ಮರಳಿದ್ದಾರೆ ಎಂದು ತಿಳಿದುಬಂದಿದೆ. ರಿಂಕು ಅವರ ತಂದೆ ಖಾಂಚಂದ್ ಸಿಂಗ್ ಅವರ ಅನಾರೋಗ್ಯದಿಂದಾಗಿ ಮನೆಗೆ ಮರಳದ್ದಾರೆ ಎನ್ನಲಾಗಿದೆ. ಸ್ಟಾರ್ ಬ್ಯಾಟ್ಸ್‌ಮನ್ ತಂದೆ ಒಂದು ವರ್ಷದಿಂದ ಲಿವರ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಮತ್ತು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಅವರ ಸ್ಥಿತಿ ಹದಗೆಟ್ಟಿದೆ ಮತ್ತು ಅದಕ್ಕಾಗಿಯೇ ರಿಂಕು ನೋಯ್ಡಾಗೆ ತೆರಳಿದ್ದಾರೆ.

'ಸುಮಾರು ಒಂದು ವರ್ಷದ ಹಿಂದೆ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ನಂತರ ರಿಂಕು ಅವರ ಒತ್ತಾಯದ ಮೇರೆಗೆ ಅವರು ಎಲ್‌ಪಿಜಿ ಸಿಲಿಂಡರ್‌ಗಳನ್ನು ಡೆಲಿವರಿ ಮಾಡುವ ಕೆಲಸ ತೊರೆದಿದ್ದರು. ಅಂದಿನಿಂದ, ಅವರು ನೋಯ್ಡಾ ಆಸ್ಪತ್ರೆಯ ವೈದ್ಯರ ಮಾರ್ಗದರ್ಶನದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ದುಬಾರಿ ಇಂಜೆಕ್ಷನ್‌ಗಳನ್ನು ಸಹ ನೀಡುತ್ತಿದ್ದರು' ಎಂದು ಮೂಲವೊಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದೆ. 'ಅವರ ತಂದೆಯ ಸ್ಥಿತಿ ಹದಗೆಟ್ಟಿತು, ನಂತರ ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಯಿತು. ರಿಂಕು ಸಿಂಗ್‌ಗೆ ಈ ಬಗ್ಗೆ ತಿಳಿಸಲಾಯಿತು' ಎಂದು ಮೂಲಗಳು ತಿಳಿಸಿವೆ.

ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೆ ಅಲಭ್ಯ?

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ವಿಷಯದ ಬಗ್ಗೆ ಇನ್ನೂ ಯಾವುದೇ ಮಾಹಿತಿ ನೀಡಿಲ್ಲ. ಭಾರತ ಮತ್ತು ಜಿಂಬಾಬ್ವೆ ನಡುವಿನ ಪಂದ್ಯಕ್ಕೆ ರಿಂಕು ಲಭ್ಯರಿರುತ್ತಾರೆಯೇ ಎಂಬುದು ತಿಳಿದಿಲ್ಲ. ಅವರು ತಂಡಕ್ಕೆ ಮರಳಲು ಇನ್ನೂ 2 ದಿನಗಳಿವೆ.

ಸೂಪರ್ 8 ಅರ್ಹತೆಯ ಹಂತದಲ್ಲಿರುವುದರಿಂದ, ಆಯ್ಕೆ ಸಮಿತಿ ಮತ್ತು ತಂಡದ ಆಡಳಿತ ಮಂಡಳಿ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಬಹುಶಃ ಅವರು ರಿಂಕು ಜೊತೆಯೇ ಮುಂದುವರಿಯಬಹುದು ಅಥವಾ ಬೇರೆ ಆಟಗಾರನಿಗೆ ಸ್ಥಾನ ನೀಡಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್