ಮಾನವ್ ಸುತಾರ್ Photo | IANS
ಕ್ರಿಕೆಟ್

ಚೊಚ್ಚಲ ಪಂದ್ಯದಲ್ಲೇ ಐದು ವಿಕೆಟ್ ಪಡೆದು ಮಿಂಚಿದ ಮಾನವ್ ಸುತಾರ್; ಫೈಫರ್ ಪಡೆದ 10ನೇ ಭಾರತೀಯ ಆಟಗಾರ

ಮಾನವ್ ಸುತಾರ್ 22 ಓವರ್‌ಗಳಲ್ಲಿ 10 ಮೇಡಿನ್‌ಗಳು ಸೇರಿದಂತೆ 6 ವಿಕೆಟ್‌ಗಳನ್ನು ಕಬಳಿಸಿ 33 ರನ್‌ಗಳನ್ನು ಬಿಟ್ಟುಕೊಟ್ಟಿದ್ದಾರೆ. ಈ ಮೂಲಕ ಚೊಚ್ಚಲ ಪಂದ್ಯದಲ್ಲೇ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ.

ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಐದು ವಿಕೆಟ್ ಪಡೆದ 10ನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಮಾನವ್ ಸುತಾರ್ ಇತಿಹಾಸದ ಪುಸ್ತಕಗಳಲ್ಲಿ ತಮ್ಮ ಹೆಸರನ್ನು ಬರೆದಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿ ವಿಕೆಟ್‌ಗಳನ್ನು ಗಳಿಸಿದ ನಂತರ, ಸ್ಪಿನ್ ಆಲ್‌ರೌಂಡರ್ ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್‌ಗೆ ಭಾರತ ತಂಡಕ್ಕೆ ಆಯ್ಕೆಯಾದರು. ಈಗ, ಅಫ್ಘಾನಿಸ್ತಾನವನ್ನು ಕಟ್ಟಿಹಾಕುವ ಮೂಲಕ ಚೊಚ್ಚಲ ಪಂದ್ಯದಲ್ಲೇ ಐದು ವಿಕೆಟ್ ಗೊಂಚಲು ಪಡೆಯುವ ಮೂಲಕ ಆಯ್ಕೆದಾರರ ನಂಬಿಕೆಯನ್ನು ಉಳಿಸಿಕೊಂಡಿದ್ದಾರೆ.

ಮಾನವ್ ಸುತಾರ್ 22 ಓವರ್‌ಗಳಲ್ಲಿ 10 ಮೇಡಿನ್‌ಗಳು ಸೇರಿದಂತೆ 6 ವಿಕೆಟ್‌ಗಳನ್ನು ಕಬಳಿಸಿ 33 ರನ್‌ಗಳನ್ನು ಬಿಟ್ಟುಕೊಟ್ಟಿದ್ದಾರೆ. ಈ ಮೂಲಕ ಚೊಚ್ಚಲ ಪಂದ್ಯದಲ್ಲೇ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಆರಂಭಿಕ ಅಬ್ದುಲ್ ಮಲಿಕ್ (16) ಅವರನ್ನು ಮೊದಲಿಗೆ ಔಟ್ ಮಾಡಿದರು. ಅಲ್ಲಿಂದೀಚೆಗೆ, ಅವರು ಅದ್ಭುತವಾಗಿ ಡಾಟ್ ಬಾಲ್ ಕಾಯ್ದುಕೊಳ್ಳುವ ಮೂಲಕ ಅಫ್ಘಾನಿಸ್ತಾನದ ಬ್ಯಾಟಿಂಗ್ ಲೈನ್‌ಅಪ್ ಅನ್ನು ತೊಂದರೆಗೆ ಸಿಲುಕಿಸಿದರು. ರಹಮಾನುಲ್ಲಾ ಗುರ್ಬಾಜ್ (12), ರಹಮತ್ ಶಾ (60), ಅಫ್ಸರ್ ಜಜೈ (3), ಶರಾಫುದ್ದೀನ್ ಅಶ್ರಫ್ (11) ಮತ್ತು ಸಲೀಮ್ ಸೈಫಿ (0) ಅವರ ವಿಕೆಟ್ ಪಡೆದು ಮಿಂಚಿದರು. ಅಫ್ಘಾನಿಸ್ತಾನವನ್ನು ಕೇವಲ 152 ರನ್‌ಗಳಿಗೆ ಆಲೌಟ್ ಮಾಡಲಾಯಿತು. ನಂತರ ಶುಭಮನ್ ಗಿಲ್ ನೇತೃತ್ವದ ಭಾರತ ಫಾಲೋ-ಆನ್ ಹೇರಿಕೆ ಮಾಡಿತು.

