ಅಭಿಷೇಕ್ ಶರ್ಮಾ 
ಕ್ರಿಕೆಟ್

35 ಎಸೆತಗಳಲ್ಲಿ 84 ರನ್: 5000 ರನ್ ಸೇರಿದಂತೆ ಒಂದೇ ಪಂದ್ಯದಲ್ಲಿ 5 ದಾಖಲೆ ಮುರಿದ ಅಭಿಷೇಕ್ ಶರ್ಮಾ

ನ್ಯೂಜಿಲೆಂಡ್ ವಿರುದ್ಧದ ಟಿ20ಐ ಸರಣಿಯ ಮೊದಲ ಪಂದ್ಯದಲ್ಲಿ ಅಭಿಷೇಕ್ ಭರ್ಜರಿ ಇನ್ನಿಂಗ್ಸ್ ಆಡಿ ಅಭಿಮಾನಿಗಳನ್ನು ರಂಜಿಸಿದ್ದಾರೆ. ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ಅಭಿಷೇಕ್ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಗರೆದು 35 ಎಸೆತಗಳಲ್ಲಿ 84 ರನ್ ಗಳಿಸಿದರು.

ನ್ಯೂಜಿಲೆಂಡ್ ವಿರುದ್ಧದ ಟಿ20ಐ ಸರಣಿಯ ಮೊದಲ ಪಂದ್ಯದಲ್ಲಿ ಅಭಿಷೇಕ್ ಭರ್ಜರಿ ಇನ್ನಿಂಗ್ಸ್ ಆಡಿ ಅಭಿಮಾನಿಗಳನ್ನು ರಂಜಿಸಿದ್ದಾರೆ. ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ಅಭಿಷೇಕ್ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಗರೆದು 35 ಎಸೆತಗಳಲ್ಲಿ 84 ರನ್ ಗಳಿಸಿದರು. ಐದು ಬೌಂಡರಿ ಮತ್ತು ಎಂಟು ಸಿಕ್ಸರ್‌ಗಳನ್ನು ಬಾರಿಸಿದ್ದು ಶತಕಕ್ಕೆ ಕೇವಲ 16 ರನ್‌ ಇದ್ದಾಗ ಔಟಾದರು. ಸ್ಫೋಟಕ ಬ್ಯಾಟಿಂಗ್ ಮೂಲಕ ಪ್ರಮುಖ ದಾಖಲೆಗಳನ್ನು ಮುರಿದರು.

ಅಭಿಷೇಕ್ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಇದು ನ್ಯೂಜಿಲೆಂಡ್ ವಿರುದ್ಧ ಭಾರತೀಯ ಬ್ಯಾಟ್ಸ್‌ಮನ್ ಗಳಿಸಿದ ವೇಗದ ಟಿ20 ಅರ್ಧಶತಕವಾಗಿದೆ. ಅಭಿಷೇಕ್ ಅರ್ಧಶತಕದ ಹಾದಿಯಲ್ಲಿ ನಾಲ್ಕು ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳನ್ನು ಬಾರಿಸಿದರು. ಕೇವಲ ಬೌಂಡರಿಗಳಿಂದ 40 ರನ್ ಗಳಿಸಿದರು. ಅಭಿಷೇಕ್ ಈಗ 25 ಅಥವಾ ಅದಕ್ಕಿಂತ ಕಡಿಮೆ ಎಸೆತಗಳಲ್ಲಿ ಅತಿ ಹೆಚ್ಚು ಟಿ20 ಅರ್ಧಶತಕಗಳ ದಾಖಲೆಯನ್ನು ಹೊಂದಿದ್ದಾರೆ. ಅವರು ಈಗ ಎಂಟು ಬಾರಿ ಈ ಸಾಧನೆ ಮಾಡಿದ್ದಾರೆ. ಇದು ವಿಶ್ವ ದಾಖಲೆಯಾಗಿದೆ.

