ಭಾರತ-ಅಫ್ಘಾನಿಸ್ತಾನ ಮೊದಲ ಟೆಸ್ಟ್ ಪಂದ್ಯ 
ಕ್ರಿಕೆಟ್

India vs Afghanistan: KL Rahul, ನಾಯಕ ಶುಭ್ ಮನ್ ಗಿಲ್ ಭರ್ಜರಿ ಶತಕ; ಬೃಹತ್ ಮೊತ್ತದತ್ತ ಭಾರತ, ದಿನದಾಟ ಅಂತ್ಯಕ್ಕೆ 368/3

ನ್ಯೂಚಂಡೀಗಢದ ಮುಲ್ಲನ್ ಪುರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭ್ ಮನ್ ಗಿಲ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

ಚಂಡೀಗಢ: ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ ತಂಡ ಬೃಹತ್ ಮೊತ್ತದತ್ತ ದಾಪುಗಾಲಿರಿಸಿದ್ದು, ಮೊದಲ ದಿನದಾಟದ ಅಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 368 ರನ್ ಪೇರಿಸಿದೆ.

ನ್ಯೂಚಂಡೀಗಢದ ಮುಲ್ಲನ್ ಪುರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭ್ ಮನ್ ಗಿಲ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

ಅದರಂತೆ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಜೋಡಿ ಭಾರತಕ್ಕೆ ಉತ್ತಮ ಆರಂಭ ನೀಡಿತು. ಮೊದಲ ವಿಕೆಟ್ ಗೆ ಈ ಜೋಡಿ 41 ರನ್ ಗಳ ಜೊತೆಯಾಟವಾಡಿತು. ಈ ಹಂತದಲ್ಲಿ 24 ರನ್ ಗಳಿಸಿದ್ದ ಜೈಸ್ವಾಲ್ ಸಲೀಂ ಸಫಿ ಬೌಲಿಂಗ್ ನಲ್ಲಿ ಔಟಾದರು.

ಬಳಿಕ ರಾಹುಲ್ ಜೊತೆಗೂಡಿದ ಸಾಯಿ ಸುದರ್ಶನ್ ಭರ್ಜರಿ ಜೊತೆಯಾಟವಾಡಿದರು. ಕೆಎಲ್ ರಾಹುಲ್ ಮತ್ತು ಸಾಯಿ ಸುದರ್ಶನ್ ಜೋಡಿ 2ನೇ ವಿಕೆಟ್ ಗೆ ಬರೊಬ್ಬರಿ 139 ರನ್ ಗಳ ಜೊತೆಯಾಟವಾಡಿತು. ಈ ಪೈಕಿ ಕೆಎಲ್ ರಾಹುಲ್ ಶತಕ ಸಿಡಿಸಿ ಔಟಾದರೆ, ಸಾಯಿ ಸುದರ್ಶನ್ ಕೂಡ 81 ರನ್ ಗಳಿಸಿ ಶತಕದಂಚಿನಲ್ಲಿ ವಿಕೆಟ್ ಕೈ ಚೆಲ್ಲಿದರು.

ಬಳಿಕ ಕ್ರೀಸ್ ಗೆ ಬಂದ ನಾಯಕ ಶುಭ್ ಮನ್ ಗಿಲ್ ರಿಷಬ್ ಪಂತ್ ಜೊತೆಗೂ ಉತ್ತಮ ಬ್ಯಾಟಿಂಗ್ ನಡೆಸಿದರು. ಈ ಹಂತದಲ್ಲಿ ಗಿಲ್ ಅಜೇಯ 103 ರನ್ ಗಳಿಸಿದರೆ, ಉತ್ತಮ ಸಾಥ್ ನೀಡಿದ ಪಂತ್ ಅಜೇಯ 50 ರನ್ ಗಳಿಸಿ 2ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಆ ಮೂಲಕ ಭಾರತ ಮೊದಲ ದಿನದಾಟದ ಅಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 368 ರನ್ ಪೇರಿಸಿದೆ.

ಇನ್ನು ಅಪ್ಘಾನಿಸ್ತಾನ ಪರ ಮಹಮದ್ ಸಲೀಂ ಸಫಿ 2 ವಿಕೆಟ್ ಪಡೆದರೆ, ರೆಹಮಾನ್ ಶರಿಫಿ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಸಚಿವ ಸಂಪುಟ ಭಿನ್ನಮತ ಶಮನ: ರಾಜೀನಾಮೆ ವಾಪಸ್ ಪಡೆದ ರಾಮಲಿಂಗಾ ರೆಡ್ಡಿ!

Karnataka CET Result 2026 Announced: ಬೆಂಗಳೂರಿನ ಆರ್ ವಿ ಕಾಲೇಜಿನ ತನಿಷಾ ಕಾರ್ತಿಕ್ ಮೊದಲ ಸ್ಥಾನ, 2,92,782 ಅಭ್ಯರ್ಥಿಗಳು ಪ್ರವೇಶಕ್ಕೆ ಅರ್ಹತೆ!

ಬಕ್ರೀದ್ ಕುರ್ಬಾನಿ ವಿಚಾರದಲ್ಲಿ ಗಲಾಟೆ ಕೇಸ್: BJP ಶಾಸಕ ಶರಣು ಸಲಗರ್‌ಗೆ ಬಂಧನ ಭೀತಿ!

'ನಮ್ಮ ಪೋಸ್ಟ್‌ಗಳನ್ನು ಡಿಲೀಟ್ ಮಾಡಬಹುದು, ಆದರೆ ನಮ್ಮನ್ನು ಅಳಿಸಲು ಸಾಧ್ಯವಿಲ್ಲ': Cockroach Janta Party ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕೇರಳದಲ್ಲಿ ಮುಂಗಾರು ಅಬ್ಬರ: ರಾತ್ರಿಯಿಡೀ ಭಾರಿ ಮಳೆ; ರಸ್ತೆಗಳು ಜಲಾವೃತ, ಧರೆಗುರುಳಿದ ಮರಗಳು, ಒಂದು ಸಾವು; 5 ಜಿಲ್ಲೆಗಳಿಗೆ ರೆಡ್ ಅಲರ್ಟ್

SCROLL FOR NEXT