ಭಾರತ-ಅಫ್ಘಾನಿಸ್ತಾನ ಮೊದಲ ಟೆಸ್ಟ್ ಪಂದ್ಯ 
ಕ್ರಿಕೆಟ್

India vs Afghanistan: KL Rahul, ನಾಯಕ ಶುಭ್ ಮನ್ ಗಿಲ್ ಭರ್ಜರಿ ಶತಕ; ಬೃಹತ್ ಮೊತ್ತದತ್ತ ಭಾರತ, ದಿನದಾಟ ಅಂತ್ಯಕ್ಕೆ 368/3

ನ್ಯೂಚಂಡೀಗಢದ ಮುಲ್ಲನ್ ಪುರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭ್ ಮನ್ ಗಿಲ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

ಚಂಡೀಗಢ: ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ ತಂಡ ಬೃಹತ್ ಮೊತ್ತದತ್ತ ದಾಪುಗಾಲಿರಿಸಿದ್ದು, ಮೊದಲ ದಿನದಾಟದ ಅಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 368 ರನ್ ಪೇರಿಸಿದೆ.

ನ್ಯೂಚಂಡೀಗಢದ ಮುಲ್ಲನ್ ಪುರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭ್ ಮನ್ ಗಿಲ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

ಅದರಂತೆ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಜೋಡಿ ಭಾರತಕ್ಕೆ ಉತ್ತಮ ಆರಂಭ ನೀಡಿತು. ಮೊದಲ ವಿಕೆಟ್ ಗೆ ಈ ಜೋಡಿ 41 ರನ್ ಗಳ ಜೊತೆಯಾಟವಾಡಿತು. ಈ ಹಂತದಲ್ಲಿ 24 ರನ್ ಗಳಿಸಿದ್ದ ಜೈಸ್ವಾಲ್ ಸಲೀಂ ಸಫಿ ಬೌಲಿಂಗ್ ನಲ್ಲಿ ಔಟಾದರು.

ಬಳಿಕ ರಾಹುಲ್ ಜೊತೆಗೂಡಿದ ಸಾಯಿ ಸುದರ್ಶನ್ ಭರ್ಜರಿ ಜೊತೆಯಾಟವಾಡಿದರು. ಕೆಎಲ್ ರಾಹುಲ್ ಮತ್ತು ಸಾಯಿ ಸುದರ್ಶನ್ ಜೋಡಿ 2ನೇ ವಿಕೆಟ್ ಗೆ ಬರೊಬ್ಬರಿ 139 ರನ್ ಗಳ ಜೊತೆಯಾಟವಾಡಿತು. ಈ ಪೈಕಿ ಕೆಎಲ್ ರಾಹುಲ್ ಶತಕ ಸಿಡಿಸಿ ಔಟಾದರೆ, ಸಾಯಿ ಸುದರ್ಶನ್ ಕೂಡ 81 ರನ್ ಗಳಿಸಿ ಶತಕದಂಚಿನಲ್ಲಿ ವಿಕೆಟ್ ಕೈ ಚೆಲ್ಲಿದರು.

ಬಳಿಕ ಕ್ರೀಸ್ ಗೆ ಬಂದ ನಾಯಕ ಶುಭ್ ಮನ್ ಗಿಲ್ ರಿಷಬ್ ಪಂತ್ ಜೊತೆಗೂ ಉತ್ತಮ ಬ್ಯಾಟಿಂಗ್ ನಡೆಸಿದರು. ಈ ಹಂತದಲ್ಲಿ ಗಿಲ್ ಅಜೇಯ 103 ರನ್ ಗಳಿಸಿದರೆ, ಉತ್ತಮ ಸಾಥ್ ನೀಡಿದ ಪಂತ್ ಅಜೇಯ 50 ರನ್ ಗಳಿಸಿ 2ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಆ ಮೂಲಕ ಭಾರತ ಮೊದಲ ದಿನದಾಟದ ಅಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 368 ರನ್ ಪೇರಿಸಿದೆ.

ಇನ್ನು ಅಪ್ಘಾನಿಸ್ತಾನ ಪರ ಮಹಮದ್ ಸಲೀಂ ಸಫಿ 2 ವಿಕೆಟ್ ಪಡೆದರೆ, ರೆಹಮಾನ್ ಶರಿಫಿ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಚಿವ ಸಂಪುಟ ವಿಸ್ತರಣೆ: CM ಡಿ.ಕೆ. ಶಿವಕುಮಾರ್-ಕಾಂಗ್ರೆಸ್ ನಾಯಕರು ನಾಳೆ ಸಂಜೆ ದೆಹಲಿಗೆ; ಹೈಕಮಾಂಡ್ ಮಹತ್ವದ ಮಾತುಕತೆ

ಯಾರ ಒತ್ತಡಕ್ಕೂ ಮಣಿದು ಬರ ಘೋಷಿಸಲ್ಲ, ಮಾತುಕತೆಯಲ್ಲೇ ಮೇಕದಾಟು ವಿವಾದಕ್ಕೆ ಪರಿಹಾರ: ಸಿಎಂ ಡಿಕೆ.ಶಿವಕುಮಾರ್

ಅಸಮರ್ಥ-ಭ್ರಷ್ಟ ಸರ್ಕಾರ ಕಿತ್ತೊಗೆಯುವವರೆಗೆ ವಿರಮಿಸದಿರಿ, ಹೋರಾಟ ಮುಂದುವರೆಸಿ: ವಿದ್ಯಾರ್ಥಿ-ಯುವಜನರಿಗೆ ಸಿದ್ದರಾಮಯ್ಯ ಕರೆ

ಕಾಂಗ್ರೆಸ್ ರಾಜಕೀಯ ಆಟಕ್ಕೆ ಬ್ರೇಕ್ ಹಾಕಲು ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿಜಯೇಂದ್ರ

ಅಗ್ನಿಶಾಮಕ, ತುರ್ತು ಸೇವೆಗಳ ಆಧುನೀಕರಣಕ್ಕೆ ಸಮಗ್ರ ಯೋಜನೆ ರೂಪಿಸಿ: ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಸೂಚನೆ