ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು 
ಕ್ರಿಕೆಟ್

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಇಂದು ಸೌತಾಂಪ್ಟನ್‌ನ ಯುಟಿಲಿಟಾ ಬೌಲ್ ಕ್ರೀಡಾಂಗಣದಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಶ್ರೇಯಸ್ ಅಯ್ಯರ್ ಅವರು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.

ಸೌತಾಂಪ್ಟನ್‌: ಇಂಗ್ಲೆಂಡ್​ನ ಸೌತಾಂಪ್ಟನ್‌ನಲ್ಲಿ ಶನಿವಾರ ನಡೆದ ಐದು ಪಂದ್ಯಗಳ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್, ಭಾರತದ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಸರಣಿ ವೈಟ್‌ವಾಶ್ ಮಾಡಿದೆ.

ಇಂದು ಸೌತಾಂಪ್ಟನ್‌ನ ಯುಟಿಲಿಟಾ ಬೌಲ್ ಕ್ರೀಡಾಂಗಣದಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಶ್ರೇಯಸ್ ಅಯ್ಯರ್ ಅವರು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್‌, ಇಂಗ್ಲೆಂಡ್ ಪರ ಜೋಸ್ ಬಟ್ಲರ್ 64 ಎಸೆತಗಳಲ್ಲಿ 12 ಬೌಂಡರಿಗಳು ಮತ್ತು ಎಂಟು ಸಿಕ್ಸರ್‌ಗಳೊಂದಿಗೆ 131 ರನ್ ಗಳಿಸಿದ್ರೆ, ಹ್ಯಾರಿ ಬ್ರೂಕ್ 45 ಎಸೆತಗಳಲ್ಲಿ 4 ಬೌಂಡರಿ 8 ಸಿಕ್ಸರ್​​​ ಬಾರಿಸಿ 95 ರನ್​ ಗಳಿಸುವ ಮೂಲಕ ತಂಡ 258 ರನ್ ಗಳ ಬೃಹತ್ ಮೊತ್ತ ಕಲೆಹಾಕಲು ಸಹಾಯ ಮಾಡಿದರು.

ಗೆಲುವಿಗೆ 259 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿದ ಭಾರತ, ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 201 ರನ್ ಗಳಿಸಲಷ್ಟೇ ಶಕ್ತವಾಯಿತು. ಇದೊರೊಂದಿಗೆ ಹಾಲಿ ಚಾಂಪಿಯನ್‌ ಭಾರತದ ವಿರುದ್ಧ ಇಂಗ್ಲೆಂಡ್ 56 ರನ್ ಗಳ ಭರ್ಜರಿ ಗೆಲುವು ಸಾಧಿಸಿತು.

ಭಾರತದ ಪರ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್(27), ಅಭಿಷೇಕ್ ಶರ್ಮಾ(3), ಹಾಗೂ ಇಶಾನ್ ಕಿಶನ್ 56 ರನ್ ಗಳಿಸಿದರೆ, ನಾಯಕ ಶ್ರೇಯಸ್ ಅಯ್ಯರ್ 28 ಮತ್ತು ತಿಲಕ್ ವರ್ಮಾ ಅವರು 53 ರನ್ ಗಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!