ಸಂಜು ಸ್ಯಾಮ್ಸನ್ 
ಕ್ರಿಕೆಟ್

ಫಾರ್ಮ್‌ಗೆ ಮರಳಲು ಸಂಜು ಸ್ಯಾಮ್ಸನ್‌ಗೆ ಗೌತಮ್ ಗಂಭೀರ್‌ ಸಹಾಯ ಮಾಡಬೇಕು: ಟೀಂ ಇಂಡಿಯಾ ಮಾಜಿ ನಾಯಕ

ಸ್ಯಾಮ್ಸನ್ ತನ್ನ ಅತ್ಯುತ್ತಮ ಫಾರ್ಮ್ ಕಂಡುಕೊಳ್ಳುವಲ್ಲಿ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ನಾಯಕ ಸೂರ್ಯಕುಮಾರ್ ಯಾದವ್ ಅವರ ಪಾತ್ರ ದೊಡ್ಡದು ಎಂದು ರಹಾನೆ ಹೇಳಿದ್ದಾರೆ.

ಭಾರತದ ಟಿ20ಐ ತಂಡಕ್ಕೆ ಸಂಜು ಸ್ಯಾಮ್ಸನ್ ಮರಳಿದ್ದು, ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ ಭಾರತ 3-0 ಮುನ್ನಡೆ ಸಾಧಿಸಿದ್ದರೂ, ಸಂಜು ಸ್ಯಾಮ್ಸನ್ 10, 6 ಮತ್ತು 0 ರನ್ ಗಳಿಸಿದ್ದಾರೆ. ಇಶಾನ್ ಕಿಶನ್ ಇದೀಗ ಉತ್ತಮ ಫಾರ್ಮ್‌ನಲ್ಲಿರುವ ಕಾರಣ, 2026ರ ಟಿ20 ವಿಶ್ವಕಪ್‌ಗೆ ಮುನ್ನ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ಸ್ಯಾಮ್ಸನ್ ಅವರ ಸ್ಥಾನವು ಪ್ರಶ್ನಾರ್ಹವಾಗಿದೆ. ಆದಾಗ್ಯೂ, ಭಾರತದ ಮಾಜಿ ಟೆಸ್ಟ್ ನಾಯಕ ಅಜಿಂಕ್ಯ ರಹಾನೆ ಸ್ಯಾಮ್ಸನ್ ಅವರನ್ನು ಬೆಂಬಲಿಸಬೇಕೆಂದು ಒತ್ತಾಯಿಸಿದ್ದಾರೆ.

ಸ್ಯಾಮ್ಸನ್ ತನ್ನ ಅತ್ಯುತ್ತಮ ಫಾರ್ಮ್ ಕಂಡುಕೊಳ್ಳುವಲ್ಲಿ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ನಾಯಕ ಸೂರ್ಯಕುಮಾರ್ ಯಾದವ್ ಅವರ ಪಾತ್ರ ದೊಡ್ಡದು ಎಂದು ರಹಾನೆ ಹೇಳಿದ್ದಾರೆ.

'ಅಲ್ಲಿಯೇ ತಂಡದ ಆಡಳಿತ ಮಂಡಳಿ ಮತ್ತು ನಾಯಕನ ಪಾತ್ರ ನಿರ್ಣಾಯಕವಾಗಿರುತ್ತದೆ ಎಂದು ನಾನು ಭಾವಿಸುತ್ತೇನೆ. ಸಂಜು ಸ್ಯಾಮ್ಸನ್‌ಗೆ 'ನೀವು ಈ ಎಲ್ಲ ಪಂದ್ಯಗಳನ್ನು ಮತ್ತು ಟಿ20 ವಿಶ್ವಕಪ್‌ನಲ್ಲಿಯೂ ಸಹ ಆಡಲಿದ್ದೀರಿ. ಆದ್ದರಿಂದ ನಿಮ್ಮ ಸ್ಥಾನದ ಬಗ್ಗೆ ಚಿಂತಿಸಬೇಡಿ' ಎಂದು ಹೇಳುವುದು ತುಂಬಾ ಮುಖ್ಯ' ಎಂದು ರಹಾನೆ ಕ್ರಿಕ್‌ಬಜ್‌ನಲ್ಲಿ ಮಾತನಾಡುತ್ತಾ ಹೇಳಿದ್ದಾರೆ.

