ಕ್ರಿಕೆಟ್

ಆಕ್ರೋಶಕ್ಕೆ ಮಣಿದ BCCI: ಬಾಂಗ್ಲಾ ವೇಗಿ ಮುಸ್ತಾಫಿಜುರ್ ರೆಹಮಾನ್ ಕೈಬಿಟ್ಟ KKR

ನಟ ಶಾರುಖ್ ಖಾನ್ ಒಡೆತನದ KKR ತಂಡಕ್ಕೆ ಬಾಂಗ್ಲಾದೇಶದ ಬೌಲರ್ ಮುಸ್ತಾಫಿಜುರ್ ರೆಹಮಾನ್ ನನ್ನು ತಂಡದಿಂದ ಕೈಬಿಡುವಂತೆ BCCI ಸೂಚಿಸಿದ ಬೆನ್ನಲ್ಲೇ ಮುಸ್ತಾಫಿಜುರ್ ರೆಹಮಾನ್ ಗೆ KKR ಗೇಟ್ ಪಾಸ್ ಕೊಟ್ಟಿದೆ.

ನಟ ಶಾರುಖ್ ಖಾನ್ ಒಡೆತನದ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡಕ್ಕೆ ಬಾಂಗ್ಲಾದೇಶದ ಬೌಲರ್ ಮುಸ್ತಾಫಿಜುರ್ ರೆಹಮಾನ್ ನನ್ನು ತಮ್ಮ ತಂಡದಿಂದ ಕೈಬಿಡುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಸೂಚಿಸಿದ ಬೆನ್ನಲ್ಲೇ KKR ಫ್ರಾಂಚೈಸಿ ಮುಸ್ತಾಫಿಜುರ್ ರೆಹಮಾನ್ ನನ್ನು ತಂಡದಿಂದ ಕೈಬಿಟ್ಟಿದೆ.

ಬಾಂಗ್ಲಾದೇಶದಲ್ಲಿ ಹಿಂದೂಗಳ ಸಾಲು ಸಾಲು ಹತ್ಯೆಗಳು ಭಾರತೀಯ ಕ್ರಿಕೆಟ್ ಜಗತ್ತಿನಲ್ಲಿ ಪ್ರಮುಖ ಚರ್ಚೆಯ ವಿಷಯವಾಯಿತು. ಇದು ಗಡಿಯಾಚೆಗಿನ ಭಾವನೆಗಳನ್ನು ಕೆರಳಿಸಿತು. ಹೀಗಾಗಿ ಬಿಸಿಸಿಐ ಕೆಕೆಆರ್ ತಂಡಕ್ಕೆ ಮುಸ್ತಾಫಿಜುರ್ ರೆಹಮಾನ್ ಅವರನ್ನು ಕೈಬಿಡುವಂತೆ ತಿಳಿಸಿತ್ತು.

ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಮಾತನಾಡಿ, "ಇತ್ತೀಚಿನ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು, ಬಿಸಿಸಿಐ ಕೆಕೆಆರ್ ಫ್ರಾಂಚೈಸಿಗೆ ಮುಸ್ತಾಫಿಜುರ್ ರೆಹಮಾನ್ ಅವರನ್ನು ತಮ್ಮ ತಂಡದಿಂದ ಕೈಬಿಡುವಂತೆ ನಿರ್ದೇಶಿಸಿತ್ತು. ಇದಲ್ಲದೆ, ಆತನ ಬದಲಿ ಆಟಗಾರನಿಗಾಗಿ ಕೆಕೆಆರ್ ವಿನಂತಿಸಿದರೆ, ಬಿಸಿಸಿಐ ಆ ಬದಲಿ ಆಟಗಾರನಿಗೆ ಅವಕಾಶ ನೀಡುತ್ತದೆ ಎಂದು ಬಿಸಿಸಿಐ ಹೇಳಿದೆ.

ಮುಸ್ತಾಫಿಜುರ್ ರೆಹಮಾನ್ ಹಲವು ಲೀಗ್‌ಗಳಲ್ಲಿ ಆಡುತ್ತಿದ್ದಾರೆ. ಮುಸ್ತಾಫಿಜುರ್ ರೆಹಮಾನ್ 2016ರಿಂದ ಐಪಿಎಲ್‌ನಲ್ಲಿ ಆಡುತ್ತಿದ್ದಾರೆ. ಇಲ್ಲಿಯವರೆಗೆ, ಬಾಂಗ್ಲಾದೇಶದ ಆಟಗಾರ ಸನ್‌ರೈಸರ್ಸ್ ಹೈದರಾಬಾದ್, ಮುಂಬೈ ಇಂಡಿಯನ್ಸ್, ರಾಜಸ್ಥಾನ ರಾಯಲ್ಸ್, ದೆಹಲಿ ಕ್ಯಾಪಿಟಲ್ಸ್ ಮತ್ತು ಸಿಎಸ್‌ಕೆ ಪರ ಆಡಿದ್ದಾರೆ. ಮುಸ್ತಾಫಿಜುರ್ ರೆಹಮಾನ್ 60 ಐಪಿಎಲ್ ಪಂದ್ಯಗಳಲ್ಲಿ 65 ವಿಕೆಟ್‌ಗಳನ್ನು ಪಡೆದಿದ್ದಾರೆ. ಇತ್ತೀಚಿನ ಐಪಿಎಲ್ 2026 ರ ಹರಾಜಿನಲ್ಲಿ ಕೆಕೆಆರ್ ಮುಸ್ತಾಫಿಜುರ್ ರೆಹಮಾನ್ ಅವರನ್ನು ₹9.20 ಕೋಟಿಗೆ ಖರೀದಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು: ಫಾರೂಕ್‌ ಅಬ್ದುಲ್ಲಾ ಹತ್ಯೆಗೆ ಯತ್ನ, ಮದುವೆ ಮನೆಯಲ್ಲೇ ಗುಂಡಿನ ದಾಳಿ; ಡಿಸಿಎಂಗೆ ಗಾಯ

ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ: ಕೇರಳದಲ್ಲಿ ಪೊಲೀಸರ ಭದ್ರತೆಯೊಂದಿಗೆ ವಿವಾಹ!

ಭಾರತಕ್ಕೆ ಬರುತ್ತಿದ್ದ ಸರಕು ಹಡಗಿನ ಮೇಲೆ ದಾಳಿ- ಹೊಣೆ ಹೊತ್ತ ಇರಾನ್; ಭಾರತದ ಪ್ರತಿಕ್ರಿಯೆ ಏನು?

ತೈಲ ಪೂರೈಕೆಗೆ ರಿಯಾಯಿತಿ ಸ್ಥಗಿತ ಬೆನ್ನಲ್ಲೇ ಎಚ್ಚೆತ್ತ ಭಾರತ; ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ; ಮಹತ್ವದ ಚರ್ಚೆ!

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು; ಪ್ರತಿಪಕ್ಷಗಳಿಗೆ ಮುಖಭಂಗ

SCROLL FOR NEXT