ಲಾರ್ಡ್ಸ್: ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯಿಂದ ಭಾರತ ತಂಡ ನಿರ್ಗಮಿಸಿದೆ. ಲಾರ್ಡ್ಸ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಗ್ರೂಪ್-1ರ ಕೊನೆಯ ನಿರ್ಣಾಯಕ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು ಆರು ವಿಕೆಟ್ ಗಳಿಂದ ಮಣಿಸಿ, ಸೆಮಿಫೈನಲ್ ಪ್ರವೇಶಿಸಿತು.
ಹೈವೋಲ್ಟೇಜ್ ಪಂದ್ಯದಲ್ಲಿ ಹರ್ಮನ್ಪ್ರೀತ್ ಕೌರ್ ಮತ್ತು ಅವರ ತಂಡವನ್ನು ಬೆಂಬಲಿಸಲು ಲೆಜೆಂಡರಿ ವಿರಾಟ್ ಕೊಹ್ಲಿ, ಶಿಖರ್ ಧವನ್ ಮತ್ತು ರವಿಶಾಸ್ತ್ರಿ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡರು.
ಒಂದೇ ಸ್ಟ್ಯಾಂಡ್ ನಲ್ಲಿ ಕುಳಿತಿದ್ದ ಇವರೆಲ್ಲರೂ ಭಾರತೀಯ ಮಹಿಳಾ ಆಟಗಾರ್ತಿಯನ್ನು ಹುರಿದುಂಬಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇದು ಪ್ರಮುಖ ಪಂದ್ಯಗಳಲ್ಲಿ ಆಟಗಾರರ ಮನೋಸ್ಥೈರ್ಯ ಹೆಚ್ಚಿಸಲು ಮತ್ತು ಹಿರಿಯ ಪುರುಷ ತಂಡ ಮಹಿಳಾ ತಂಡದ ಹಿಂದೆ ದೃಢವಾಗಿ ನಿಂತಿದೆ ಎಂದು ತೋರಿಸಿತು. ಆದರೆ ನಾಯಕಿ ಹರ್ಮನ್ ಪ್ರೀತ್ ಕೌರ್ ಅವರ ಅರ್ಧಶತಕದ ಹೊರತಾಗಿಯೂ ಭಾರತ ಸೋಲುವ ಮೂಲಕ ಟೂರ್ನಿಯಿಂದ ನಿರ್ಗಮಿಸಿತು.