ಮಾನವ್ ಸುತಾರ್ Photo | IANS
ಕ್ರಿಕೆಟ್

ಚೊಚ್ಚಲ ಪಂದ್ಯದಲ್ಲೇ ಐದು ವಿಕೆಟ್ ಪಡೆದು ಮಿಂಚಿದ ಮಾನವ್ ಸುತಾರ್; ಫೈಫರ್ ಪಡೆದ 10ನೇ ಭಾರತೀಯ ಆಟಗಾರ

ಮಾನವ್ ಸುತಾರ್ 22 ಓವರ್‌ಗಳಲ್ಲಿ 10 ಮೇಡಿನ್‌ಗಳು ಸೇರಿದಂತೆ 6 ವಿಕೆಟ್‌ಗಳನ್ನು ಕಬಳಿಸಿ 33 ರನ್‌ಗಳನ್ನು ಬಿಟ್ಟುಕೊಟ್ಟಿದ್ದಾರೆ. ಈ ಮೂಲಕ ಚೊಚ್ಚಲ ಪಂದ್ಯದಲ್ಲೇ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ.

ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಐದು ವಿಕೆಟ್ ಪಡೆದ 10ನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಮಾನವ್ ಸುತಾರ್ ಇತಿಹಾಸದ ಪುಸ್ತಕಗಳಲ್ಲಿ ತಮ್ಮ ಹೆಸರನ್ನು ಬರೆದಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿ ವಿಕೆಟ್‌ಗಳನ್ನು ಗಳಿಸಿದ ನಂತರ, ಸ್ಪಿನ್ ಆಲ್‌ರೌಂಡರ್ ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್‌ಗೆ ಭಾರತ ತಂಡಕ್ಕೆ ಆಯ್ಕೆಯಾದರು. ಈಗ, ಅಫ್ಘಾನಿಸ್ತಾನವನ್ನು ಕಟ್ಟಿಹಾಕುವ ಮೂಲಕ ಚೊಚ್ಚಲ ಪಂದ್ಯದಲ್ಲೇ ಐದು ವಿಕೆಟ್ ಗೊಂಚಲು ಪಡೆಯುವ ಮೂಲಕ ಆಯ್ಕೆದಾರರ ನಂಬಿಕೆಯನ್ನು ಉಳಿಸಿಕೊಂಡಿದ್ದಾರೆ.

ಮಾನವ್ ಸುತಾರ್ 22 ಓವರ್‌ಗಳಲ್ಲಿ 10 ಮೇಡಿನ್‌ಗಳು ಸೇರಿದಂತೆ 6 ವಿಕೆಟ್‌ಗಳನ್ನು ಕಬಳಿಸಿ 33 ರನ್‌ಗಳನ್ನು ಬಿಟ್ಟುಕೊಟ್ಟಿದ್ದಾರೆ. ಈ ಮೂಲಕ ಚೊಚ್ಚಲ ಪಂದ್ಯದಲ್ಲೇ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಆರಂಭಿಕ ಅಬ್ದುಲ್ ಮಲಿಕ್ (16) ಅವರನ್ನು ಮೊದಲಿಗೆ ಔಟ್ ಮಾಡಿದರು. ಅಲ್ಲಿಂದೀಚೆಗೆ, ಅವರು ಅದ್ಭುತವಾಗಿ ಡಾಟ್ ಬಾಲ್ ಕಾಯ್ದುಕೊಳ್ಳುವ ಮೂಲಕ ಅಫ್ಘಾನಿಸ್ತಾನದ ಬ್ಯಾಟಿಂಗ್ ಲೈನ್‌ಅಪ್ ಅನ್ನು ತೊಂದರೆಗೆ ಸಿಲುಕಿಸಿದರು. ರಹಮಾನುಲ್ಲಾ ಗುರ್ಬಾಜ್ (12), ರಹಮತ್ ಶಾ (60), ಅಫ್ಸರ್ ಜಜೈ (3), ಶರಾಫುದ್ದೀನ್ ಅಶ್ರಫ್ (11) ಮತ್ತು ಸಲೀಮ್ ಸೈಫಿ (0) ಅವರ ವಿಕೆಟ್ ಪಡೆದು ಮಿಂಚಿದರು. ಅಫ್ಘಾನಿಸ್ತಾನವನ್ನು ಕೇವಲ 152 ರನ್‌ಗಳಿಗೆ ಆಲೌಟ್ ಮಾಡಲಾಯಿತು. ನಂತರ ಶುಭಮನ್ ಗಿಲ್ ನೇತೃತ್ವದ ಭಾರತ ಫಾಲೋ-ಆನ್ ಹೇರಿಕೆ ಮಾಡಿತು.

