ಕ್ರಿಕೆಟ್

CCL 2026: ಭೋಜ್‌ಪುರಿ ದಬಾಂಗ್ಸ್ ವಿರುದ್ಧ ಕರ್ನಾಟಕ ಬುಲ್ಡೋಜರ್ಸ್ ಗೆ 18 ರನ್‌ ರೋಚಕ ಜಯ; ಸೆಮಿಫೈನಲ್‌ಗೆ ಎಂಟ್ರಿ!

ಸಿಸಿಎಲ್‌ 12ನೇ ಟೂರ್ನಿ ಕುತೂಹಲ ಮೂಡಿಸಿದೆ. ಕಿಚ್ಚ ಸುದೀಪ್ ನೇತೃತ್ವದಲ್ಲಿ ಕರ್ನಾಟಕ ಬುಲ್ಡೋಜರ್ಸ್ ಆರ್ಭಟ ಜೋರಾಗಿದ್ದು ಲೀಗ್ ಹಂತದ 3 ಪಂದ್ಯಗಳನ್ನು ಗೆದ್ದು ಸೆಮಿಫೈನಲ್ ಗೆ ಎಂಟ್ರಿ ಕೊಟ್ಟಿದೆ.

ಸಿಸಿಎಲ್‌ 12ನೇ ಟೂರ್ನಿ ಕುತೂಹಲ ಮೂಡಿಸಿದೆ. ಕಿಚ್ಚ ಸುದೀಪ್ ನೇತೃತ್ವದಲ್ಲಿ ಕರ್ನಾಟಕ ಬುಲ್ಡೋಜರ್ಸ್ ಆರ್ಭಟ ಜೋರಾಗಿದ್ದು ಲೀಗ್ ಹಂತದ 3 ಪಂದ್ಯಗಳನ್ನು ಗೆದ್ದು ಸೆಮಿಫೈನಲ್ ಗೆ ಎಂಟ್ರಿ ಕೊಟ್ಟಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ನಿಗದಿತ ಓವರ್ ನಲ್ಲಿ ಕರ್ನಾಟಕ 202 ರನ್ ಪೇರಿಸಿದ್ದು ಭೋಜ್‌ಪುರಿ ದಬಾಂಗ್ಸ್ ಗೆ 203 ರನ್ ಗಳ ಟಾರ್ಗೆಟ್ ನೀಡಿತ್ತು.

ಕೋಯಂಬತ್ತೂರಿನ ಶ್ರೀ ರಾಮಕೃಷ್ಣ ಕಲಾ ಮತ್ತು ವಿಜ್ಞಾನ ಕಾಲೇಜು ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಕರ್ನಾಟಕ ನೀಡಿದ 203 ರನ್ ಗುರಿ ಬೆನ್ನಟ್ಟಿದ ಭೋಜ್‌ಪುರಿ ದಬಾಂಗ್ಸ್ 184 ರನ್ ಗಳಿಗೆ ಆಲೌಟ್ ಆಗಿದ್ದು 18 ರನ್ ಗಳಿಂದ ಕರ್ನಾಟಕ ಬುಲ್ಡೋಜರ್ಸ್ಗೆ ಶರಣಾಯಿತು.

ಸದ್ಯ ಪಾಯಿಂಟ್ಸ್ ಟೇಬಲ್‌ನಲ್ಲಿ ಕರ್ನಾಟಕ ಬುಲ್ಡೋಜರ್ಸ್ 3 ಪಂದ್ಯಗಳಲ್ಲೂ ಗೆಲುವು ಸಾಧಿಸಿದ್ದು ಸ್ಟ್ರೈಕ್ ರೇಟ್ ನಿಂದಾಗಿ ಮೊದಲ ಸ್ಥಾನದಲ್ಲಿದೆ. ಬೆಂಗಾಲ್ ಟೈಗರ್ಸ್ ಸಹ ಆಡಿದ 3 ಪಂದ್ಯಗಳನ್ನು ಗೆದ್ದು 6 ಅಂಕ ಗಿಟ್ಟಿಸಿಕೊಂಡು 2ನೇ ಸ್ಥಾನದಲ್ಲಿದೆ. 3 ಪಂದ್ಯದಲ್ಲಿ 2 ಪಂದ್ಯ ಗೆದ್ದು ಕೇರಳ ಸ್ಟೈಕರ್ಸ್ 3ನೇ ಸ್ಥಾನ ಪಡೆದಿದ್ದು 3 ಪಂದ್ಯಗಳಲ್ಲಿ ಒಂದು ಪಂದ್ಯ ಗೆದ್ದು ಒಳ್ಳೆಯ ನೆಟ್ ರನ್‌ರೇಟ್ ಕಾರಣಕ್ಕೆ ಪಂಜಾಬ್ ದೆ ಶೇರ್ 4ನೇ ಸ್ಥಾನದಲ್ಲಿದೆ. ಈ 4 ತಂಡಗಳು ಸೆಮಿಫೈನಲ್ ಹಂತ ಏರುವುದು ಬಹುತೇಕ ಖಚಿತವಾಗಿದೆ.

ಸಿಸಿಎಲ್‌ ಟೂರ್ನಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್ ಈವರೆಗೆ 2 ಬಾರಿ ಟ್ರೋಫಿ ಗೆದ್ದಿದೆ. ಕಳೆದ ಸೀಸನ್‌ನಲ್ಲಿ ಪ್ರಬಲ ತಂಡ ಎಂದೇ ಗುರ್ತಿಸಿಕೊಂಡಿದ್ದ ಸುದೀಪ್ ಪಡೆ ನಿರಾಸೆ ಅನುಭವಿಸಿತ್ತು. ಆದರೆ ಈ ಬಾರಿ 3 ಪಂದ್ಯ ಗೆದ್ದು ಬೀಗಿದೆ. ತೆಲುಗು ವಾರಿಯರ್ಸ್ ಹಾಗೂ ಪಂಜಾಬ್ ದೆ ಶೇರ್ ರೀತಿಯ ಘಟಾನುಘಟಿ ತಂಡಗಳನ್ನು ಸೋಲಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT