ಭಾರತ ತಂಡ 
ಕ್ರಿಕೆಟ್

U19 ವಿಶ್ವಕಪ್: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು; 4 ವಿಕೆಟ್‌ ಪಡೆದು ಮಿಂಚಿದ ವಿಹಾನ್

ಇಂದು ಶ್ರೀಲಂಕಾದ ಬೊಲೊವಿಯಾದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತದ ಅಂಡರ್ 19 ತಂಡದ ಆರಂಭ ಕಳಪೆಯಾಗಿತ್ತು.

ಕೊಲೊಂಬೋ: ಶ್ರೀಲಂಕಾದಲ್ಲಿ ನಡೆಯುತ್ತಿರುವ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಶನಿವಾರ ಬಾಂಗ್ಲಾದೇಶದ ವಿರುದ್ಧ ಭಾರತ 18 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಇದರೊಂದಿಗೆ ಸತತ ಎರಡನೇ ಜಯ ದಾಖಲಿಸಿತು. ಈ ಮೂಲಕ ಭಾರತ ಬಿ ಗುಂಪಿನಲ್ಲಿ ಅಗ್ರ ಸ್ಥಾನವನ್ನು ಕಾಯ್ದುಕೊಂಡಿದೆ.

ಇಂದು ಶ್ರೀಲಂಕಾದ ಬೊಲೊವಿಯಾದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತದ ಅಂಡರ್ 19 ತಂಡದ ಆರಂಭ ಕಳಪೆಯಾಗಿತ್ತು. ಆರಂಭಿಕ ನಾಯಕ ಆಯುಷ್ ಮಾತ್ರೆ(6), ವೇದಾಂತ್ ತ್ರಿವೇದಿ (0), ವಿಹಾನ್‌ ಮಲೋತ್ರಾ (7) ಬಾಂಗ್ಲಾ ಬೌಲರ್‌ಗಳ ರಣ ತಂತ್ರವನ್ನು ಮೆಟ್ಟಿನಿಲ್ಲುವಲ್ಲಿ ವಿಫಲರಾದರು.

ವೈಭವ್ ಸೂರ್ಯವಂಶಿ(72)ಯ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ತಂಡ 48.4 ಓವರ್‌ಗಳಲ್ಲಿ 238 ರನ್‌ ಸೇರಿಸಿತು. ಬಾಂಗ್ಲಾದೇಶ ತಂಡದ ಪರ ಅಲ್ ಫಹಾದ್ 5 ವಿಕೆಟ್‌ ಕಬಳಿಸಿದರು.

ಪಂದ್ಯಕ್ಕೆ ಮಳೆ ಅಡ್ಡಿಯಾದ ಕಾರಣ 29 ಓವರ್‌ಗಳಲ್ಲಿ 165 ರನ್‌ಗಳ ಪರಿಷ್ಕೃತ ಗುರಿಯನ್ನು ಬೆನ್ನಟ್ಟಿದ ಬಾಂಗ್ಲಾದೇಶ 28.3 ಓವರ್‌ಗಳಲ್ಲಿ 145 ರನ್‌ಗಳಿಗೆ ಆಲೌಟ್ ಆಯಿತು.

ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ವಿಹಾನ್ ಮಲ್ಹೋತ್ರಾ ನಾಲ್ಕು ಓವರ್‌ಗಳಲ್ಲಿ 14 ರನ್‌ ನೀಡಿ 4 ವಿಕೆಟ್‌ಗಳನ್ನು ಪಡೆದು ಮಿಂಚಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶಾದ್ಯಂತ 'ಗ್ಯಾಸ್ ಟ್ರಬಲ್': ಪ್ರಮುಖ ನಗರಗಳಲ್ಲಿ LPG ಕೊರತೆಯ ಭೀತಿ; ಸಮಸ್ಯೆ ಬಗೆಹರಿಸಲು ಅಗತ್ಯ ಸರಕುಗಳ ಕಾಯ್ದೆ ಬಳಸಿದ ಕೇಂದ್ರ!

KPCC ಅಧ್ಯಕ್ಷರಾಗಿ ಆರು ವರ್ಷ: ಡಿ ಕೆ ಶಿವಕುಮಾರ್ ಔತಣಕೂಟ ಆಯೋಜನೆ; ಸಿಎಂ ಸೇರಿ ಸಚಿವರು, ಶಾಸಕರು ಭಾಗಿ, ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ತೀವ್ರ

No friendship only business: ತೈಲ ಬೇಕಾದರೆ..; ಸಂಕಷ್ಟದ ಸಮಯದಲ್ಲಿ ಕೈಹಿಡಿದಿದ್ದ ಭಾರತಕ್ಕೆ ಕೈ ಕೊಟ್ಟ ರಷ್ಯಾ!

ಆತ ಅಪ್ಪಿಕೊಳ್ಳುತ್ತಾರೆ, ಕಣ್ಣು ಹೊಡೆಯುತ್ತಾರೆ; ಪ್ರಿಯಾಂಕಾ ಉತ್ತಮ ವಿಪಕ್ಷ ನಾಯಕಿಯಾಗಬಹುದು: ರಾಹುಲ್ ವಿರುದ್ಧ ಕಿರಣ್ ರಿಜಿಜು ಟೀಕಾ ಪ್ರಹಾರ

ಮಧ್ಯಪ್ರಾಚ್ಯ ಯುದ್ಧ: ಅಡುಗೆ ಅನಿಲ ಕೊರತೆ ಬೆನ್ನಲ್ಲೆ ಏರ್ ಇಂಡಿಯಾ ಸಮೂಹದಿಂದ ಬೆಲೆ ಏರಿಕೆ ಶಾಕ್! Fuel surcharge ಏರಿಕೆ ಘೋಷಣೆ

SCROLL FOR NEXT