ವೈಭವ್ ಸೂರ್ಯವಂಶಿ  
ಕ್ರಿಕೆಟ್

ಐರ್ಲೆಂಡ್, ಇಂಗ್ಲೆಂಡ್ T20 ಸರಣಿ: ವೈಭವ್ ಸೂರ್ಯವಂಶಿ ಬಗ್ಗೆ BCCI ವಿಶೇಷ ನಿರ್ಧಾರ! ಏನಿದು?

ಕುಟುಂಬದವರು ಜೊತೆಯಲ್ಲಿರುವುದರಿಂದ ಅಂತಾರಾಷ್ಟ್ರೀಯ ಕ್ರಿಕೆಟಿಗೆ ಹೊಂದಿಕೊಳ್ಳಲು ವೈಭವ್ ಸೂರ್ಯವಂಶಿಗೆ ನೆರವಾಗುತ್ತದೆ ಎಂದು ಬಿಸಿಸಿಐ ಭಾವಿಸಿದೆ ಎಂದು ವರದಿ ಹೇಳಿದೆ.

ನವದೆಹಲಿ: ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸದ ಸಮಯದಲ್ಲಿ ವೈಭವ್ ಸೂರ್ಯವಂಶಿ ಅವರ ಪೋಷಕರು 15 ವರ್ಷದ ಬಾಲಕನೊಂದಿಗೆ ಪ್ರಯಾಣಿಸಲು ಬಿಸಿಸಿಐ ಅನುಮತಿ ನೀಡಿದೆ ಎಂದು ಸ್ಪೋರ್ಟ್‌ಸ್ಟಾರ್ ವರದಿ ಮಾಡಿದೆ.

ಐಪಿಎಲ್ 2026 ರಲ್ಲಿ 776 ರನ್‌ಗಳೊಂದಿಗೆ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಹೊರಹೊಮ್ಮಿದ ನಂತರ ಸೂರ್ಯವಂಶಿ ಮೊದಲ ಬಾರಿಗೆ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕುಟುಂಬದವರು ಜೊತೆಯಲ್ಲಿರುವುದರಿಂದ ಅಂತಾರಾಷ್ಟ್ರೀಯ ಕ್ರಿಕೆಟಿಗೆ ಹೊಂದಿಕೊಳ್ಳಲು ವೈಭವ್ ಸೂರ್ಯವಂಶಿಗೆ ನೆರವಾಗುತ್ತದೆ ಎಂದು ಬಿಸಿಸಿಐ ಭಾವಿಸಿದೆ ಎಂದು ವರದಿ ಹೇಳಿದೆ.

ಇನ್ನೂ 15 ವರ್ಷದ ಬಾಲಕನಾಗಿರುವುದರಿಂದ ಆತನ ಪೋಷಕರನ್ನು ಐರ್ಲೆಂಡ್ ಮತ್ತು ಇಂಗ್ಲೆಂಡ್‌ಗೆ ಕಳುಹಿಸಲು ನಿರ್ಧರಿಸಿದ್ದೇವೆ. ಇದರಿಂದ ಆತ ಹೊಸ ವಾತಾವರಣಕ್ಕೆ ಹೊಂದುಕೊಳ್ಳಲು ನೆರವಾಗಬಹುದು. ಅವರ ಎಲ್ಲಾ ವೆಚ್ಚಗಳನ್ನು ಮಂಡಳಿಯೇ ಭರಿಸುತ್ತದೆ" ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಸ್ಪೋರ್ಟ್‌ಸ್ಟಾರ್‌ಗೆ ತಿಳಿಸಿದ್ದಾರೆ.

ಮುಂಬರುವ ತ್ರಿಕೋನ ಸರಣಿಗಾಗಿ ವೈಭವ್ ಸೂರ್ಯ ವಂಶಿ ಪ್ರಸ್ತುತ ಭಾರತ ಎ ತಂಡದೊಂದಿಗೆ ಶ್ರೀಲಂಕಾದಲ್ಲಿದ್ದಾರೆ.

ಇದಕ್ಕೂ ಮುನ್ನಾ ಮಾತನಾಡಿದ ಬಿಸಿಸಿಐ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್, ವೈಭವ್ ಸೂರ್ಯವಂಶಿ ಮೇಲೆ ಹೆಚ್ಚಿನ ಭರವಸೆ ಇದೆ. ಐಪಿಎಲ್ 2026 ರ ಸ್ಫೋಟಕ ಪ್ರದರ್ಶನದೊಂದಿಗೆ ತಂಡಕ್ಕೆ 'ತನ್ನನ್ನು ತಾನು ಆಯ್ಕೆ ಮಾಡಿಕೊಂಡಿದ್ದೇನೆ' ಎಂದು ಹೇಳಿದರು.

ಸೂರ್ಯವಂಶಿ ರಾಜಸ್ಥಾನ ರಾಯಲ್ಸ್ ಪರ ಐಪಿಎಲ್ 2026 ರಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಶತಕ ಮತ್ತು ಐದು ಅರ್ಧಶತಕಗಳು ಸೇರಿದಂತೆ 776 ರನ್‌ಗಳೊಂದಿಗೆ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಖ್ಯಾತಿಗೆ ಪಾತ್ರರಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಚಿವ ಸಂಪುಟ ವಿಸ್ತರಣೆ: CM ಡಿ.ಕೆ. ಶಿವಕುಮಾರ್-ಕಾಂಗ್ರೆಸ್ ನಾಯಕರು ನಾಳೆ ಸಂಜೆ ದೆಹಲಿಗೆ; ಹೈಕಮಾಂಡ್ ಮಹತ್ವದ ಮಾತುಕತೆ

ಯಾರ ಒತ್ತಡಕ್ಕೂ ಮಣಿದು ಬರ ಘೋಷಿಸುವುದಿಲ್ಲ, ಮಾತುಕತೆಯಲ್ಲೇ ಮೇಕದಾಟು ವಿವಾದಕ್ಕೆ ಪರಿಹಾರ ಹುಡುಕುತ್ತೇನೆ: ಸಿಎಂ ಡಿಕೆ.ಶಿವಕುಮಾರ್

ಅಸಮರ್ಥ-ಭ್ರಷ್ಟ ಸರ್ಕಾರ ಕಿತ್ತೊಗೆಯುವವರೆಗೆ ವಿರಮಿಸದಿರಿ, ಹೋರಾಟ ಮುಂದುವರೆಸಿ: ವಿದ್ಯಾರ್ಥಿ-ಯುವಜನರಿಗೆ ಸಿದ್ದರಾಮಯ್ಯ ಕರೆ

ಕಾಂಗ್ರೆಸ್ ರಾಜಕೀಯ ಆಟಕ್ಕೆ ಬ್ರೇಕ್ ಹಾಕಲು ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿಜಯೇಂದ್ರ

ಅಗ್ನಿಶಾಮಕ, ತುರ್ತು ಸೇವೆಗಳ ಆಧುನೀಕರಣಕ್ಕೆ ಸಮಗ್ರ ಯೋಜನೆ ರೂಪಿಸಿ: ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಸೂಚನೆ