ಬಾಂಗ್ಲಾ ಪ್ರೀಮಿಯರ್ ಲೀಗ್ ಟೂರ್ನಿ ರದ್ದು 
ಕ್ರಿಕೆಟ್

BCCI ವಿರುದ್ಧ ತೊಡೆ ತಟ್ಟಿದ್ದ ಬಾಂಗ್ಲಾದೇಶಕ್ಕೆ ತನ್ನದೇ ಆಟಗಾರರಿಂದ ಮುಖಭಂಗ; BPL ಟೂರ್ನಿಯೇ ರದ್ದು?

ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮತ್ತು ಆಟಗಾರರ ನಡುವಿನ ಭಿನ್ನಾಭಿಪ್ರಾಯದಿಂದ ಬಾಂಗ್ಲಾದೇಶ ಪ್ರೀಮಿಯರ್ ಲೀಗ್ ಪಂದ್ಯಗಳು ರದ್ದಾಗಿದ್ದು, ಹಣಕಾಸು ಸಮಿತಿ ಅಧ್ಯಕ್ಷ ನಜ್ಮುಲ್ ಇಸ್ಲಾಂರ ವಿವಾದಾತ್ಮಕ ಹೇಳಿಕೆಗಳಿಂದ ಕೆರಳಿದ ಆಟಗಾರರು ಪಟ್ಟು ಹಿಡಿದು ಅವರ ರಾಜಿನಾಮೆ ಪಡೆದಿದ್ದಾರೆ.

ಢಾಕಾ: ಕೆಕೆಆರ್ ತಂಡದಿಂದ ಮುಸ್ತಫಿಜುರ್ ರೆಹಮಾನ್ ರನ್ನು ಕೈಬಿಟ್ಟ ವಿಚಾರಕ್ಕೆ ಬಿಸಿಸಿಐ ವಿರುದ್ಧ ತೊಡೆ ತಟ್ಟಿದ್ದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಇದೀಗ ತನ್ನದೇ ಆಟಗಾರರಿಂದ ಪ್ರತಿಭಟನೆಯ ಬಿಸಿ ಎದುರಿಸುತ್ತಿದೆ.

ಹೌದು.. ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮತ್ತು ಆಟಗಾರರ ನಡುವಿನ ಭಿನ್ನಾಭಿಪ್ರಾಯದಿಂದ ಬಾಂಗ್ಲಾದೇಶ ಪ್ರೀಮಿಯರ್ ಲೀಗ್ ಪಂದ್ಯಗಳು ರದ್ದಾಗಿದ್ದು, ಹಣಕಾಸು ಸಮಿತಿ ಅಧ್ಯಕ್ಷ ನಜ್ಮುಲ್ ಇಸ್ಲಾಂರ ವಿವಾದಾತ್ಮಕ ಹೇಳಿಕೆಗಳಿಂದ ಕೆರಳಿದ ಆಟಗಾರರು ಪಟ್ಟು ಹಿಡಿದು ಅವರ ರಾಜಿನಾಮೆ ಪಡೆದಿದ್ದಾರೆ.

ನಜ್ಮುಲ್ ಇಸ್ಲಾಂ ರಾಜಿನಾಮೆಗೆ ಪಟ್ಟು ಹಿಡಿದ್ದ ಬಾಂಗ್ಲಾದೇಶ ಆಟಗಾರರು 48 ಗಂಟೆಗಳ ಅಂತಿಮ ಗಡುವು ನೀಡಿದ್ದರು. ಅಲ್ಲದೆ ರಾಜೀನಾಮೆಗೆ ಪಟ್ಟುಹಿಡಿದು, ಪಂದ್ಯಗಳನ್ನು ಬಹಿಷ್ಕರಿಸಿದ್ದರು. ಇದೀಗ ಅಂತಿಮವಾಗಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ನಜ್ಮುಲ್ ಇಸ್ಲಾಂರನ್ನು ಅವರ ಸ್ಥಾನದಿಂದ ವಜಾಗೊಳಿಸಿದೆ.

ಪಟ್ಟು ಸಡಿಲಿಸದ ಆಟಗಾರರು

ಅದಾಗ್ಯೂ ನಜ್ಮುಲ್ ಅವರನ್ನು ವಜಾಗೊಳಿಸಲಾಗಿದ್ದರೂ, ಆಟಗಾರರು ಲಿಖಿತ ಭರವಸೆಗಾಗಿ ಕಾಯುತ್ತಿದ್ದಾರೆ, ಇದು BPL ಭವಿಷ್ಯವನ್ನು ಅನಿಶ್ಚಿತಗೊಳಿಸಿದೆ.