ಕಳೆದ 35 ವರ್ಷಗಳಲ್ಲಿ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಆರು ವಿಕೆಟ್ ಪಡೆದ ಎರಡನೇ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಸುತಾರ್ ಪಾತ್ರರಾಗಿದ್ದಾರೆ. ಈ ಅದ್ಭುತ ಸ್ಪೆಲ್ 21ನೇ ಶತಮಾನದಲ್ಲಿ ಭಾರತೀಯ ಆಟಗಾರನೊಬ್ಬ ಚೊಚ್ಚಲ ಪಂದ್ಯದಲ್ಲಿ ನೀಡಿದ ಅತ್ಯುತ್ತಮ ಬೌಲಿಂಗ್ ಪ್ರದರ್ಶನವಾಗಿದೆ. 2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ತಮ್ಮ ಮೊದಲ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ 47 ರನ್ ಬಿಟ್ಟುಕೊಟ್ಟು ಆರು ವಿಕೆಟ್ ಪಡೆದಿದ್ದರು.

ಬೌಲಿಂಗ್‌ಗೂ ಮುನ್ನ ಸುತಾರ್ ಬ್ಯಾಟಿಂಗ್ ಮಾಡುವ ಅವಕಾಶವನ್ನು ಪಡೆದರು. ಅವರು 4 ಬೌಂಡರಿಗಳೊಂದಿಗೆ 28 ​​ರನ್ ಗಳಿಸಿ ಆಕರ್ಷಕ ಪ್ರದರ್ಶನ ನೀಡಿದರು.

ಸುತಾರ್ 29 ಪ್ರಥಮ ದರ್ಜೆ ಪಂದ್ಯಗಳಲ್ಲಿ 129 ವಿಕೆಟ್‌ಗಳು ಮತ್ತು 945 ರನ್‌ಗಳನ್ನು ಗಳಿಸಿದ್ದಾರೆ. ಆದರೆ, ಹರ್ಷ್ ದುಬೆ 27 ಪ್ರಥಮ ದರ್ಜೆ ಪಂದ್ಯಗಳಿಂದ 133 ವಿಕೆಟ್‌ಗಳು ಮತ್ತು 1026 ರನ್‌ಗಳನ್ನು ಗಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವರಿಗೆ ED ಶಾಕ್‌; ಸತೀಶ್ ಜಾರಕಿಹೊಳಿ ಡಾಲರ್ಸ್ ಕಾಲೋನಿ ಮನೆ ಮೇಲೆ ದಾಳಿ !

Nepal floods: 4 ಅಂತಸ್ತಿನ ಕಟ್ಟಡದ ಮೇಲೆ ಪ್ರವಾಹದ ರುದ್ರನರ್ತನ, ಸಾವಿನ ಸಂಖ್ಯೆ 1,365ಕ್ಕೆ ಏರಿಕೆ, 5,326 ಮಂದಿ ಇನ್ನೂ ನಾಪತ್ತೆ, ಹೊಸ Video ವೈರಲ್!

ಭಾರತದಲ್ಲೆಲ್ಲೂ ಕಾಣದ ಒರಾಂಗುಟನ್‌ಗಳು ಒಡಿಶಾದ ಅರಣ್ಯದಲ್ಲಿ ಪತ್ತೆ; 5 ಮರಿಗಳ ರಕ್ಷಣೆ, ಕಳ್ಳಸಾಗಣೆ ಶಂಕೆ!

ಯಲ್ಲಾಪುರದಲ್ಲಿ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ: ಭಾರೀ ಪ್ರಮಾಣದ ವನ್ಯಜೀವಿ ವಸ್ತುಗಳ ವಶ, ಇಬ್ಬರ ಬಂಧನ! Video

ಸೌದಿ ಮೇಲೆ ಕ್ಷಿಪಣಿ ದಾಳಿ; Houthi ಉಗ್ರರ ವಿರುದ್ಧ ಸಿಡಿದೆದ್ದ ಭಾರತ, 'ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ' ಎಂದು ಗುಡುಗು