ವಿರಾಟ್ ಕೊಹ್ಲಿ-ರಜತ್ ಪಾಟಿದಾರ್ 
ಕ್ರಿಕೆಟ್

ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗೆ ಕೊಹ್ಲಿ ಬದಲು ಗಾಯಕ್ವಾಡ್ ಆಯ್ಕೆ ಸಾಧ್ಯತೆ; ರಜತ್ ಪಾಟಿದಾರ್​ಗೂ ಸ್ಥಾನ?

ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿ ಟ್ರೋಫಿ ಮುಡಿಗೇರಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ನಾಯಕ ರಜತ್ ಪಾಟಿದಾರ್ ಅವರಿಗೂ ಭಾರತ ತಂಡದಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ.

ಮುಂಬೈ: ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ಗಾಯದಿಂದಾಗಿ ಮುಂಬರುವ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದು, ಭಾರತ ತಂಡಕ್ಕೆ ದೊಡ್ಡ ಹಿನ್ನಡೆ ಆಗಿದೆ.

ಜೂನ್ 14 ರಂದು ಆರಂಭವಾಗಲಿರುವ ಅಫ್ಘಾನ್ ವಿರುದ್ಧದ ಏಕದಿನ ಸರಣಿಗೆ ವಿರಾಟ್ ಕೊಹ್ಲಿ ಬದಲಿಗೆ ರುತುರಾಜ್ ಗಾಯಕ್ವಾಡ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಅಲ್ಲದೆ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿ ಟ್ರೋಫಿ ಮುಡಿಗೇರಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ನಾಯಕ ರಜತ್ ಪಾಟಿದಾರ್ ಅವರಿಗೂ ಭಾರತ ತಂಡದಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಬಂದ ವರದಿಯ ಪ್ರಕಾರ, ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರುತುರಾಜ್ ಗಾಯಕ್ವಾಡ್ ಅಫ್ಘಾನಿಸ್ತಾನ ಸರಣಿಯಲ್ಲಿ ಕೊಹ್ಲಿ ಬದಲಿಗೆ ಆಡುವ ಸಾಧ್ಯತೆಯಿದೆ.

ಗಾಯಕ್ವಾಡ್ ಶ್ರೀಲಂಕಾಕ್ಕೆ ಪ್ರಯಾಣಿಸುವ ಭಾರತ ಎ ತಂಡದ ಭಾಗವಾಗಲಿದ್ದಾರೆ. ಅಲ್ಲದೆ ಅಫ್ಘಾನಿಸ್ತಾನ ಒಳಗೊಂಡ ತ್ರಿಕೋನ ಸರಣಿಗಾಗಿ ಶ್ರೀಲಂಕಾಕ್ಕೆ ಪ್ರಯಾಣಿಸಲಿರುವ ಭಾರತ ಎ ತಂಡಕ್ಕೆ ರಜತ್ ಪಾಟಿದಾರ್ ಅವರನ್ನು ಆಯ್ಕೆ ಮಾಡಬಹುದು ಎಂದು ವರದಿ ತಿಳಿಸಿದೆ.

ಅಫ್ಘಾನ್ ವಿರುದ್ಧ ಮೂರು ಪಂದ್ಯಗಳ ಸರಣಿಯು ಜೂನ್ 13 ರಂದು ಧರ್ಮಶಾಲಾದಲ್ಲಿ ಆರಂಭವಾಗುತ್ತದೆ.

ಆರ್‌ಸಿಬಿ ಇತಿಹಾಸ ಬದಲಿಸಿದ ನಾಯಕ

ಹಲವು ವರ್ಷಗಳಿಂದ ಚಾಂಪಿಯನ್ ಪಟ್ಟಕ್ಕಾಗಿ ಕಾಯುತ್ತಿದ್ದ ಆರ್‌ಸಿಬಿ ತಂಡಕ್ಕೆ ಸತತ ಎರಡು ಬಾರಿ ಐಪಿಎಲ್ ಟ್ರೋಫಿ ಗೆದ್ದುಕೊಡುವಲ್ಲಿ ರಜತ್ ಪಾಟಿದಾರ್ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದಾರೆ. ಕೇವಲ ನಾಯಕತ್ವ ಮಾತ್ರವಲ್ಲದೆ, ಬ್ಯಾಟಿಂಗ್‌ನಲ್ಲೂ ಮುಂಚೂಣಿಯಲ್ಲಿ ನಿಂತು ಮುನ್ನಡೆಸಿದ ಅವರು, ಪ್ರಸಕ್ತ ಸೀಸನ್‌ನಲ್ಲಿ 192.69ರ ಅದ್ಭುತ ಸ್ಟ್ರೈಕ್ ರೇಟ್‌ನಲ್ಲಿ ಬರೋಬ್ಬರಿ 501 ರನ್ ಚಚ್ಚಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ತಂಡ ಒತ್ತಡದಲ್ಲಿದ್ದಾಗಲೆಲ್ಲಾ ಜವಾಬ್ದಾರಿಯುತ ಹಾಗೂ ಸ್ಫೋಟಕ ಇನ್ನಿಂಗ್ಸ್ ಆಡುವ ಮೂಲಕ ಆರ್‌ಸಿಬಿ ಪ್ರಶಸ್ತಿ ಉಳಿಸಿಕೊಳ್ಳುವಲ್ಲಿ ಅವರು ಪ್ರಮುಖ ಕಪ್ತಾನನಾಗಿ ಹೊರಹೊಮ್ಮಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇರಳಕ್ಕೆ ನೈಋತ್ಯ ಮಾನ್ಸೂನ್ ಆಗಮನ: ಕರ್ನಾಟಕದಲ್ಲಿ ಮುಂದಿನ 6 ದಿನ ಭಾರಿ ಮಳೆ ಸಾಧ್ಯತೆ- IMD

ಪಿಚ್ಚರ್ ಅಭಿ ಬಾಕಿ ಹೈ, ಇದು ಟ್ರೈಲರ್ ಅಷ್ಟೇ: KPCC ಅಧ್ಯಕ್ಷ ಹರಿಪ್ರಸಾದ್ ಎಚ್ಚರಿಕೆ ಕೊಟ್ಟಿದ್ಯಾರಿಗೆ?

ಖಾತೆಗಾಗಿ ಫೈಟ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ರಾಮಲಿಂಗಾ ರೆಡ್ಡಿ ಮುಂದು!

Vijay ಬೆಂಬಲಿಸಿದ್ದು ಕಾಂಗ್ರೆಸ್‌ಗೆ ದುಬಾರಿಯಾಗಿ ಪರಿಣಮಿಸಿತು; INDIA ಮೈತ್ರಿಕೂಟ ಸಭೆಯಿಂದ ಹಿಂದೆ ಸರಿದ DMK

32ನೇ ವಯಸ್ಸಿಗೇ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ RCB ಆಟಗಾರ KS Bharat

SCROLL FOR NEXT