ಭಾರತ - ವೆಸ್ಟ್ ಇಂಡೀಸ್ ಆಟಗಾರರು 
ಕ್ರಿಕೆಟ್

ಕ್ವಾರ್ಟರ್ ಫೈನಲ್‌ನಲ್ಲಿ ಭಾರತ-ವೆಸ್ಟ್ ಇಂಡೀಸ್ ಮುಖಾಮುಖಿ; ಹೇಗಿದೆ ಉಭಯ ತಂಡಗಳ ಟ್ರ್ಯಾಕ್ ರೆಕಾರ್ಡ್?

ದಕ್ಷಿಣ ಆಫ್ರಿಕಾ ವಿರುದ್ಧ ವೆಸ್ಟ್ ಇಂಡೀಸ್ ಸೋಲು ಮತ್ತು ಜಿಂಬಾಬ್ವೆ ವಿರುದ್ಧ ಭಾರತದ ಭರ್ಜರಿ ಗೆಲುವು ಗ್ರೂಪ್ 1 ಸೂಪರ್ ಎಂಟರ ಹಣಾಹಣಿ ಮಾಡು ಇಲ್ಲವೇ ಮಡಿ ಸ್ಪರ್ಧೆಯಾಗಿ ಮಾರ್ಪಪಟ್ಟಿದೆ.

ಕೋಲ್ಕತ್ತಾ: ಭಾನುವಾರ ನಡೆಯಲಿರುವ ಟಿ20 ವಿಶ್ವಕಪ್‌ನ ಕ್ವಾರ್ಟರ್ ಫೈನಲ್‌ನಲ್ಲಿ ಬಲಿಷ್ಠ ವೆಸ್ಟ್ ಇಂಡೀಸ್ ಮತ್ತು ಭಾರತ ಮುಖಾಮುಖಿಯಾಗುತ್ತಿದ್ದು, ಈ ಪಂದ್ಯ ಗೆಲ್ಲುವ ತಂಡ ಸೆಮಿಫೈನಲ್ ಪ್ರವೇಶಿಸಲಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ವೆಸ್ಟ್ ಇಂಡೀಸ್ ಸೋಲು ಮತ್ತು ಜಿಂಬಾಬ್ವೆ ವಿರುದ್ಧ ಭಾರತದ ಭರ್ಜರಿ ಗೆಲುವು ಗ್ರೂಪ್ 1 ಸೂಪರ್ ಎಂಟರ ಹಣಾಹಣಿ ಮಾಡು ಇಲ್ಲವೇ ಮಡಿ ಸ್ಪರ್ಧೆಯಾಗಿ ಮಾರ್ಪಪಟ್ಟಿದೆ. ದಕ್ಷಿಣಾ ಆಫ್ರಿಕಾ ತಂಡ ಈಗಾಗಲೇ ಸೆಮಿಫೈನಲ್ ತಲುಪಿದ್ದರೆ, ಜಿಂಬಾಬ್ವೆ ಟೂರ್ನಿಯಿಂದಲೇ ಹೊರಬಿದ್ದಿದೆ.

ನಾಳೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿರುವ ಮಹತ್ವದ ಪಂದ್ಯಕ್ಕೆ ಭಾರತ ಸಜ್ಜಾಗಿದ್ದು, ವೆಸ್ಟ್ ಇಂಡೀಸ್ ವಿರುದ್ಧದ ಈ ಮುಖಾಮುಖಿ ಕ್ರಿಕೆಟ್ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.

ಟಿ20 ವಿಶ್ವಕಪ್‌ನಲ್ಲಿ ಉಭಯ ತಂಡಗಳ ನಡುವಿನ ಮುಖಾಮುಖಿ ದಾಖಲೆಯನ್ನು ಪರಿಗಣಿಸಿದರೆ, ವೆಸ್ಟ್ ಇಂಡೀಸ್ ಮೇಲುಗೈ ಸಾಧಿಸಿದೆ.

ಟಿ20 ವಿಶ್ವಕಪ್‌ನಲ್ಲಿ ಇಲ್ಲಿಯವರೆಗೆ ಉಭಯ ತಂಡಗಳ ನಡುವೆ ಒಟ್ಟು ನಾಲ್ಕು ಪಂದ್ಯಗಳು ನಡೆದಿದ್ದು, ವಿಂಡೀಸ್ ಮೂರು ಬಾರಿ ಗೆದ್ದಿದೆ ಮತ್ತು ಭಾರತವು ವೆಸ್ಟ್ ಇಂಡೀಸ್ ಅನ್ನು ಒಮ್ಮೆ ಮಾತ್ರ ಸೋಲಿಸಲು ಸಾಧ್ಯವಾಗಿದೆ. ವೆಸ್ಟ್ ಇಂಡೀಸ್ 2009, 2010 ಮತ್ತು 2016 ರ ಆವೃತ್ತಿಗಳಲ್ಲಿ ಭಾರತದ ವಿರುದ್ಧ ಜಯಗಳಿಸಿದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಒಟ್ಟು 30 ಟಿ20 ಪಂದ್ಯಗಳು ನಡೆದಿದ್ದು, ಭಾರತ 19 ಪಂದ್ಯಗಳಲ್ಲಿ ಗೆದ್ದರೆ, ವೆಸ್ಟ್ ಇಂಡೀಸ್ 10 ಪಂದ್ಯಗಳಲ್ಲಿ ಗೆದ್ದಿದೆ. ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡಿತು.

ಈಡನ್ ಗಾರ್ಡನ್ಸ್‌ನಲ್ಲಿ ಮೇಲುಗೈ ಸಾಧಿಸಿದ್ದು ಯಾರು?

ಉಭಯ ತಂಡಗಳ ನಡುವೆ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಟಿ20 ಸರಣಿಗಳಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಮೇಲುಗೈ ಸಾಧಿಸಿದೆ. ಎರಡೂ ತಂಡಗಳು ನಾಲ್ಕು ಬಾರಿ ಮುಖಾಮುಖಿಯಾಗಿವೆ. ಭಾರತವು ಅವೆಲ್ಲವನ್ನೂ ಗೆದ್ದಿದೆ. ಇದರಲ್ಲಿ ಎರಡು ಬಾರಿ ಮೊದಲು ಬ್ಯಾಟಿಂಗ್ ಮಾಡಿದಾಗ ಮತ್ತು ಎರಡು ಬಾರಿ ಮೊದಲು ಫೀಲ್ಡಿಂಗ್ ಮಾಡಿದಾಗ ಗೆಲುವು ಸಾಧಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!