ಜಮ್ಮು ಮತ್ತು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ 
ಕ್ರಿಕೆಟ್

ಹುಬ್ಬಳ್ಳಿ: ಕರ್ನಾಟಕದ ವಿರುದ್ಧ ಗೆದ್ದು ಚೊಚ್ಚಲ Ranji Trophy ತೆಗೆದುಕೊಂಡು ಹೋಗ್ತೀವಿ; ಜಮ್ಮು-ಕಾಶ್ಮೀರ ಸಿಎಂ; Video

ಕೆಎಸ್‌ಸಿಎ ಹುಬ್ಬಳ್ಳಿ ಕ್ರಿಕೆಟ್ ಮೈದಾನದಲ್ಲಿ ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ ನಡುವಿನ 2025-26ರ ರಣಜಿ ಟ್ರೋಫಿ ಫೈನಲ್ ಪಂದ್ಯ ನಡೆಯುತ್ತಿದೆ. ನಾಲ್ಕನೇ ದಿನದ ಆಟದ ಅಂತ್ಯದ ವೇಳೆಗೆ ಜಮ್ಮು ಮತ್ತು ಕಾಶ್ಮೀರ ಕರ್ನಾಟಕ ವಿರುದ್ಧ 477 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿದೆ.

ಹುಬ್ಬಳ್ಳಿ: ಕೆಎಸ್‌ಸಿಎ ಹುಬ್ಬಳ್ಳಿ ಕ್ರಿಕೆಟ್ ಮೈದಾನದಲ್ಲಿ ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ ನಡುವಿನ 2025-26ರ ರಣಜಿ ಟ್ರೋಫಿ ಫೈನಲ್ ಪಂದ್ಯ ನಡೆಯುತ್ತಿದೆ. ನಾಲ್ಕನೇ ದಿನದ ಆಟದ ಅಂತ್ಯದ ವೇಳೆಗೆ ಜಮ್ಮು ಮತ್ತು ಕಾಶ್ಮೀರ ಕರ್ನಾಟಕ ವಿರುದ್ಧ 477 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿದೆ. ಅಲ್ಲದೆ ಐತಿಹಾಸಿಕ ಚೊಚ್ಚಲ ಪ್ರಶಸ್ತಿ ಗೆಲುವಿಗೆ ಬಹಳ ಹತ್ತಿರದಲ್ಲಿದೆ.

ಈ ಮಧ್ಯೆ ಪಂದ್ಯ ವೀಕ್ಷಿಸಲು ಜಮ್ಮು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಜಮ್ಮು ಕಾಶ್ಮೀರ ತಂಡ ಬೃಹತ್ ಮುನ್ನಡೆ ಸಾಧಿಸಿ ಚೊಚ್ಚಲ ರಣಜಿ ಪ್ರಶಸ್ತಿ ಗೆಲ್ಲುವ ಸನಿಹದಲ್ಲಿದೆ. ಹೀಗಾಗಿ ತಂಡವನ್ನು ಚಿಯರ್ ಅಪ್ ಮಾಡಲು ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಜಮ್ಮು ಕಾಶ್ಮೀರದಿಂದ ಹುಬ್ಬಳ್ಳಿಗೆ ಬಂದಿದ್ದಾರೆ. ನಾಳೆ ಕೊನೆ ದಿನದ ಆಟವನ್ನು ವೀಕ್ಷಿಸಿ ತಂಡವನ್ನು ಪ್ರೋತ್ಸಾಹಿಸಲಿದ್ದಾರೆ.

ಇನ್ನು ಮಾಧ್ಯಮಗಳ ಜೊತೆ ಮಾತನಾಡಿದ ಒಮರ್ ಅಬ್ದುಲ್ಲಾ, ನಮ್ಮ ತಂಡ ಮೊದಲ ಬಾರಿಗೆ ರಣಜಿ ಗೆಲ್ಲುವ ಹೊಸ್ತಿಲಲ್ಲಿದೆ. ನಮ್ಮ ತಂಡವನ್ನು ಪ್ರೋತ್ಸಾಹಿಸಲು ಹುಬ್ಬಳ್ಳಿಗೆ ಬಂದಿದ್ದೇನೆ. ಕರ್ನಾಟಕವನ್ನು ಸೋಲಿಸಿ ನಾವು ಖಂಡಿತವಾಗಿ ಟ್ರೋಫಿ ತೆಗೆದುಕೊಂಡು ಹೋಗುತ್ತೇವೆ ಎಂದು ಒಮರ್ ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran war: ಇರಾನ್ ಹಡಗು ವಶಕ್ಕೆ ಪಡೆದ ಅಮೆರಿಕಾ; ಪ್ರತೀಕಾರ ತೀರಿಸಿಕೊಳ್ಳುತ್ತೇವೆಂದ ಟೆಹ್ರಾನ್, ಸಂಘರ್ಷ ಮತ್ತೆ ಉಲ್ಬಣ

ಹೊರ್ಮುಸ್, ಹಣದುಬ್ಬರ, ಮತ್ತು ಚುನಾವಣೆಗಳು: ಸಮಸ್ಯೆಯ ಸುಳಿಯಲ್ಲಿ ಟ್ರಂಪ್ (ಜಾಗತಿಕ ಜಗಲಿ)

ಪ್ರಧಾನಿ ಮೋದಿ ಜೊತೆಗೆ ಗುಟ್ಟಿನ ಮಾತುಕತೆ: ಕೊನೆಗೂ ಬಹಿರಂಗ! ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ತಾಂತ್ರಿಕ ದೋಷ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ, ಪ್ರಯಾಣಿಕರಿಗೆ ಸಾವಿನ ದರ್ಶನ ಮಾಡಿಸಿದ FLY91 ವಿಮಾನ..!

ಥೈಲ್ಯಾಂಡ್ ರೆಸ್ಟೋರೆಂಟ್‌ನಲ್ಲಿ ಜನಾಂಗೀಯ ನಿಂದನೆ: ಪೊಲೀಸರಿಗೆ ದೂರು ಕೊಟ್ಟ ಭಾರತೀಯ ಪ್ರವಾಸಿಗ! Video

SCROLL FOR NEXT