ಸಂಜು ಸ್ಯಾಮ್ಸನ್ 
ಕ್ರಿಕೆಟ್

ವೈಭವ್ ಸೂರ್ಯವಂಶಿಗಾಗಿ ಸಂಜು ಸ್ಯಾಮ್ಸನ್ ಕೈಬಿಟ್ಟ ವಿವಾದಾತ್ಮಕ ನಿರ್ಧಾರ; ಮೌನ ಮುರಿದ ಗೌತಮ್ ಗಂಭೀರ್

ಐರ್ಲೆಂಡ್ ವಿರುದ್ಧದ ಎರಡು ಟಿ20 ಪಂದ್ಯಗಳು ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಆರಂಭಿಕ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲರಾದ ಸ್ಯಾಮ್ಸನ್ ಅವರನ್ನು ಕೈಬಿಟ್ಟು, ಅವರ ಬದಲಿಗೆ 15 ವರ್ಷದ ವೈಭವ್ ಸೂರ್ಯವಂಶಿಯನ್ನು ತಂಡಕ್ಕೆ ಸೇರಿಸಿಕೊಳ್ಳಲಾಯಿತು.

ಭಾರತ ತಂಡ ಮೂರನೇ ಟಿ20ಐನಲ್ಲಿ ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲು ಅನುಭವಿಸಿದ ನಂತರ ಭಾರತದ ಮುಖ್ಯ ಕೋಚ್ ಗೌತಮ್ ಗಂಭೀರ್ ಇದೀಗ ಮತ್ತೊಂಮ್ಮೆ ಕೇಂದ್ರಬಿಂದುವಾಗಿದ್ದಾರೆ. 202 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ ಕೇವಲ 76 ರನ್‌ಗಳಿಗೆ ಆಲೌಟ್ ಆದ ನಂತರ, 2026ರ ಟಿ20 ವಿಶ್ವಕಪ್‌ ಗೆಲುವಿನ ಹೀರೋ ಸಂಜು ಸ್ಯಾಮ್ಸನ್ ಅವರನ್ನು ಕೈಬಿಟ್ಟ ಆಡಳಿತ ಮಂಡಳಿಯ ನಿರ್ಧಾರದ ಬಗ್ಗೆ ಪ್ರಶ್ನೆಗಳು ಉದ್ಭವಿಸಿವೆ. ಪಂದ್ಯದ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಗಂಭೀರ್, ತಮ್ಮ ಮತ್ತು ಸ್ಯಾಮ್ಸನ್ ನಡುವಿನ ವಿಷಯದ ಬಗ್ಗೆ ಸಂಪೂರ್ಣ ಸ್ಪಷ್ಟತೆ ಇದೆ. ಆದರೆ, ಸಂಭಾಷಣೆಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಐರ್ಲೆಂಡ್ ವಿರುದ್ಧದ ಎರಡು ಟಿ20 ಪಂದ್ಯಗಳು ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಆರಂಭಿಕ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲರಾದ ಸ್ಯಾಮ್ಸನ್ ಅವರನ್ನು ಕೈಬಿಟ್ಟು, ಅವರ ಬದಲಿಗೆ 15 ವರ್ಷದ ವೈಭವ್ ಸೂರ್ಯವಂಶಿಯನ್ನು ತಂಡಕ್ಕೆ ಸೇರಿಸಿಕೊಳ್ಳಲಾಯಿತು. ಆದರೆ, ವೈಭವ್ ಕೂಡ ಎರಡೂ ಪಂದ್ಯಗಳಲ್ಲಿ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಆದಾಗ್ಯೂ, ಭಾರತದ ಟಿ20 ತಂಡದಲ್ಲಿನ ತಮ್ಮ ಪಾತ್ರದ ಕುರಿತು ಸ್ಯಾಮ್ಸನ್ ಅವರಿಗೆ ಸಂಪೂರ್ಣ ಸ್ಪಷ್ಟತೆ ನೀಡಲಾಗಿದೆ ಎಂದು ಗಂಭೀರ್ ಹೇಳಿದರು.