ವಿವಾದ ಏಕೆ?

ಈ ಹಿಂದೆ ಟಿ20 ವಿಶ್ವಕಪ್ ಕುರಿತು ಮಾತನಾಡಿದ್ದ ನಜ್ಮುಲ್ ಇಸ್ಲಾಂ, 'ಬಾಂಗ್ಲಾದೇಶ ತಂಡವು 2026 ರ ಟಿ20 ವಿಶ್ವಕಪ್‌ನಲ್ಲಿ ಆಡದಿದ್ದರೆ ಅದು ಆಟಗಾರರಿಗೆ ಮಾತ್ರ ನಷ್ಟವನ್ನುಂಟು ಮಾಡುತ್ತದೆಯೇ ವಿನಃ ಮಂಡಳಿಗಲ್ಲ. ಮಂಡಳಿಯು ಆಟಗಾರರಿಗಾಗುವ ಯಾವುದೇ ನಷ್ಟವನ್ನು ಬರಿಸುವುದಿಲ್ಲ ಎಂದ್ದಿದ್ದರು.

ಈ ಹೇಳಿಕೆಯಿಂದ ಕೆರಳಿದ್ದ ಬಾಂಗ್ಲಾದೇಶ ಕ್ರಿಕೆಟಿಗರು ಬಿಸಿಬಿ ನಿರ್ದೇಶಕ ಮತ್ತು ಹಣಕಾಸು ಸಮಿತಿಯ ಅಧ್ಯಕ್ಷ ನಜ್ಮುಲ್ ಇಸ್ಲಾಂ ತಕ್ಷಣ ರಾಜೀನಾಮೆ ನೀಡದಿದ್ದರೆ ಎಲ್ಲಾ ರೀತಿಯ ಕ್ರಿಕೆಟ್ ಅನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದರು.

ಬಿಪಿಎಲ್ ಬಹಿಷ್ಕಾರ

ಇನ್ನು ನಜ್ಮುಲ್ ಇಸ್ಲಾಂ ಹೇಳಿಕೆ ವಿರೋಧಿಸಿದ್ದ ಬಾಂಗ್ಲಾದೇಶ ಕ್ರಿಕೆಟ್ ಆಟಗಾರರು ನಜ್ಮುಲ್ ಇಸ್ಲಾಂ ಅವರನ್ನು ಈ ಹುದ್ದೆಯಿಂದ ತೆಗೆದುಹಾಕದಿದ್ದರೆ, ಯಾರೂ ಕೂಡ ಕ್ರಿಕೆಟ್ ಮೈದಾನಕ್ಕೆ ಇಳಿಯುವುದಿಲ್ಲ ಎಂದು ಮಂಡಳಿಗೆ ಸವಾಲೊಡ್ಡಿದ್ದರು. ಇದರ ಪರಿಣಾಮವಾಗಿ ಇಂದು ನಡೆಯಬೇಕಿದ್ದ ಎರಡೂ ಪಂದ್ಯಗಳು ರದ್ದಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Op Sindoor ವೇಳೆ 'ಉಗ್ರರ ಹೆಡ್ ಆಫೀಸ್' ಸಂಪೂರ್ಣ ಧ್ವಂಸ: ಸತ್ಯ ಒಪ್ಪಿಕೊಂಡ ಲಷ್ಕರ್ ಕಮಾಂಡರ್! ಮತ್ತೆ ಪಾಕ್ ಮುಖವಾಡ ಬಯಲು!

BMC Exit polls: ಮತಗಟ್ಟೆ ಸಮೀಕ್ಷೆ ಪ್ರಕಟ! ಯಾರಿಗೆ ಎಷ್ಟು ಸ್ಥಾನ?

ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮದಲ್ಲಿ ಭಾರಿ ಅಗ್ನಿ ಅವಘಡ!

'ಬೆಟ್ಟಿಂಗ್ ಆ್ಯಪ್, ಸಾಲಗಾರರ ಕಾಟ, ತಂಗಿ ನಾಪತ್ತೆ'; ನಟಿ ಕಾರುಣ್ಯ ರಾಮ್ ಕಣ್ಣೀರು! ಸರಣಿ ಪೋಸ್ಟ್! Video

T20 World Cup: ಬಾಂಗ್ಲಾದೇಶದ ಪಂದ್ಯಗಳ ಸ್ಥಳಾಂತರದ ವದಂತಿ; BCCI ಹೇಳಿದ್ದೇನು?

SCROLL FOR NEXT