ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು 
ಕ್ರಿಕೆಟ್

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಇಂದು ಸೌತಾಂಪ್ಟನ್‌ನ ಯುಟಿಲಿಟಾ ಬೌಲ್ ಕ್ರೀಡಾಂಗಣದಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಶ್ರೇಯಸ್ ಅಯ್ಯರ್ ಅವರು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.

ಸೌತಾಂಪ್ಟನ್‌: ಇಂಗ್ಲೆಂಡ್​ನ ಸೌತಾಂಪ್ಟನ್‌ನಲ್ಲಿ ಶನಿವಾರ ನಡೆದ ಐದು ಪಂದ್ಯಗಳ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್, ಭಾರತದ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಸರಣಿ ವೈಟ್‌ವಾಶ್ ಮಾಡಿದೆ.

ಇಂದು ಸೌತಾಂಪ್ಟನ್‌ನ ಯುಟಿಲಿಟಾ ಬೌಲ್ ಕ್ರೀಡಾಂಗಣದಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಶ್ರೇಯಸ್ ಅಯ್ಯರ್ ಅವರು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್‌, ಇಂಗ್ಲೆಂಡ್ ಪರ ಜೋಸ್ ಬಟ್ಲರ್ 64 ಎಸೆತಗಳಲ್ಲಿ 12 ಬೌಂಡರಿಗಳು ಮತ್ತು ಎಂಟು ಸಿಕ್ಸರ್‌ಗಳೊಂದಿಗೆ 131 ರನ್ ಗಳಿಸಿದ್ರೆ, ಹ್ಯಾರಿ ಬ್ರೂಕ್ 45 ಎಸೆತಗಳಲ್ಲಿ 4 ಬೌಂಡರಿ 8 ಸಿಕ್ಸರ್​​​ ಬಾರಿಸಿ 95 ರನ್​ ಗಳಿಸುವ ಮೂಲಕ ತಂಡ 258 ರನ್ ಗಳ ಬೃಹತ್ ಮೊತ್ತ ಕಲೆಹಾಕಲು ಸಹಾಯ ಮಾಡಿದರು.

ಗೆಲುವಿಗೆ 259 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿದ ಭಾರತ, ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 201 ರನ್ ಗಳಿಸಲಷ್ಟೇ ಶಕ್ತವಾಯಿತು. ಇದೊರೊಂದಿಗೆ ಹಾಲಿ ಚಾಂಪಿಯನ್‌ ಭಾರತದ ವಿರುದ್ಧ ಇಂಗ್ಲೆಂಡ್ 56 ರನ್ ಗಳ ಭರ್ಜರಿ ಗೆಲುವು ಸಾಧಿಸಿತು.

ಭಾರತದ ಪರ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್(27), ಅಭಿಷೇಕ್ ಶರ್ಮಾ(3), ಹಾಗೂ ಇಶಾನ್ ಕಿಶನ್ 56 ರನ್ ಗಳಿಸಿದರೆ, ನಾಯಕ ಶ್ರೇಯಸ್ ಅಯ್ಯರ್ 28 ಮತ್ತು ತಿಲಕ್ ವರ್ಮಾ ಅವರು 53 ರನ್ ಗಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel