ರಿಷಬ್ ಪಂತ್‌ - ಕುಲದೀಪ್ ಯಾದವ್ 
ಕ್ರಿಕೆಟ್

IPL 2027: Delhi Capitalsಗೆ ಮರಳಿದ ರಿಷಬ್ ಪಂತ್‌ಗೆ ಭಾರೀ ಪೇ ಕಟ್; LSG ಪಾಲಾದ ಕುಲದೀಪ್ ಯಾದವ್

ಈ ಹಿಂದೆ ದಾಖಲೆಯ 27 ಕೋಟಿ ರೂ.ಗೆ ಖರೀದಿಸಲ್ಪಟ್ಟಿದ್ದ ರಿಷಭ್ ಪಂತ್ ಅವರು ಈಗ ತಮ್ಮ ಹಳೆಯ ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಲು ಭಾರೀ ವೇತನ ಕಡಿತ ಅನುಭವಿಸಿದ್ದಾರೆ.

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (IPL)ನ ಕಳೆದ ಎರಡು ಸೀಸನ್‌ಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್(LSG) ತಂಡವನ್ನು ಮುನ್ನಡೆಸಿದ್ದ ಸ್ಟಾರ್ ವಿಕೆಟ್ ಕೀಪರ್ ಮತ್ತು ಬ್ಯಾಟರ್ ರಿಷಬ್ ಪಂತ್ ಇದೀಗ ಟ್ರೇಡ್ ಡೀಲ್ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮರಳಿದ್ದಾರೆ.

ಈ ಹಿಂದೆ ದಾಖಲೆಯ 27 ಕೋಟಿ ರೂ.ಗೆ ಖರೀದಿಸಲ್ಪಟ್ಟಿದ್ದ ರಿಷಭ್ ಪಂತ್ ಅವರು ಈಗ ತಮ್ಮ ಹಳೆಯ ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಲು ಭಾರೀ ವೇತನ ಕಡಿತ ಅನುಭವಿಸಿದ್ದಾರೆ. ಈಗ 15 ಕೋಟಿ ರೂ.ಗಳ ಮೊತ್ತಕ್ಕೆ ಪಂತ್ ಅವರನ್ನು ಡೆಲ್ಲಿ ತಂಡ ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಕಳೆದ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)2026ನ ನಿರಾಶಾದಾಯಕ ಅಭಿಯಾನದ ನಂತರ ಎಲ್‌ಎಸ್‌ಜಿ ನಾಯಕ ಸ್ಥಾನದಿಂದ ಕೆಳಗಿಳಿದ ಪಂತ್ ಮತ್ತು ಸ್ಪಿನ್ ಮಾಂತ್ರಿಕ ಕುಲದೀಪ್ ಯಾದವ್ ಇಬ್ಬರೂ ಡೆಲ್ಲಿ ಕ್ಯಾಪಿಟಲ್ಸ್ (DC) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳ ನಡುವೆ ಅದಲು-ಬದಲಾಗಿದ್ದಾರೆ.

2025ರ ಮೆಗಾ ಹರಾಜಿನಲ್ಲಿ ಲಕ್ನೋ ತಂಡ, 27 ಕೋಟಿ ರೂ. ನೀಡಿ ಪಂತ್‌ ಅವರನ್ನು ಖರೀದಿಸಿತ್ತು. ಆದರೆ ಈಗ ಪಂತ್‌ ತಮ್ಮ ವೇತನದಲ್ಲಿ12 ಕೋಟಿ ರೂ. ನಷ್ಟದೊಂದಿಗೆ ಡೆಲ್ಲಿ ತಂಡವನ್ನು ಸೇರುತ್ತಿರುವುದು ವಿಶೇಷ.

ಐಪಿಎಲ್ ಸೋಮವಾರ ಬಿಡುಗಡೆ ಮಾಡಿದ ಅಧಿಕೃತ ಪ್ರಕಟಣೆಯ ಪ್ರಕಾರ, ಪಂತ್ ಡೆಲ್ಲಿ ತಂಡದಲ್ಲಿ ಪ್ರತಿ ಸೀಸನ್‌ಗೆ 15 ಕೋಟಿ ರೂ. ಗಳಿಸುತ್ತಾರೆ.

ಮತ್ತೊಂದೆಡೆ ಈ ಹೈ-ಪ್ರೊಫೈಲ್ ಟ್ರೇಡಿಂಗ್ ಒಪ್ಪಂದದ ಭಾಗವಾಗಿ ಭಾರತ ತಂಡದ ಖ್ಯಾತ ಸ್ಪಿನ್ನರ್ ಕುಲದೀಪ್ ಯಾದವ್(Kuldeep Yadav) ಅವರು ಡೆಲ್ಲಿ ಕ್ಯಾಪಿಟಲ್ಸ್ ತೊರೆದು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೇರಿದ್ದಾರೆ. ಹಳೆಯ ವೇತನವಾದ 13.5 ಕೋಟಿ ರೂ.ನೀಡಿ ಕುಲದೀಪ್ ಯಾದವ್ ಅವರನ್ನು ಲಕ್ನೋ ಫ್ರಾಂಚೈಸಿಯು ತನ್ನ ತಂಡಕ್ಕೆ ಬರಮಾಡಿಕೊಂಡಿದೆ. ಲಕ್ನೋ ತಂಡದ ಸ್ಪಿನ್ ವಿಭಾಗಕ್ಕೆ ಕುಲದೀಪ್ ಸೇರ್ಪಡೆಯಿಂದ ದೊಡ್ಡ ಬಲ ಬಂದಂತಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET ವಿದ್ಯಾರ್ಥಿಗಳಿಗೆ ಪರೀಕ್ಷೆ ತಪ್ಪಲು ಕಾಂಗ್ರೆಸ್ ಕಾರ್ಯಕ್ರಮದ ಟ್ರಾಫಿಕ್ ಕಾರಣ?: Bengaluru police Fact chek ಹೇಳೋದೇನು?

ನಾಲಿಗೆ ಬಿಗಿ ಹಿಡಿದು ಮಾತನಾಡಿ, ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ಈಶ್ವರಪ್ಪಗೆ ಬಿಸಿ ಪಾಟೀಲ್ ಎಚ್ಚರಿಕೆ

'ರೀಲ್ಸ್‌ನಲ್ಲಿ ಗರಿಬಿಚ್ಚಿದ ನವಿಲುಗಳು': Bigg Boss ಮಾಜಿ ಸ್ಪರ್ಧಿಗಳಿಗೆ ಸಂಕಷ್ಟ; ಕಿಶನ್, ನಿವೇದಿತಾ ಗೌಡ ವಿರುದ್ಧ ದೂರು!

Cricket: IPL 2026 ಎಫೆಕ್ಟ್, ನಿತೀಶ್ ಕುಮಾರ್ ರೆಡ್ಡಿ ಬದಲಿಗೆ ಸೂರ್ಯಾಂಶ್ ಶೆಡ್ಗೆ ಭಾರತ ಟಿ20 ತಂಡಕ್ಕೆ ಆಯ್ಕೆ

ಫ್ಲೈಓವರ್ ನಿರ್ಮಿಸುತ್ತಿರುವಾಗ ರಸ್ತೆಗೆ ವೈಟ್‌ಟಾಪಿಂಗ್ ಏಕೆ? ಬಿಲ್ ಗಾಗಿ ಕಾಮಗಾರಿಯೇ? B-SMILE ನಿರ್ದೇಶಕರಿಗೆ ಕೃಷ್ಣ ಬೈರೇಗೌಡ ತರಾಟೆ