ಕ್ರಿಕೆಟ್

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ದಕ್ಷಿಣ ಆಫ್ರಿಕಾ ತಂಡವು T20 ವಿಶ್ವಕಪ್‌ನ ಸೂಪರ್ 8 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿದ್ದು ವಿಶ್ವಕಪ್ ಸೆಮಿಫೈನಲ್‌ಗೆ ಭಾರತದ ಹಾದಿ ಈಗ ಸ್ಪಷ್ಟವಾಗಿದೆ. ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡವು 176 ರನ್ ಗಳಿಸಿತು.

ದಕ್ಷಿಣ ಆಫ್ರಿಕಾ ತಂಡವು T20 ವಿಶ್ವಕಪ್‌ನ ಸೂಪರ್ 8 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿದ್ದು ವಿಶ್ವಕಪ್ ಸೆಮಿಫೈನಲ್‌ಗೆ ಭಾರತದ ಹಾದಿ ಈಗ ಸ್ಪಷ್ಟವಾಗಿದೆ. ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡವು 176 ರನ್ ಗಳಿಸಿತು, ಇದನ್ನು ದಕ್ಷಿಣ ಆಫ್ರಿಕಾ 17 ನೇ ಓವರ್‌ನಲ್ಲಿ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡವು ನಿಗದಿತ 20 ಓವರ್‌ಗಳಲ್ಲಿ 176 ರನ್ ಗಳಿಸಿ ಆಫ್ರಿಕಾಗೆ 177 ರನ್‌ಗಳ ಗುರಿ ನೀಡಿತ್ತು. ಈ ಗುರಿಯನ್ನು ಆಫ್ರಿಕಾ 16.1 ಓವರ್ ನಲ್ಲಿ 1 ವಿಕೆಟ್ ನಷ್ಟಕ್ಕೆ 177 ರನ್ ಬಾರಿಸಿ ಗೆಲುವಿನ ನಗೆ ಬೀರಿದೆ.

ವೆಸ್ಟ್ ಇಂಡೀಸ್ ಪರ, ರೊಮಾರಿಯೊ ಶೆಫರ್ಡ್ 37 ಎಸೆತಗಳಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್‌ಗಳ ಸಹಾಯದಿಂದ 52 ರನ್ ಗಳಿಸಿ ಅರ್ಧಶತಕ ಗಳಿಸಿದರು. ಜೇಸನ್ ಹೋಲ್ಡರ್ ಅವರಿಗೆ ಉತ್ತಮ ಬೆಂಬಲ ನೀಡಿದರು. ಇನ್ನಿಂಗ್ಸ್‌ನ ಎರಡನೇ ಕೊನೆಯ ಎಸೆತದಲ್ಲಿ ರನೌಟ್ ಆದರು. ಶೆಫರ್ಡ್ ಮತ್ತು ಹೋಲ್ಡರ್ 8ನೇ ವಿಕೆಟ್‌ಗೆ 57 ಎಸೆತಗಳಲ್ಲಿ 89 ರನ್‌ಗಳ ಐತಿಹಾಸಿಕ ಜೊತೆಯಾಟವಾಡಿದರು.

ಈ ಇಬ್ಬರು ಬ್ಯಾಟ್ಸ್‌ಮನ್‌ಗಳು 83 ರನ್ಗಳಿಗೆ ಏಳು ವಿಕೆಟ್‌ಗಳನ್ನು ಕಳೆದುಕೊಂಡಿದ್ದ ವೆಸ್ಟ್ ಇಂಡೀಸ್ ತಂಡಕ್ಕೆ ಗೌರವಾನ್ವಿತ ಸ್ಕೋರ್‌ಗೆ ಸಹಾಯ ಮಾಡಿದ್ದಾರೆ. ದಕ್ಷಿಣ ಆಫ್ರಿಕಾ ಪರ, ಲುಂಗಿ ಎನ್‌ಗಿಡಿ 3 ವಿಕೆಟ್‌ಗಳನ್ನು, ಕಾರ್ಬಿನ್ ಬಾಷ್ 2 ಮತ್ತು ರಬಾಡ 2 ವಿಕೆಟ್‌ಗಳನ್ನು ಕಬಳಿಸಿದರು. ಮಾರ್ಕೊ ಜಾನ್ಸೆನ್ ನಾಲ್ಕು ಓವರ್‌ಗಳಲ್ಲಿ 50 ರನ್‌ಗಳನ್ನು ಬಿಟ್ಟುಕೊಟ್ಟು ವಿಕೆಟ್ ಪಡೆಯಲಿಲ್ಲ.

ಸೆಮಿಫೈನಲ್ ದೃಷ್ಟಿಯಿಂದಲೂ ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕವಾಗಿತ್ತು. ಐಡೆನ್ ಮಾರ್ಕ್ರಾಮ್ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡವು ಇದುವರೆಗಿನ ತನ್ನ ಐದು ಪಂದ್ಯಗಳನ್ನು ಗೆದ್ದಿದೆ. ಹಿಂದಿನ ಪಂದ್ಯದಲ್ಲಿ ಭಾರತವನ್ನು ಇದೇ ಮೈದಾನದಲ್ಲಿ ಸೋಲಿಸಿದ ನಂತರ ಆತ್ಮವಿಶ್ವಾಸದಿಂದ ಬೀಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ-ಇರಾನ್ ಶಾಂತಿ ಒಪ್ಪಂದ 'ಈಗ ಸಂಪೂರ್ಣ: ಜೂನ್ 19 ರಂದು ಸಹಿ ಹಾಕಿದ ಬಳಿಕ ಹಾರ್ಮುಜ್ ರೀ ಓಪನ್- ಡೊನಾಲ್ಡ್ ಟ್ರಂಪ್ ಘೋಷಣೆ!

ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ತಾಯಿಯ ಬಗ್ಗೆ ಯಾರಿಗೂ ಗೊತ್ತಿಲ್ಲದ ಮಾಹಿತಿ ಬಿಚ್ಚಿಟ್ಟ ಬ್ಯಾಲದ ಕೋಚ್! VIDEO

ರಾಜ್ಯದಲ್ಲಿ ಮುಂಗಾರು ಚುರುಕು: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ yellow ಅಲರ್ಟ್, ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

ಜಗತ್ತನ್ನು ಬೆರಗುಗೊಳಿಸಿದ ಮಾನವ ನಿರ್ಮಿತ ಅದ್ಭುತಗಳು: ಜೀವನದಲ್ಲಿ ಒಮ್ಮೆಯಾದರೂ ಭೇಟಿ ನೀಡಲೇಬೇಕಾದ ಪ್ರವಾಸಿ ತಾಣಗಳಿವು..!

1993ರಲ್ಲಿ 3 ಎಕರೆ ಇದ್ದ ಆಸ್ತಿ 2018ಕ್ಕೆ 1,400 ಕೋಟಿ ಹೇಗಾಯ್ತು?: ರೈತರಿಗೂ ಶ್ರೀಮಂತರಾಗುವ ಮಾರ್ಗ ಹೇಳಿಕೊಡಿ; ಕುಮಾರಸ್ವಾಮಿ

SCROLL FOR NEXT