ಕ್ರಿಕೆಟ್

Vijay Hazare Trophy: ಸೆಮಿಫೈನಲ್‌ಗೆ ಕರ್ನಾಟಕ ಲಗ್ಗೆ

ಮುಂಬೈ ನೀಡಿದ 255 ರನ್ ಗಳ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ ಪರ ಮಾಯಾಂಕ್ ಅಗರವಾಲ್ 12 ರನ್ ಗಳಿಸಿ ಔಟಾದರು. ನಂತರ ಜೊತೆಯಾದ ದೇವದತ್ ಪಡಿಕ್ಕಲ್ ಅಜೇಯ 81 ಹಾಗೂ ಕರುಣ್ ನಾಯರ್ ಅಜೇಯ 74 ರನ್ ಗಳಿಸಿದ್ದರು.

ವಿಜಯ್ ಹಜಾರೆ ಟ್ರೋಫಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಕರ್ನಾಟಕ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಕರ್ನಾಟಕ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಬ್ಯಾಟಿಂಗ್ ಆರಂಭಿಸಿದ ಮುಂಬೈ ತಂಡ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 254 ರನ್ ಪೇರಿಸಿತು.

ಮುಂಬೈ ನೀಡಿದ 255 ರನ್ ಗಳ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ ಪರ ಮಾಯಾಂಕ್ ಅಗರವಾಲ್ 12 ರನ್ ಗಳಿಸಿ ಔಟಾದರು. ನಂತರ ಜೊತೆಯಾದ ದೇವದತ್ ಪಡಿಕ್ಕಲ್ ಅಜೇಯ 81 ಹಾಗೂ ಕರುಣ್ ನಾಯರ್ ಅಜೇಯ 74 ರನ್ ಗಳಿಸಿದ್ದರು. ಇಬ್ಬರೂ 143 ರನ್ ಗಳ ಜೊತೆಯಾಟವಾಡಿದರು. ಕರ್ನಾಟಕ ತಂಡ 33 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 187 ರನ್ ಪೇರಿಸಿತ್ತು. ಈ ವೇಳೆ ಮಳೆಯಾಗಿದ್ದರಿಂದ ಪಂದ್ಯ ಸ್ಥಗಿತಗೊಂಡಿತ್ತು. ಅಂತಿಮವಾಗಿ ವಿಜೆಡಿ ನಿಯಮದಡಿ ಕರ್ನಾಟಕ ತಂಡ 55 ರನ್ ಗಳಿಂದ ಗೆಲುವು ಸಾಧಿಸಿದೆ. ಗ್ರೂಪ್ ಎ ತಂಡದಲ್ಲಿದ್ದ ಕರ್ನಾಟಕ ಇದೀಗ ಸೆಮಿಫೈನಲ್ ಗೆ ಪ್ರವೇಶಿಸಿದೆ.

ಮುಂಬೈ ಪರ ಬ್ಯಾಟಿಂಗ್ ನಲ್ಲಿ ರಘುವಂಶಿ 27, ಇಶಾನ್ 20, ಸಿದ್ದೇಶ್ ಲಾಡ್ 38, ಶಮ್ಸ್ ಮೌಲಾನಿ 86 ಮತ್ತು ಸಾಯಿರಾಜ್ ಪಾಟೀಲ್ ಅಜೇಯ 33 ರನ್ ಗಳಿಸಿದ್ದು ತಂಡದ ಮೊತ್ತ 254 ರನ್ ಗೆ ತಲುಪಲು ಸಾಧ್ಯವಾಯಿತು. ಕರ್ನಾಟಕ ಪರ ಬೌಲಿಂಗ್ ನಲ್ಲಿ ವಿದ್ಯಾಧಾರ್ ಪಾಟೀಲ್ 3, ವಿಧ್ವತ್ ಕಾವೇರಪ್ಪ, ಅಭಿಲಾಶ್ ಶೆಟ್ಟಿ ತಲಾ 2 ವಿಕೆಟ್ ಪಡೆದರೆ ವಿಜಯ್ ಕುಮಾರ್ ವ್ಯಾಸಕ್ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