ಪರಸ್ಪರ ಕೈಕೈ ಮಿಲಾಯಿಸಿದ ಭಾರತ-ಪಾಕ್ ಆಟಗಾರ್ತಿಯರು (ಎಐ ರಚಿತ ವಿಡಿಯೋ) 
ಕ್ರಿಕೆಟ್

Women's T20 World Cup 2026: ಪರಸ್ಪರ ಜುಟ್ಟು ಹಿಡಿದ ಭಾರತ-ಪಾಕ್ ಆಟಗಾರ್ತಿಯರು; 'ಜಗಳ' Video ವೈರಲ್; ಅಸಲಿಯತ್ತೇನು?

ಅತ್ತ ಪಂದ್ಯ ಮುಕ್ತಾಯವಾಗುತ್ತಲೇ ಇತ್ತ ಸಾಮಾಜಿಕ ಜಾಲತಾಣಗಳಲ್ಲಿ ಆಟಗಾರ್ತಿಯರು ಮೈದಾನದಲ್ಲೇ ಪರಸ್ಪರ ಜಟ್ಟು ಹಿಡಿದು ಕಿತ್ತಾಡಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ಬರ್ಮಿಂಗ್ ಹ್ಯಾಮ್: ಮಹಿಳಾ ಟಿ20 ವಿಶ್ವಕಪ್ 2026ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಪಾಕಿಸ್ತಾನ ಆಟಗಾರ್ತಿಯರು ಭಾರತೀಯ ಆಟಗಾರ್ತಿ ಮೇಲೆ ಹಲ್ಲೆ ಮಾಡಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಭಾನುವಾರ ಬರ್ಮಿಂಗ್ ಹ್ಯಾಮ್ ನ ಎಡ್ಜ್ ಬ್ಯಾಸ್ಟನ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನ ವಿರುದ್ಧ 64 ರನ್ ಗಳ ಭರ್ಜರಿ ಜಯ ಸಾಧಿಸಿತ್ತು.

ಅತ್ತ ಪಂದ್ಯ ಮುಕ್ತಾಯವಾಗುತ್ತಲೇ ಇತ್ತ ಸಾಮಾಜಿಕ ಜಾಲತಾಣಗಳಲ್ಲಿ ಆಟಗಾರ್ತಿಯರು ಮೈದಾನದಲ್ಲೇ ಪರಸ್ಪರ ಜಟ್ಟು ಹಿಡಿದು ಕಿತ್ತಾಡಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ವೈರಲ್ ವಿಡಿಯೋದಲ್ಲಿ ಪಾಕಿಸ್ತಾನದ ಆಟಗಾರ್ತಿಯೊಬ್ಬರು ಭಾರತೀಯ ಬ್ಯಾಟರ್ ಮೇಲೆ ಹಲ್ಲೆ ನಡೆಸುತ್ತಿರುವುದು ದಾಖಲಾಗಿದೆ. ಈ ವೇಳೆ ಅಂಪೈರ್ ಹಾಗೂ ಇತರ ಆಟಗಾರ್ತಿಯರು ಮಧ್ಯಪ್ರವೇಶಿಸಿ ಇಬ್ಬರನ್ನು ಬೇರ್ಪಡಿಸುತ್ತಿರುವ ದೃಶ್ಯ ಇದರಲ್ಲಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿದ್ದು, ಉಭಯ ದೇಶಗಳ ಕ್ರಿಕೆಟ್ ಅಭಿಮಾನಿಗಳಿಂದ ಭಾರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೆಲವರು ಈ ಘಟನೆ ನಿಜವಾಗಿಯೂ ನಡೆದಿದೆಯೇ ಎಂಬ ಪ್ರಶ್ನೆಯನ್ನೂ ಎತ್ತಿದ್ದಾರೆ.

ವೈರಲ್ ವಿಡಿಯೋ ಅಸಲೀಯತ್ತೇನು?

ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗುತ್ತಿದ್ದಂತೆಯೇ ಈ ವಿಡಿಯೋ ಸಂಪೂರ್ಣ ನಕಲಿ ಎಂದು ಸಾಬೀತಾಗಿದೆ. ಈ ವಿಡಿಯೋ ಅಸಲೀಯತ್ತು ಬಟಾಬಯಲಾಗಿದ್ದು, ಇದು ಎಐ ರಚಿತ ವಿಡಿಯೋ ಎಂದು ಸಾಬೀತಾಗಿದೆ.

ಮೂಲಗಳ ಪ್ರಕಾರ, ಈ ವಿಡಿಯೋವನ್ನು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ಸೃಷ್ಟಿಸಲಾಗಿದೆ. ಪಂದ್ಯದಲ್ಲಿ ಇಂತಹ ಯಾವುದೇ ಘಟನೆ ನಡೆದಿರುವ ಬಗ್ಗೆ ಯಾವುದೇ ಅಧಿಕೃತ ವರದಿ ಅಥವಾ ದಾಖಲೆಗಳಿಲ್ಲ. ಕೃತಕ ಬುದ್ಧಿಮತ್ತೆ (AI) ಯುಗದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕಾಣುವ ಪ್ರತಿಯೊಂದನ್ನೂ ನಂಬಲು ಸಾಧ್ಯವಿಲ್ಲ ಎಂಬುದಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ.

ಇನ್ನು ನಿನ್ನೆಯ ಪಂದ್ಯದ ಕುರಿತು ಹೇಳುವುದಾದರೆ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡ 64 ರನ್ ಗಳ ಅಮೋಘ ಜಯಭೇರಿ ಬಾರಿಸಿತು. ಭಾರತ ನೀಡಿದ್ದ 171 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಪಾಕಿಸ್ತಾನ ತಂಡ ಕೇವಲ 106 ರನ್ ಗಳಿಗೇ ಆಲೌಟ್ ಆಗುವ ಮೂಲಕ 64 ರನ್ ಗಳ ಹೀನಾಯ ಸೋಲು ಕಂಡಿತು. ಭಾರತದ ಪರ ದೀಪ್ತಿ ಶರ್ಮಾ 5 ವಿಕೆಟ್ ಪಡೆದು ಗೆಲುವಿನ ರೂವಾರಿಯಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ವಿವಾದ: 'ಕರ್ನಾಟಕ ಬಂದ್' ಬಗ್ಗೆ ಚರ್ಚಿಸಲು ನಾಳೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ ಸಭೆ!

ಉಭಯ ಸದನಗಳಲ್ಲಿ ಸಾರ್ವಜನಿಕ ಪರೀಕ್ಷೆ ಅಕ್ರಮ ತಡೆ ಕಾಯ್ದೆಗೆ ಅಂಗೀಕಾರ, ರಾಷ್ಟ್ರಪತಿ ಅನುಮೋದನೆಗಾಗಿ ರವಾನೆ

ರಾಮಾಯಣ ಟ್ರೈಲರ್: ಸೀತಾ ಮಾತೆ ಪಾತ್ರಕ್ಕೆ ಸಾಯಿ ಪಲ್ಲವಿ ಬೇಕಿತ್ತಾ? ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ!

ಪಾಕ್ ಸೇನೆ ಇಸ್ರೇಲ್ ಗಿಂತಲೂ ಕೆಟ್ಟದು: ಮುನೀರ್ ಒಬ್ಬ 'Zalim'; ಕ್ಯಾಮರಾ ಮುಂದೆ ಒಂದೇ ಸಮನೆ ಕಣ್ಣೀರಿಟ್ಟ PoK ವ್ಯಕ್ತಿ! ಮನಕಲಕುವ Video

ಪ್ರಧಾನಿ ಮೋದಿ ವಿಷ್ಣುವಿನ ಅವತಾರ; ಅವರ ಪಾದ ತೊಳೆದು ನೀರು ಕುಡಿಯುತ್ತೇನೆ: CJPಗರು ನಿಷ್ಪ್ರಯೋಜಕರು: ಬಾರ್ಡರ್ ನಟ ಸುದೇಶ್ ಬೆರ್ರಿ