ನ್ಯೂಜಿಲೆಂಡ್ ವಿರುದ್ಧದ ಈ ಇನ್ನಿಂಗ್ಸ್‌ನಲ್ಲಿ, ಅಭಿಷೇಕ್ ಶರ್ಮಾ ಒಟ್ಟು ಎಂಟು ಸಿಕ್ಸರ್‌ಗಳನ್ನು ಬಾರಿಸಿದರು. ನ್ಯೂಜಿಲೆಂಡ್ ವಿರುದ್ಧದ ಟಿ20ಐ ಇನ್ನಿಂಗ್ಸ್‌ನಲ್ಲಿ ಇಷ್ಟೊಂದು ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಏಷ್ಯನ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಮತ್ತೊಂದು ಗಮನಾರ್ಹ ಸಾಧನೆಯೆಂದರೆ ಅಭಿಷೇಕ್ ಟಿ20 ಕ್ರಿಕೆಟ್‌ನಲ್ಲಿ 5,000 ರನ್‌ಗಳನ್ನು ಪೂರೈಸಿದರು. 130ಕ್ಕೂ ಹೆಚ್ಚು ಬ್ಯಾಟ್ಸ್‌ಮನ್‌ಗಳು ಈ ದಾಖಲೆಯನ್ನು ಮೀರಿಸಿದ್ದಾರೆ. ಆದರೆ ಅಭಿಷೇಕ್‌ 172.54 ಸ್ಟ್ರೈಕ್ ರೇಟ್ ಹೊಂದಿದ್ದು ಮತ್ಯಾರಿಗೂ ಈ ಸ್ಟ್ರೈಕ್ ರೇಟ್ ಇಲ್ಲ.

200+ ಸ್ಟ್ರೈಕ್ ರೇಟ್‌ನೊಂದಿಗೆ ಟಿ20 ಕ್ರಿಕೆಟ್‌ನಲ್ಲಿ ಗಳಿಸಿದ ಅತಿ ಹೆಚ್ಚು ಅರ್ಧಶತಕ ಗಳಿಸುವ ಮೂಲಕ ಯುವರಾಜ್ ಸಿಂಗ್ ಅವರನ್ನು ಅಭಿಷೇಕ್ ಶರ್ಮಾ ಮೀರಿಸಿದ್ದಾರೆ. ಇದು 200+ ಸ್ಟ್ರೈಕ್ ರೇಟ್‌ನೊಂದಿಗೆ ಅವರು ಆರನೇ ಬಾರಿಗೆ ಅರ್ಧಶತಕ ಗಳಿಸಿದ್ದಾರೆ. ಯುವರಾಜ್ ಐದು ಬಾರಿ ಅರ್ಧಶತಕ ಬಾರಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

1st T20I: ಅಭಿಷೇಕ್ ಶರ್ಮಾ ಸ್ಫೋಟಕ ಬ್ಯಾಟಿಂಗ್; ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ರಾಸಲೀಲೆ ಪ್ರಕರಣ: ಅಮಾನತುಗೊಂಡ ಡಿಜಿಪಿ ರಾಮಚಂದ್ರ ರಾವ್ ಸ್ಥಾನಕ್ಕೆ ಉಮೇಶ್ ಕುಮಾರ್ ನೇಮಕ

ಜಂಟಿ ಅಧಿವೇಶನ: ಸದನ ಕದನಕ್ಕೆ ಆಡಳಿತರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಸಿದ್ಧತೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯ ನಡೆಸಲು ನಾವು ರೆಡಿ, ಆದರೆ RCB ಹಿಂಜರಿಯುತ್ತಿದೆ: ವೆಂಕಟೇಶ್ ಪ್ರಸಾದ್

T20 World Cup: ಭಾರತಕ್ಕೆ ಬರದಿದ್ದರೇ ಟೂರ್ನಿಯಿಂದ ಹೊರಕ್ಕೆ; ಬಾಂಗ್ಲಾಗೆ ಐಸಿಸಿ 24 ಗಂಟೆ ಅಂತಿಮ ಗಡುವು!

SCROLL FOR NEXT