ಗೌತಮ್ ಗಂಭೀರ್ 
ಕ್ರಿಕೆಟ್

ನ್ಯೂಜಿಲೆಂಡ್ ವಿರುದ್ಧ ಸೋಲು; ತವರಿನಲ್ಲೇ ಭಾರತಕ್ಕೆ ಮತ್ತೆ ಮುಖಭಂಗ, ಗೌತಮ್ ಗಂಭೀರ್ ವಿರುದ್ಧ ಸಿಡಿದೆದ್ದ ಫ್ಯಾನ್ಸ್!

ರಾಹುಲ್ ದ್ರಾವಿಡ್ ಅವರಿಂದ ಮುಖ್ಯ ಕೋಚ್ ಹುದ್ದೆಯನ್ನು ವಹಿಸಿಕೊಂಡಾಗಿನಿಂದ ಗೌತಮ್ ಗಂಭೀರ್ ಅವರ ಆಯ್ಕೆ ಮತ್ತು ಕಾರ್ಯತಂತ್ರದ ನಿರ್ಧಾರಗಳು ಟೀಕೆಗೆ ಗುರಿಯಾಗುತ್ತಲೇ ಬಂದಿವೆ.

ಶುಭಮನ್ ಗಿಲ್ ಮತ್ತು ತಂಡ ನ್ಯೂಜಿಲೆಂಡ್ ವಿರುದ್ಧ 1-2 ಅಂತರದ ಏಕದಿನ ಸರಣಿ ಸೋಲನ್ನು ಅನುಭವಿಸುತ್ತಿದ್ದಂತೆ ಭಾರತದ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತೊಮ್ಮೆ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಭಾನುವಾರ ನಡೆದ ನಿರ್ಣಾಯಕ ಮೂರನೇ ಏಕದಿನ ಪಂದ್ಯದಲ್ಲಿ, ಡೆರಿಲ್ ಮಿಚೆಲ್ ಮತ್ತು ಗ್ಲೆನ್ ಫಿಲಿಪ್ಸ್ ಅವರ ಆಕರ್ಷಕ ಶತಕಗಳ ನೆರವಿನಿಂದ ಭಾರತಕ್ಕೆ 338 ರನ್‌ಗಳ ಮತ್ತೊಂದು ಬೃಹತ್ ಗುರಿಯನ್ನು ನೀಡಲಾಯಿತು. ತಂಡ ಸಂಕಷ್ಟಕ್ಕೆ ಸಿಲುಕಿದ್ದಗಲೂ ಏಕಾಂಗಿ ಹೋರಾಟ ನೀಡಿದ ವಿರಾಟ್ ಕೊಹ್ಲಿ ಮತ್ತೊಂದು ಶತಕ ಗಳಿಸಿದರೂ, ಭಾರತ ತಂಡವು ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾಯಿತು. ಸರಣಿ ಸೋಲಿನ ಹಿಂದೆ ಹಲವು ಅಂಶಗಳು ಇದ್ದರೂ, ಕಿವೀಸ್ ವಿರುದ್ಧ ಮತ್ತೊಂದು ಸೋಲು ಕಂಡಂತಾಗಿದೆ.

ರಾಹುಲ್ ದ್ರಾವಿಡ್ ಅವರಿಂದ ಮುಖ್ಯ ಕೋಚ್ ಹುದ್ದೆಯನ್ನು ವಹಿಸಿಕೊಂಡಾಗಿನಿಂದ ಗೌತಮ್ ಗಂಭೀರ್ ಅವರ ಆಯ್ಕೆ ಮತ್ತು ಕಾರ್ಯತಂತ್ರದ ನಿರ್ಧಾರಗಳು ಟೀಕೆಗೆ ಗುರಿಯಾಗುತ್ತಲೇ ಬಂದಿವೆ. ಸಾಮಾಜಿಕ ಮಾಧ್ಯಮದಲ್ಲಿ ನೆಟ್ಟಿಗರು ಗಂಭೀರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಅನೇಕ ಅಭಿಮಾನಿಗಳು ಗಂಭೀರ್ ಅವರನ್ನು ಟ್ರೋಲ್ ಮಾಡಿ, ಮೀಮ್ಸ್ ಕೂಡ ಹಾಕಿದ್ದಾರೆ.

ತವರಿನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿ ಸೋಲು ಒಂದೇ ಅಲ್ಲ. ಬದಲಾಗಿ ಮುಖ್ಯ ಕೋಚ್ ಗಂಭೀರ್ ಅವರ ನೇತೃತ್ವದಲ್ಲಿ ಭಾರತ ತಂಡಕ್ಕೆ ಕಾಡುತ್ತಿರುವ ಆತಂಕಕಾರಿ ಪ್ರವೃತ್ತಿಯ ಭಾಗವಾಗಿದೆ. 2024ರ ಮಧ್ಯದಲ್ಲಿ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಗಂಭೀರ್ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಂಡಾಗಿನಿಂದ, ರಾಷ್ಟ್ರೀಯ ತಂಡವು ಹಲವಾರು ಅಭೂತಪೂರ್ವ ಹಿನ್ನಡೆಗಳನ್ನು ಅನುಭವಿಸಿದೆ.

