ಸಂಗ್ರಹ ಚಿತ್ರ 
ಕ್ರಿಕೆಟ್

4ನೇ T20: ದುಬೆ ಅರ್ಧಶತಕ ವ್ಯರ್ಥ; ನ್ಯೂಜಿಲ್ಯಾಂಡ್ ವಿರುದ್ಧ 50 ರನ್‌ನಿಂದ ಸೋತ ಭಾರತ!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯ ಇಂದು ವಿಶಾಖಪಟ್ಟಣಂನ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು. ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಈಗಾಗಲೇ 3-0 ಮುನ್ನಡೆ ಸಾಧಿಸಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯ ಇಂದು ವಿಶಾಖಪಟ್ಟಣಂನ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು. ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಈಗಾಗಲೇ 3-0 ಮುನ್ನಡೆ ಸಾಧಿಸಿದೆ. ಆದರೆ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ.

ನ್ಯೂಜಿಲ್ಯಾಂಡ್ ಮೊದಲು ಬ್ಯಾಟಿಂಗ್ ಮಾಡಿದ್ದು ಕಿವೀಸ್ ಪರ ಬ್ಯಾಟ್ಸ್‌ಮನ್‌ಗಳು ಅದ್ಭುತ ಪ್ರದರ್ಶನ ನೀಡಿದರು. ನ್ಯೂಜಿಲೆಂಡ್ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 215 ರನ್‌ಗಳ ಬೃಹತ್ ಮೊತ್ತ ಗಳಿಸಿದ್ದು ಭಾರತಕ್ಕೆ ಗೆಲ್ಲಲು 216 ರನ್ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 18.4 ಓವರ್ ನಲ್ಲಿ 165 ರನ್ ಗಳಿಗೆ ಆಲೌಟ್ ಆಗುವ ಮೂಲಕ ನ್ಯೂಜಿಲ್ಯಾಂಡ್ ಗೆ 50 ರನ್ ಗಳಿಂದ ಶರಣಾಯಿತು.

ಕಿವೀಸ್ ಪರ ಟಿಮ್ ಸೀಫರ್ಟ್ 36 ಎಸೆತಗಳಲ್ಲಿ 62 ರನ್ ಗಳಿಸಿದರೆ, ಡೆವೊನ್ ಕಾನ್ವೇ 23 ಎಸೆತಗಳಲ್ಲಿ 44 ರನ್ ಗಳಿಸಿದರು. ಈ ಇಬ್ಬರೂ ಮೊದಲ ವಿಕೆಟ್‌ಗೆ 100 ರನ್ ಜೊತೆಯಾಟ ನೀಡಿದರು. ನಂತರ, ಡ್ಯಾರಿಲ್ ಮಿಚೆಲ್ 18 ಎಸೆತಗಳಲ್ಲಿ ಅಜೇಯ 39 ರನ್ ಗಳಿಸಿ ಮೊತ್ತವನ್ನು 200 ರನ್​ಗಳ ಗಡಿ ದಾಟಿಸಿದರು. ಭಾರತದ ಪರ, ಅರ್ಷದೀಪ್ ಸಿಂಗ್ ಮತ್ತು ಕುಲ್ದೀಪ್ ಯಾದವ್ ತಲಾ ಎರಡು ವಿಕೆಟ್ ಪಡೆದರು.

ಟೀಂ ಇಂಡಿಯಾ ಪರ ಏಕಾಂಗಿ ಹೋರಾಟ ನಡೆಸಿದ ಶಿವಂ ದುಬೆ 23 ಎಸೆತಗಳಲ್ಲಿ 65 ರನ್ ಬಾರಿಸಿದರು. ಇನ್ನುಳಿದಂತೆ ರಿಂಕು ಸಿಂಗ್ 39 ರನ್ ಬಾರಿಸಿದರೆ ಸಂಜು ಸ್ಯಾಮ್ಸನ್ 24 ರನ್ ಸಿಡಿಸಿದ್ದು ಮತ್ಯಾರೂ ಎರಡಂಕಿ ದಾಟಲಿಲ್ಲ. ನ್ಯೂಜಿಲ್ಯಾಂಡ್ ಪರ ಮಿಚೆಲ್ ಸ್ಯಾಂಟ್ನರ್ 3 ವಿಕೆಟ್, ಇಶ್ ಸೋಧಿ ಮತ್ತು ಜಾಕೋಬ್ ಡಫ್ಫಿ ತಲಾ 2 ವಿಕೆಟ್ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!