ಬಾಲಿವುಡ್ ನಟಿ ಮತ್ತು ಸಂಸತ್ ಸದಸ್ಯೆ ಕಂಗನಾ ರಣಾವತ್ ಅಭಿನಯದ ಬಹು ನಿರೀಕ್ಷಿತ 'ಭಾರತ ಭಾಗ್ಯ ವಿಧಾತ' ಜೂನ್ 12 ರಂದು ಬಿಡುಗಡೆಯಾಗಲಿದೆ.
ಈ ಹಿನ್ನೆಲೆಯಲ್ಲಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು, ಟಿ-20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ಆಯ್ಕೆಯಾದ 15 ವರ್ಷದ ಬಾಲಕ ವೈಭವ್ ಸೂರ್ಯವಂಶಿಯನ್ನು ಹೊಗಳಿದ್ದಾರೆ.
ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಕಂಗನಾ ರಣಾವತ್, ವೈಭವ್ ಸೂರ್ಯವಂಶಿ ಮೇಲೆ ಯಾವುದೇ ಒತ್ತಡ ಇಲ್ಲ. ಆದರೆ ಸಚಿನ್ ತೆಂಡೂಲ್ಕರ್ ಅವರಂತೆಯೇ ಸಾಧನೆ ಮಾಡಬೇಕು ಎಂದು ಬಯಸುತ್ತೇವೆ. ಭವಿಷ್ಯದಲ್ಲಿ ಭಾರತಕ್ಕಾಗಿ ವಿಶ್ವಕಪ್ ಗೆಲ್ಲಬೇಕೆಂದು ನಾವು ಬಯಸುತ್ತೇವೆ ಎಂದು ಹೇಳಿದರು.
ಜೂನ್ 26 ರಂದು ಆರಂಭವಾಗಲಿರುವ ಸರಣಿಗಾಗಿ ಇಡೀ ತಂಡ ಬೆಲ್ಫಾಸ್ಟ್ನಲ್ಲಿ ತಯಾರಿ ನಡೆಸುತ್ತಿರುವಾಗ ವೈಭವ್ ಸೂರ್ಯವಂಶಿಯನ್ನು ಸಚಿನ್ಗೆ ಹೋಲಿಕೆ ಮಾಡಿರುವುದು ಹೃದಯ ಸ್ಪರ್ಶಿಯಾಗಿದೆ. ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಕಿರಿಯ ಆಟಗಾರರಾಗಿರುವ ವೈಭವ ಸೂರ್ಯವಂಶಿ ಐರ್ಲೆಂಡ್ ಜೂನ್ 26 ರಂದು ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಲಿದ್ದಾರೆ.