'ಅಭಿಷೇಕ್ ಶರ್ಮಾ ಜೊತೆ ಹೋಲಿಸಲಾಗುತ್ತಿರುವುದರಿಂದ ಸಂಜು ಸ್ಯಾಮ್ಸನ್ ಒತ್ತಡವನ್ನು ಎದುರಿಸುತ್ತಿದ್ದಾರೆ. ಅದನ್ನು ನಿಭಾಯಿಸಲು, ಸ್ಯಾಮ್ಸನ್ ತನ್ನದೇ ಆದ ಆಟದ ಶೈಲಿಯ ಮೇಲೆ ಗಮನಹರಿಸಬೇಕು, ತನ್ನದೇ ಆದ ಆಟದ ಯೋಜನೆಯನ್ನು ಅನುಸರಿಸಬೇಕು' ಎಂದು ರಹಾನೆ ಹೇಳಿದರು.

2024ರಲ್ಲಿ ಯಶಸ್ವಿ ಪ್ರದರ್ಶನ ನೀಡಿದರೂ, ಶುಭಮನ್ ಗಿಲ್ ಅವರನ್ನು ಮತ್ತೆ ತಂಡಕ್ಕೆ ಸೇರಿಸಿಕೊಂಡ ಕಾರಣ ಸ್ಯಾಮ್ಸನ್ ಭಾರತದ ಪ್ಲೇಯಿಂಗ್ XIನಲ್ಲಿ ಆರಂಭಿಕ ಆಟಗಾರನ ಸ್ಥಾನವನ್ನು ಕಳೆದುಕೊಂಡರು. ಅಂತಿಮವಾಗಿ, ಸ್ಯಾಮ್ಸನ್ ತಂಡದಲ್ಲಿ ತಮ್ಮ ಸ್ಥಾನವನ್ನು ಸಂಪೂರ್ಣವಾಗಿ ಕಳೆದುಕೊಂಡರು. ಗಿಲ್ ಅವರನ್ನು T20 ವಿಶ್ವಕಪ್ 2026 ತಂಡದಿಂದ ಹೊರಗಿಡುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ನಿರ್ಧಾರವು ಸ್ಯಾಮ್ಸನ್‌ಗೆ ತಂಡಕ್ಕೆ ಮರಳಲು ಮತ್ತೆ ಅವಕಾಶ ಮಾಡಿಕೊಟ್ಟಿದೆ.

ಗಾಯಗೊಂಡ ತಿಲಕ್ ವರ್ಮಾ ಅನುಪಸ್ಥಿತಿಯಲ್ಲಿ, ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿರುವ ಇಶಾನ್ ಕಿಶನ್ ಸ್ಥಾನ ಪಡೆದಿದ್ದು, ಇಲ್ಲಿಯವರೆಗೆ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಬ್ಯಾಟಿಂಗ್‌ನಲ್ಲಿ ಇದೇ ರೀತಿಯ ಪ್ರದರ್ಶನವನ್ನು ಮುಂದುವರಿಸಿದರೆ, ತಂಡದಲ್ಲಿ ಸಂಜು ಸ್ಯಾಮ್ಸನ್ ಅವರ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಜನವರಿ 29 ಮತ್ತು 31 ರಂದು ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಉಳಿದ ಎರಡು ಟಿ20ಐಗಳಲ್ಲಿ ಸ್ಯಾಮ್ಸನ್ ಉತ್ತಮ ಪ್ರದರ್ಶನ ನೀಡಬೇಕಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಮಹಾತ್ಮಾ ಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ

ಶಿವಮೊಗ್ಗ: ನಡುರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್, 8 ಮಂದಿಗೆ ಗಾಯ, ಪ್ರಯಾಣಿಕರ ಜೀವ ಕಾಪಾಡಿದ ಚಾಲಕನ ಸಮಯ ಪ್ರಜ್ಞೆ-Video

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಪರಿಹಾರ ಒದಗಿಸಲು ಶೀಘ್ರದಲ್ಲೇ ಸಭೆ: ಜನಪ್ರತಿನಿಧಿಗಳಿಗೆ ಫಾಸ್ಟ್ಯಾಗ್ ಸೌಲಭ್ಯ ಕಲ್ಪಿಸಲು ಸಹಕಾರ

ಪಕ್ಷದ ಕಚೇರಿ ನಿರ್ಮಾಣದಲ್ಲಿ ಆಸಕ್ತಿ ತೋರದವರ ಬಗ್ಗೆ 2 ದಿನಗಳಲ್ಲಿ AICC ಗೆ ಲಿಖಿತ ಮಾಹಿತಿ: ಡಿ.ಕೆ. ಶಿವಕುಮಾರ್

'ನಾಚಿಕೆಗೇಡಿನ ಸಂಗತಿ'; ಎಲ್ಲಾ ಪಕ್ಷಗಳ ದೊಡ್ಡ ಕುಳಗಳು 'ಅಕ್ರಮ ಮರಳು ಗಣಿಗಾರಿಕೆಯಲ್ಲಿ ಭಾಗಿ': ಪರಮೇಶ್ವರ್

SCROLL FOR NEXT