ಮಹಾರಾಜ ಟ್ರೋಫಿ 2026 - ಎಂ ಚಿನ್ನಸ್ವಾಮಿ ಸ್ಟೇಡಿಯಂ 
ಕ್ರಿಕೆಟ್

ಮಹಾರಾಜ ಟ್ರೋಫಿ 2026 ವೇಳಾಪಟ್ಟಿ ಬಿಡುಗಡೆ ಮಾಡಿದ KSCA; ಜೂನ್ 5ರಂದು ಬೆಂಗಳೂರಿನಲ್ಲಿ ಹರಾಜು!

ಈ ಹಿಂದೆ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಆಸನ ಸಾಮರ್ಥ್ಯ ವಿಸ್ತರಣೆಯನ್ನು ಉಲ್ಲೇಖಿಸಿ ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಪಂದ್ಯಗಳನ್ನು ಆಯೋಜಿಸಲು ಅಂತಿಮಗೊಳಿಸಿತ್ತು.

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) 2026ರ ಮಹಾರಾಜ ಟ್ರೋಫಿ T20 ಆವೃತ್ತಿಯ ಹರಾಜು ದಿನಾಂಕ ಮತ್ತು ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ. ಈ ಹಿಂದೆ, KSCA ಮೈಸೂರಿನ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಕ್ರಿಕೆಟ್ ಕ್ರೀಡಾಂಗಣ ಮತ್ತು ಹುಬ್ಬಳ್ಳಿಯ KSCA ಕ್ರೀಡಾಂಗಣದಲ್ಲಿ ಪಂದ್ಯಾವಳಿ ಆಯೋಜಿಸಿತ್ತು. ಇದೀಗ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೂ ಪಂದ್ಯಗಳನ್ನು ಆಯೋಜಿಸಲಿದೆ.

ಪ್ಲೇಆಫ್‌ಗಳು ಸೇರಿದಂತೆ ಕೊನೆಯ 10 ಪಂದ್ಯಗಳು (ಪ್ಲೇಆಫ್‌ಗಳು ಸೇರಿದಂತೆ) ಬೆಂಗಳೂರಿನಲ್ಲಿ ನಡೆಯಲಿವೆ. ಕೊನೆಯ ಬಾರಿಗೆ ಮಹಾರಾಜ ಟ್ರೋಫಿ ಟಿ20 ಪಂದ್ಯವನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2024ರಲ್ಲಿ ನಡೆಸಲಾಗಿತ್ತು. ಆಗ ಇಡೀ ಆವೃತ್ತಿಯು ಅಲ್ಲಿಯೇ ನಡೆದಿತ್ತು.

ಈ ಹಿಂದೆ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಆಸನ ಸಾಮರ್ಥ್ಯ ವಿಸ್ತರಣೆಯನ್ನು ಉಲ್ಲೇಖಿಸಿ ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಪಂದ್ಯಗಳನ್ನು ಆಯೋಜಿಸಲು ಅಂತಿಮಗೊಳಿಸಿತ್ತು. ಆದಾಗ್ಯೂ, ಈಗ ಆ ಯೋಜನೆಯನ್ನು ಬದಲಿಸಲಾಗಿದ್ದು, ಪಂದ್ಯಗಳನ್ನು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಗುತ್ತಿದೆ.

'ರಾಜ್ಯದಾದ್ಯಂತ ಅಭಿಮಾನಿಗಳಿಗೆ ಉತ್ತಮ ಗುಣಮಟ್ಟದ ಕ್ರಿಕೆಟ್ ಅನ್ನು ಕೊಂಡೊಯ್ಯುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ದೃಷ್ಟಿಕೋನಕ್ಕೆ ಅನುಗುಣವಾಗಿ, ಪಂದ್ಯಾವಳಿಯನ್ನು ಮೂರು ಕೇಂದ್ರಗಳಲ್ಲಿ ಆಯೋಜಿಸಲಾಗುವುದು. ಮೈಸೂರು ಲೆಗ್ ಜೂನ್ 20 ರಿಂದ 26 ರವರೆಗೆ ನಡೆಯಲಿದ್ದು, ನಂತರ ಜೂನ್ 27 ರಿಂದ ಜುಲೈ 3ರವರೆಗೆ ಹುಬ್ಬಳ್ಳಿಗೆ ಸ್ಥಳಾಂತರಗೊಳ್ಳಲಿದೆ. ನಂತರ ಪಂದ್ಯಾವಳಿ ಜುಲೈ 5 ರಿಂದ 12 ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ' ಎಂದು ಕೆಎಸ್‌ಸಿಎ ತಿಳಿಸಿದೆ.

2 ಹೊಸ ತಂಡಗಳು ಸೇರ್ಪಡೆ

ಶಿವಮೊಗ್ಗ ಯೋಧಾಸ್ (ಹಿಂದೆ ಶಿವಮೊಗ್ಗ ಲಯನ್ಸ್) 2026ರ ಮಹಾರಾಜ ಟ್ರೋಫಿಯ ಎರಡನೇ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ತಂಡವನ್ನು ಎದುರಿಸಲಿದೆ. ಕೋಸ್ಟಲ್ ಕಿಂಗ್ಸ್ ಮಂಗಳೂರು (ಹಿಂದೆ ಮಂಗಳೂರು ಡ್ರಾಗನ್ಸ್) ಜೂನ್ 21 ರಂದು ಹುಬ್ಬಳ್ಳಿ ಟೈಗರ್ಸ್ ವಿರುದ್ಧ ಚೊಚ್ಚಲ ಪಂದ್ಯವಾಡಲಿದೆ.

ಮಹಾರಾಜ ಟ್ರೋಫಿ ಟಿ20 2026 ಹರಾಜು ದಿನಾಂಕ ಮತ್ತು ಸ್ಟ್ರೀಮಿಂಗ್ ವಿವರ

ಜೂನ್ 5 ರಂದು ಬೆಂಗಳೂರಿನಲ್ಲಿ ಹರಾಜು ನಡೆಯಲಿದೆ. 150ಕ್ಕೂ ಹೆಚ್ಚು ಆಟಗಾರರು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ಹರಾಜಿನಲ್ಲಿ ಭಾಗವಹಿಸಲಿದ್ದು, ಸೋನಿಲೈವ್‌ನಲ್ಲಿ ಸ್ಟ್ರೀಮ್ ಮಾಡಲಾಗುತ್ತದೆ ಮತ್ತು ಸೋನಿ ಟೆನ್ 5ನಲ್ಲಿ ಪ್ರಸಾರವಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

DK Shivakumar and cabinet swearing-in LIVE updates | ಡಿಕೆ ಶಿವಕುಮಾರ್ ಜೊತೆಗೆ 12-15 ಸಚಿವರು ಇಂದು ಪ್ರಮಾಣ ವಚನ ಸ್ವೀಕಾರ ಸಾಧ್ಯತೆ!

18ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಇಂದು ಪ್ರಮಾಣ ವಚನ: 15 ಸಚಿವರು ಸಂಪುಟ ಸೇರುವ ಸಾಧ್ಯತೆ; ಮೊದಲ ಪಟ್ಟಿಯಿಂದ ಹೆಬ್ಬಾಳ್ಕರ್ ಔಟ್?

ಶಾ ಭೇಟಿಯಾದ 'ಸಿಂಗಂ': ತಮಿಳುನಾಡು BJP ರಾಜ್ಯಾಧ್ಯಕ್ಷರಿಗೆ ಬುಲಾವ್; ರಾಜ್ಯಸಭೆ ಟಿಕೆಟ್ ನಿರಾಕರಿಸಿದ ಅಣ್ಣಾಮಲೈ!

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧ ಆರಂಭ: ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ದಾಳಿ, ಕೆಶ್ಮ್ ದ್ವೀಪದ ಮೇಲೆ ಅಮೆರಿಕ ಸೇನೆಯ ಪ್ರತಿದಾಳಿ!

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ ನಾಗೇಂದ್ರ, ಇತರ 29 ಮಂದಿ ವಿರುದ್ಧ CBI ಚಾರ್ಜ್ ಶೀಟ್ ಸಲ್ಲಿಕೆ

SCROLL FOR NEXT