ಆರ್ ಸಿಬಿ ಸಾಂದರ್ಭಿಕ ಚಿತ್ರ 
ಕ್ರಿಕೆಟ್

IPL 2026: ಮಾರ್ಚ್ 28ಕ್ಕೆ ಉದ್ಘಾಟನಾ ಪಂದ್ಯ, ಮೇ 31ಕ್ಕೆ ಫೈನಲ್ ಪಂದ್ಯ!

ಈ ಹಿಂದೆ ಬಿಸಿಸಿಐ (BCCI) ಫ್ರಾಂಚೈಸಿಗಳಿಗೆ ನೀಡಿದ್ದ ಮಾಹಿತಿ ಪ್ರಕಾರ ಮಾರ್ಚ್ 26ರಂದು ಟೂರ್ನಿ ಆರಂಭವಾಗಬೇಕಿತ್ತು. ಆದರೆ, ಆಂತರಿಕ ಕಾರಣಗಳಿಂದಾಗಿ ಎರಡು ದಿನ ವಿಳಂಬವಾಗಿ ಅಂದರೆ ಮಾರ್ಚ್ 28ಕ್ಕೆ ಉದ್ಘಾಟನಾ ಪಂದ್ಯವನ್ನು ನಿಗದಿಪಡಿಸಲಾಗಿದೆ

ಬೆಂಗಳೂರು: ಕ್ರಿಕೆಟ್ ಪ್ರೇಮಿಗಳು ಕುತೂಹಲದಿಂದ ಕಾಯುತ್ತಿರುವ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) 19ನೇ ಆವೃತ್ತಿಯು ಮಾರ್ಚ್ 28 ಶನಿವಾರದಿಂದ ಆರಂಭವಾಗಲಿದ್ದು, ಮೇ 31ರಂದು ಫೈನಲ್ ಪಂದ್ಯ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ಬಿಸಿಸಿಐ (BCCI) ಫ್ರಾಂಚೈಸಿಗಳಿಗೆ ನೀಡಿದ್ದ ಮಾಹಿತಿ ಪ್ರಕಾರ ಮಾರ್ಚ್ 26ರಂದು ಟೂರ್ನಿ ಆರಂಭವಾಗಬೇಕಿತ್ತು. ಆದರೆ, ಆಂತರಿಕ ಕಾರಣಗಳಿಂದಾಗಿ ಎರಡು ದಿನ ವಿಳಂಬವಾಗಿ ಅಂದರೆ ಮಾರ್ಚ್ 28ಕ್ಕೆ ಉದ್ಘಾಟನಾ ಪಂದ್ಯವನ್ನು ನಿಗದಿಪಡಿಸಲಾಗಿದೆ. ಮುಂದಿನ ವಾರ ನಡೆಯಲಿರುವ ಐಪಿಎಲ್ ಆಡಳಿತ ಮಂಡಳಿ ಸಭೆಯಲ್ಲಿ ಅಧಿಕೃತ ವೇಳಾಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ.

ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಅಸ್ಸಾಂ ರಾಜ್ಯಗಳಲ್ಲಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ವೇಳಾಪಟ್ಟಿ ಪ್ರಕಟಣೆಯಲ್ಲಿ ಸ್ವಲ್ಪ ವಿಳಂಬವಾಗಿದೆ. ಕೋಲ್ಕತ್ತಾ , ಚೆನ್ನೈ ಮತ್ತು ಗುವಾಹಟಿ ನಗರಗಳಲ್ಲಿ ಪಂದ್ಯಗಳನ್ನು ಆಯೋಜಿಸಲು ಭದ್ರತಾ ದೃಷ್ಟಿಯಿಂದ ಚುನಾವಣಾ ಆಯೋಗದ ದಿನಾಂಕಗಳಿಗಾಗಿ ಬಿಸಿಸಿಐ ಕಾಯುತ್ತಿದೆ. ಹೀಗಾಗಿ, ಈ ಬಾರಿಯೂ ವೇಳಾಪಟ್ಟಿಯನ್ನು ಎರಡು ಹಂತಗಳಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಹೆಚ್ಚಾಗಿದೆ.

ಚಾಂಪಿಯನ್ ಆರ್‌ಸಿಬಿ ಮೊದಲ ಪಂದ್ಯ ಎಲ್ಲಿ?

ಇನ್ನೂ ಕಳೆದ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಉದ್ಘಾಟನಾ ಪಂದ್ಯದಲ್ಲಿ ಕಣಕ್ಕಿಳಿಯುವುದು ಖಚಿತ. ಆದರೆ, ಈ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತದೆಯೇ ಎಂಬುದು ಇನ್ನೂ ನಿರ್ಧಾರವಾಗಿಲ್ಲ.