ಕಳೆದ 35 ವರ್ಷಗಳಲ್ಲಿ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಆರು ವಿಕೆಟ್ ಪಡೆದ ಎರಡನೇ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಸುತಾರ್ ಪಾತ್ರರಾಗಿದ್ದಾರೆ. ಈ ಅದ್ಭುತ ಸ್ಪೆಲ್ 21ನೇ ಶತಮಾನದಲ್ಲಿ ಭಾರತೀಯ ಆಟಗಾರನೊಬ್ಬ ಚೊಚ್ಚಲ ಪಂದ್ಯದಲ್ಲಿ ನೀಡಿದ ಅತ್ಯುತ್ತಮ ಬೌಲಿಂಗ್ ಪ್ರದರ್ಶನವಾಗಿದೆ. 2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ತಮ್ಮ ಮೊದಲ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ 47 ರನ್ ಬಿಟ್ಟುಕೊಟ್ಟು ಆರು ವಿಕೆಟ್ ಪಡೆದಿದ್ದರು.

ಬೌಲಿಂಗ್‌ಗೂ ಮುನ್ನ ಸುತಾರ್ ಬ್ಯಾಟಿಂಗ್ ಮಾಡುವ ಅವಕಾಶವನ್ನು ಪಡೆದರು. ಅವರು 4 ಬೌಂಡರಿಗಳೊಂದಿಗೆ 28 ​​ರನ್ ಗಳಿಸಿ ಆಕರ್ಷಕ ಪ್ರದರ್ಶನ ನೀಡಿದರು.

ಸುತಾರ್ 29 ಪ್ರಥಮ ದರ್ಜೆ ಪಂದ್ಯಗಳಲ್ಲಿ 129 ವಿಕೆಟ್‌ಗಳು ಮತ್ತು 945 ರನ್‌ಗಳನ್ನು ಗಳಿಸಿದ್ದಾರೆ. ಆದರೆ, ಹರ್ಷ್ ದುಬೆ 27 ಪ್ರಥಮ ದರ್ಜೆ ಪಂದ್ಯಗಳಿಂದ 133 ವಿಕೆಟ್‌ಗಳು ಮತ್ತು 1026 ರನ್‌ಗಳನ್ನು ಗಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೋದಿ ಸರ್ಕಾರದ ವಿರುದ್ಧ ಮಹಾಸಮರಕ್ಕೆ INDIA ಮೈತ್ರಿಕೂಟ ಸಜ್ಜು: ಭಿನ್ನಾಭಿಪ್ರಾಯಗಳ ನಡುವೆಯೂ ಬಲ ತುಂಬುವ ಯತ್ನ, ‘ಒಗ್ಗಟ್ಟೇ ನಮ್ಮ ಶಕ್ತಿ’ ಎಂದ ಮಲ್ಲಿಕಾರ್ಜುನ ಖರ್ಗೆ..!

ಪರಮೇಶ್ವರಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕಿತ್ತಾ?: 3 ಬಾರಿ ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ಕಣ್ಣೀರಿಟ್ಟ DCM!

ಆರ್. ಮಾಧವನ್‌ ಹಿರಿಮೆಗೆ ಮತ್ತೊಂದು ಗರಿ: ಬಹುಮುಖ ಪ್ರತಿಭೆ ನಟ, ಚಿತ್ರಕಥೆಗಾರ, ನಿರ್ದೇಶಕನಿಗೆ Padma Shri ಪ್ರಶಸ್ತಿ

India vs Afghanistan: 2 ಎಸೆತದಲ್ಲಿ 3 ವಿಕೆಟ್, 36 ಓವರ್ ನಲ್ಲೇ ಆಪ್ಘನ್ ಹೆಡೆಮುರಿ ಕಟ್ಟಿದ ಭಾರತ, Gill ಪಡೆಗೆ ಇನ್ನಿಂಗ್ಸ್ ಜಯ

ರಾಜ್ಯಸಭೆಗೆ ಸಾಮಾನ್ಯ ಕಾರ್ಯಕರ್ತನನ್ನು BJP ಅಭ್ಯರ್ಥಿ ಮಾಡಿದೆ, ದೇವೇಗೌಡರ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ: BY Vijayendra

SCROLL FOR NEXT