ಇಬ್ಬರು ವ್ಯಕ್ತಿಗಳು ನಿರಂತರವಾಗಿ ಹಳೆಯ ದಾಖಲೆಗಳನ್ನು ಮುರಿಯುತ್ತಿದ್ದಾರೆ. 1) ವಿರಾಟ್ ಕೊಹ್ಲಿ, 2) ಗೌತಮ್ ಗಂಭೀರ್ ಎಂದು ನೆಟ್ಟಿಗರೊಬ್ಬರು ಟೀಕಿಸಿದ್ದಾರೆ. ಗೌತಮ್ ಗಂಭೀರ್ ಅವರ 'ಡೊಮೇನ್' ಭಾರತವನ್ನು ಅವಮಾನಿಸುವುದನ್ನು ಒಳಗೊಂಡಿರಬೇಕು. ಒಬ್ಬ ಆಟಗಾರನಾಗಿ ನಾನು ಅವರಿಗೆ ಕೃತಜ್ಞನಾಗಿರುತ್ತೇನೆ. ಆದರೆ, ಕೋಚ್ ಆಗಿ ಅವರು ದುರಹಂಕಾರಿ ಎಂದು ಮತ್ತೊಬ್ಬರು ಬರೆದಿದ್ದಾರೆ.

2024ರ ಟೆಸ್ಟ್ ವೈಟ್‌ವಾಶ್: ತವರಿನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಭಾರತವನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದ ಮೊದಲ ತಂಡ ನ್ಯೂಜಿಲೆಂಡ್ ಆಯಿತು.

ಶ್ರೀಲಂಕಾದಲ್ಲಿ ಏಕದಿನ ಸರಣಿ ಕುಸಿತ: ಗಂಭೀರ್ ನಾಯಕತ್ವ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಭಾರತ ತಂಡವು 27 ವರ್ಷಗಳ ಬಳಿಕ ಶ್ರೀಲಂಕಾ ವಿರುದ್ಧ ಏಕದಿನ ಸರಣಿಯನ್ನು ಸೋತಿತು.

ತವರಿನಲ್ಲಿ ದಕ್ಷಿಣ ಆಫ್ರಿಕಾ ಪ್ರಾಬಲ್ಯ: ತವರಿನಲ್ಲಿ ಪ್ರಾಬಲ್ಯ ಹೊಂದಿದ್ದ ಭಾರತವು ಇತ್ತೀಚೆಗೆ ತನ್ನದೇ ನೆಲದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ ಟೆಸ್ಟ್ ಸರಣಿಯನ್ನು ಸೋತಿತು. ಮತ್ತು ಈಗ, ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ಏಕದಿನ ಸರಣಿ ಸೋಲು ಕಂಡಿದೆ.

ಗೌತಮ್ ಗಂಭೀರ್ ವಿರುದ್ಧ ಸಾಕಷ್ಟು ಟೀಕೆಗಳು ಕೇಳಿಬಂದಿವೆ. ಅದರಲ್ಲಿ ಪ್ರಮುಖವಾಗಿ ಅವರ ಆಯ್ಕೆ ಮತ್ತು ಮೈದಾನದಲ್ಲಿನ ತಂತ್ರಗಳು ಟೀಕೆಗಳನ್ನು ಎದುರಿಸಿವೆ. ಮೊದಲ ಎರಡು ಏಕದಿನ ಪಂದ್ಯಗಳಿಂದ ಎಡಗೈ ವೇಗಿ ಅರ್ಷದೀಪ್ ಸಿಂಗ್ ಅವರನ್ನು ಹೊರಗಿಟ್ಟಿದ್ದಕ್ಕೆ ಅಭಿಮಾನಿಗಳು ಮತ್ತು ಮಾಜಿ ಕ್ರಿಕೆಟಿಗರು ಕಿಡಿಕಾರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ; ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸೂಚನೆ

GBA ಚುನಾವಣೆ: EVM ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆಗೆ ಚುನಾವಣಾ ಆಯೋಗದ ನಿರ್ಧಾರ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಗೆ ಜೂನ್, 2026ರಲ್ಲಿ ಜಾಮೀನು, 2029ರಲ್ಲಿ ಪ್ರಕರಣದಿಂದಲೇ ಖುಲಾಸೆ: ಜ್ಯೋತಿಷಿ ಭವಿಷ್ಯ!

ಕಚೇರಿಯಲ್ಲೇ ರಾಮಚಂದ್ರರಾವ್ ಮಹಿಳೆ ಜೊತೆ ರಾಸಲೀಲೆ: ಆರೋಪ ಅಲ್ಲಗಳೆದ DGP, Video Viral

ಮೈಸೂರಿನ ಖಾಸಗಿ ಹೋಟೆಲ್​ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ RFO ಶವ ಪತ್ತೆ!

SCROLL FOR NEXT