ಕಳೆದ ಜೂನ್‌ನಲ್ಲಿ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ನಡೆದ ದುರದೃಷ್ಟಕರ ಕಾಲ್ತುಳಿತದಲ್ಲಿ 11 ಅಭಿಮಾನಿಗಳು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಭದ್ರತಾ ಕಾರಣಗಳಿಗಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಮತ್ತು ಆರ್‌ಸಿಬಿ ಮ್ಯಾನೇಜ್‌ಮೆಂಟ್ ನಡುವೆ ಮಾತುಕತೆ ನಡೆಯುತ್ತಿದೆ. ಒಂದು ವೇಳೆ ಬೆಂಗಳೂರಿನಲ್ಲಿ ಪಂದ್ಯ ನಡೆಯದಿದ್ದರೆ ಆರ್‌ಸಿಬಿ ತನ್ನ ತವರಿನ ಪಂದ್ಯಗಳನ್ನು ನವಿ ಮುಂಬೈ, ರಾಯ್‌ಪುರ ಮತ್ತು ಪುಣೆಯಲ್ಲಿ ಆಡುವ ಸಾಧ್ಯತೆಯಿದೆ.

ಡಿಸೆಂಬರ್‌ನಲ್ಲಿ ನಡೆದ ಮೆಗಾ ಹರಾಜಿನ ನಂತರ ಎಲ್ಲಾ ತಂಡಗಳು ಸಮಬಲದಿಂದ ಕೂಡಿವೆ. ಆರ್‌ಸಿಬಿ ತನ್ನ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳಲು ಹೋರಾಡಲಿದ್ದರೆ, ಉಳಿದ ತಂಡಗಳು ಕಪ್ ಗೆಲ್ಲುವ ತವಕದಲ್ಲಿವೆ. ಮುಂದಿನ ವಾರ ನಡೆಯುವ ಬಿಸಿಸಿಐ ಸಭೆಯಲ್ಲಿ ಈ ಎಲ್ಲಾ ಗೊಂದಲಗಳಿಗೆ ತೆರೆ ಬೀಳಲಿದ್ದು, ಪೂರ್ಣ ಪ್ರಮಾಣದ ವೇಳಾಪಟ್ಟಿ ಅಭಿಮಾನಿಗಳ ಕೈಸೇರಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾನ್ ವಿದೇಶಾಂಗ ಸಚಿವ- ಎಸ್ ಜೈಶಂಕರ್ ಮಾತುಕತೆ: ಪ್ರಾದೇಶಿಕ ಸಮರದ ಬಗ್ಗೆ ಆತಂಕ, ಹಡಗುಗಳ ಮೇಲೆ ದಾಳಿ ನಡೆಸದಂತೆ ಒತ್ತಾಯ

ಕಾವೇರಿ ಕಿತ್ತಾಟದ ನಡುವೆ ರಾಜ್ಯಕ್ಕೆ ಹವಾಮಾನ ಇಲಾಖೆ ಸಿಹಿ ಸುದ್ದಿ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಸಾಧ್ಯತೆ!

'ಕರ್ನಾಟಕಕ್ಕೆ ನೀರು ನೀಡಲು ನಮ್ಮ ವಿರೋಧವಿಲ್ಲ.. ಆದ್ರೆ ಮೇಕೆದಾಟು ಬೇಡ": ಕಾವೇರಿ ವಿವಾದ ಕುರಿತು AIADMK ಸಂಸದ ಎಂ. ತಂಬಿದುರೈ

'ನಾನು ಯಂಗ್ ಹೃತಿಕ್ ರೋಷನ್ ತರಹ ಕಾಣುತ್ತೇನೆ ಅಂತ...': ಕಂಗನಾಗೆ CJP ವಕ್ತಾರ ಸೌರವ್ ದಾಸ್ ತಪರಾಕಿ!

ಕಾವೇರಿ ಕಿಚ್ಚಿನ ಮಧ್ಯೆ ಮಂಡ್ಯದಲ್ಲಿ ಘೋರ ದುರಂತ: ರೈತ ದಂಪತಿ ನೇಣಿಗೆ ಶರಣು; ಸರ್ಕಾರ ಸಮಸ್ಯೆ ಪರಿಹರಿಸಬೇಕು - ಬಿಜೆಪಿ ಆಗ್ರಹ