'ಮೊದಲನೆಯದಾಗಿ, ಸಂಜು ಸ್ಯಾಮ್ಸನ್ ಅವರಿಗೆ ಅಗತ್ಯವಿದ್ದ ಸ್ಪಷ್ಟತೆಯನ್ನು ನನ್ನ ಕಡೆಯಿಂದ ನೀಡಲಾಗಿದೆ. ಅದು ಆಟಗಾರ ಮತ್ತು ಮುಖ್ಯ ಕೋಚ್ ನಡುವಿನ ಸಂಪೂರ್ಣ ಖಾಸಗಿ ಸಂಭಾಷಣೆ; ಆ ವಿಷಯ ಹೊರಗೆ ಬರುವುದಿಲ್ಲ' ಎಂದು ಪತ್ರಿಕಾಗೋಷ್ಠಿಯಲ್ಲಿ ಗಂಭೀರ್ ಹೇಳಿದರು.

'ಸಂಜು ವಿಷಯದಲ್ಲಿ ನಾವು ಬಹಳ ಸ್ಪಷ್ಟವಾಗಿದ್ದೇವೆ. ಭಾರತಕ್ಕಾಗಿ ಅವರು ನೀಡಿರುವ ಕೊಡುಗೆ ಅದ್ಭುತವಾಗಿದೆ; ಕೆಲವೊಮ್ಮೆ ಆಟಗಾರನ ಸದ್ಯದ ಫಾರ್ಮ್ ಅನ್ನು ಗಮನಿಸಬೇಕಾಗುತ್ತದೆ. ಈ ಸರಣಿಯಲ್ಲಿ ಅವರು ಮತ್ತೆ ತಂಡಕ್ಕೆ ಮರಳಲು ಸಾಧ್ಯವಿಲ್ಲ ಎಂಬಂತಹ ಯಾವುದೇ ಕಟ್ಟುನಿಟ್ಟಾದ ನಿಯಮವಿಲ್ಲ' ಎಂದು ಅವರು ಹೇಳಿದರು.

ಅಂತರರಾಷ್ಟ್ರೀಯ ಕ್ರಿಕೆಟ್ ಎಂದರೆ ವ್ಯಕ್ತಿಗಳ ಬಗ್ಗೆ ಅಲ್ಲ, ತಂಡದ ಸಂಯೋಜನೆ ಎಂದರು. ವೈಭವ್ ಸೂರ್ಯವಂಶಿ ಮತ್ತು ಅಭಿಷೇಕ್ ಶರ್ಮಾ ಅವರ ಆರಂಭಿಕ ಸಂಯೋಜನೆಯನ್ನು ಮ್ಯಾನೇಜ್ಮೆಂಟ್ ನಂಬಿದ್ದರಿಂದ ಅವರನ್ನು ತಂಡಕ್ಕೆ ಕರೆತರಲಾಯಿತು. ಆದಾಗ್ಯೂ, ತಪ್ಪು ಸೂರ್ಯವಂಶಿಯವರದ್ದಲ್ಲ; ಇಡೀ ಭಾರತೀಯ ತಂಡವು ಯುನೈಟೆಡ್ ಕಿಂಗ್ಡಮ್ ಪ್ರವಾಸದಲ್ಲಿ, ಐರ್ಲೆಂಡ್ ವಿರುದ್ಧ ಮತ್ತು ಇಂಗ್ಲೆಂಡ್ ಸರಣಿಯಲ್ಲಿ ಇದುವರೆಗೆ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ.

'ಅಂತರರಾಷ್ಟ್ರೀಯ ಕ್ರಿಕೆಟ್ ಫಲಿತಾಂಶಗಳು ಮುಖ್ಯವಾಗಿರುವುದರಿಂದ ಆ ಫಲಿತಾಂಶ ಪಡೆಯಲು ಉತ್ತಮ ಸಂಯೋಜನೆ ಎಂದು ನಾವು ಭಾವಿಸುವ ಯಾವುದೇ ಸಂಯೋಜನೆಯನ್ನು ನಾವು ಆಡಿಸುತ್ತೇವೆ. ನಾವು ಆ ಸಂಯೋಜನೆಯನ್ನು ಮತ್ತು ಆ ಪ್ಲೇಯಿಂಗ್ XI ಅನ್ನು ನೋಡುತ್ತೇವೆ. ಪ್ರತಿಯೊಬ್ಬರೂ ತಮ್ಮ ಸ್ಥಾನ ಮತ್ತು ಭಾರತಕ್ಕಾಗಿ ಆಡುವ ಹಕ್ಕನ್ನು ಗಳಿಸಬೇಕು ಎಂಬುದರಲ್ಲಿ ನಾನು ಯಾವಾಗಲೂ ನಂಬಿಕೆ ಇಟ್ಟಿದ್ದೇನೆ' ಎಂದರು.

'ಹೊಂದಿಕೊಳ್ಳುವಿಕೆಯ ವಿಷಯಕ್ಕೆ ಬಂದರೆ, ನಾವು ಸಮರ್ಪಕವಾಗಿ ಹೊಂದಿಕೊಂಡಿಲ್ಲ ಎಂಬುದು ಸ್ಪಷ್ಟ. ಐರ್ಲೆಂಡ್ ಆಗಲಿ ಅಥವಾ ಇಂಗ್ಲೆಂಡ್ ಆಗಲಿ, ನಾವು ಚೆನ್ನಾಗಿ ಹೊಂದಿಕೊಂಡಿದ್ದರೆ ಅಥವಾ ಉತ್ತಮ ಕ್ರಿಕೆಟ್ ಆಡಿದ್ದರೆ, ಬಹುಶಃ ಸತತ ನಾಲ್ಕು ಪಂದ್ಯಗಳನ್ನು ಸೋಲುತ್ತಿರಲಿಲ್ಲ' ಎಂದು ಭಾರತ ತಂಡದ ಕೋಚ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಿಜ್ಜರ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಾರೆನ್ಸ್ ಬಿಷ್ಣೋಯ್, ಗೋಲ್ಡಿ ಬ್ರಾರ್ ವಿರುದ್ಧ ಅಮೆರಿಕಾ ಚಾರ್ಜ್‌ಶೀಟ್, 24 ಮಂದಿ ಬಂಧನ..!

ಬಾರೂಯೀಪುರ್ ಬಾಲಕಿ ಅತ್ಯಾಚಾರ-ಕೊಲೆ ಪ್ರಕರಣ: ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಬಲಿ..!

ತೈಲ ಹಡಗುಗಳ ಮೇಲಿನ ದಾಳಿಗೆ ಅಮೆರಿಕಾ ಸೇಡು: ಇರಾನ್ ಮೇಲೆ ಭೀಕರ ವೈಮಾನಿಕ ದಾಳಿ, ಪ್ರತೀಕಾರದ ಎಚ್ಚರಿಕೆ ಕೊಟ್ಟ ಟೆಹ್ರಾನ್..!

Greenland ಮೇಲೆ ಮತ್ತೆ ಟ್ರಂಪ್ ಕಣ್ಣು: NATOದಲ್ಲಿ ಶತಕೋಟಿ ಡಾಲರ್ ಶಸ್ತ್ರಾಸ್ತ್ರ ಒಪ್ಪಂದ, ಟರ್ಕಿಗೆ F-35 ಮಾರಾಟಕ್ಕೂ ಒಪ್ಪಿಗೆ..!

ಶಾಸಕರ ಭವನದ ವಾಹನ ದುರ್ಬಳಕೆಗೆ ಬ್ರೇಕ್: ವಿಧಾನಸಭಾ ಕಾರ್ಯಾಲಯದಿಂದ ಕಠಿಣ ರೂಲ್ಸ್; ಬಳಸಿದ ವಾಹನದ ಬಾಡಿಗೆ ನೇರವಾಗಿ ಶಾಸಕರ ವೇತನದಿಂದಲೇ ವಸೂಲಿ..!