ಟೀಂ ಇಂಡಿಯಾ ಆಟಗಾರರು 
ಕ್ರಿಕೆಟ್

'ಭಾರತದ ಸೋಲಿಗೆ ಡ್ರೆಸ್ಸಿಂಗ್ ರೂಂನಲ್ಲಿನ ವ್ಯಕ್ತಿ ಕಾರಣ ಆದರೆ, ಶ್ರೇಯಸ್ ಅಯ್ಯರ್‌‌ರನ್ನು ಧೂಷಿಸುತ್ತಾರೆ': ಮನೋಜ್ ತಿವಾರಿ ವಾಗ್ದಾಳಿ

ಭಾರತ ತಂಡ ಇದೇ ರೀತಿ ಕಾರ್ಯನಿರ್ವಹಿಸುತ್ತಿದ್ದರೆ, ಮುಂದಿನ ವರ್ಷ ಏಕದಿನ ವಿಶ್ವಕಪ್ ಗೆಲ್ಲುವುದು ನಂಬಲಾಗದಷ್ಟು ಕಷ್ಟಕರವಾಗಿರುತ್ತದೆ ಎಂದಿದ್ದಾರೆ.

ಎರಡು ಪಂದ್ಯಗಳ ಟಿ20ಐ ಸರಣಿಯಲ್ಲಿ ಐರ್ಲೆಂಡ್ ವಿರುದ್ಧದ ಭಾರತದ ಆಘಾತಕಾರಿ ಸೋಲು ಕ್ರಿಕೆಟ್ ಜಗತ್ತನ್ನು ಬೆಚ್ಚಿಬೀಳಿಸಿದೆ. ಘಟಾನುಘಟಿ ಆಟಗಾರರೇ ತುಂಬಿರುವಂತೆ ಪ್ಲೇಯಿಂಗ್ XI ಅನ್ನು ಆಯ್ಕೆ ಮಾಡಿದರೂ, ಭಾರತ ಸತತ ಸೋಲುಗಳನ್ನು ಅನುಭವಿಸಿದ್ದು ನಂಬಲಸಾಧ್ಯ ಎನ್ನುವಂತಿದೆ. ಭಾರತ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡದ ಮಾಜಿ ಬ್ಯಾಟ್ಸ್‌ಮನ್ ಮನೋಜ್ ತಿವಾರಿ, ಭಾರತದ ಮುಖ್ಯ ಕೋಚ್ ಗೌತಮ್ ಗಂಭೀರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗಂಭೀರ್ ಅವರ ಹೆಸರನ್ನು ನೇರವಾಗಿ ಉಲ್ಲೇಖಿಸದಿದ್ದರೂ, ಐರ್ಲೆಂಡ್ ವಿರುದ್ಧದ ಭಾರತದ ಸೋಲಿಗೆ ಕಾರಣ ನಾಯಕ ಶ್ರೇಯಸ್ ಅಯ್ಯರ್ ಅಥವಾ ಆಟಗಾರರಲ್ಲ, ಬದಲಿಗೆ ಡ್ರೆಸ್ಸಿಂಗ್ ಕೋಣೆಯಲ್ಲಿನ ವ್ಯಕ್ತಿ ಎಂದಿದ್ದಾರೆ.

ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪೋಸ್ಟ್ ಮಾಡಿದ ವಿಡಿಯೋದಲ್ಲಿ ತಿವಾರಿ, ಭಾರತ ತಂಡ ಇದೇ ರೀತಿ ಕಾರ್ಯನಿರ್ವಹಿಸುತ್ತಿದ್ದರೆ, ಮುಂದಿನ ವರ್ಷ ಏಕದಿನ ವಿಶ್ವಕಪ್ ಗೆಲ್ಲುವುದು ನಂಬಲಾಗದಷ್ಟು ಕಷ್ಟಕರವಾಗಿರುತ್ತದೆ ಎಂದಿದ್ದಾರೆ.

'ದಕ್ಷಿಣ ಆಫ್ರಿಕಾದಲ್ಲಿ ಭಾರತ ವಿಶ್ವಕಪ್ ಗೆಲ್ಲಬಹುದು. ಇಂಗ್ಲೆಂಡ್ ವಿರುದ್ಧ ಭಾರತ ಟಿ20ಐ ಸರಣಿಯನ್ನೂ ಗೆಲ್ಲಬಹುದು. ಆದರೆ, ಐರ್ಲೆಂಡ್ ವಿರುದ್ಧದ ಟಿ20ಐ ಸರಣಿ ಸೋಲಿಗೆ ಯಾರು ಹೊಣೆಗಾರರಾಗುತ್ತಾರೆ? ಕೋಣೆಯಲ್ಲಿ ಆನೆಯನ್ನು ಉದ್ದೇಶಿಸಿ ಮಾತನಾಡಲು ನಾನು ನಿಮಗೆ ಹೇಳಿದೆ, ಆದರೆ ಯಾರೂ ನನ್ನ ಮಾತುಗಳನ್ನು ನಂಬಲಿಲ್ಲ' ಎಂದು ಗಂಭೀರ್ ಅವರ ನಿರ್ಧಾರಗಳು ತಂಡಕ್ಕೆ ಪ್ರಯೋಜನವಾಗುತ್ತಿಲ್ಲ ಎಂದು ಸುಳಿವು ನೀಡಿದರು.

'ನಿರ್ಧಾರ ತೆಗೆದುಕೊಳ್ಳುವವರ' ಪಿಆರ್ ಏಜೆನ್ಸಿಗಳು ಮತ್ತು ಸ್ನೇಹಿತರು ತಮ್ಮ ಹೇಳಿಕೆಗಳಿಗಾಗಿ ಶೀಘ್ರದಲ್ಲೇ ನನ್ನನ್ನು ಗುರಿಯಾಗಿಸುತ್ತಾರೆ. 'ಪಿಆರ್ ಏಜೆನ್ಸಿಗಳು ಮತ್ತು ನಿರ್ಧಾರ ತೆಗೆದುಕೊಳ್ಳುವವರ ಸ್ನೇಹಿತರು ಶ್ರೇಯಸ್ ಅಯ್ಯರ್ ಅವರ ಮೇಲೆ ಆರೋಪ ಹೊರಿಸಲು ಪ್ರಾರಂಭಿಸುತ್ತಾರೆ ಎಂಬುದು ನನಗೆ ತಿಳಿದಿದೆ' ಎಂದು ತಿವಾರಿ ಪ್ರತಿಪಾದಿಸಿದರು.

ಸರಣಿ ಸಮಯದಲ್ಲಿ ಯುವ ಆಟಗಾರ ವೈಭವ್ ಸೂರ್ಯವಂಶಿ ಅವರನ್ನು ತಂಡದ ಪ್ಲೇಯಿಂಗ್ XIನಲ್ಲಿ ಸೇರಿಸಿಕೊಳ್ಳಬೇಕಿತ್ತು ಎಂದ ಅವರು, ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರ ವಿಚಾರದಲ್ಲಿ ತಂಡದ ಆಡಳಿತ ಮಂಡಳಿಯ ನಿರ್ಧಾರವನ್ನು ಕೆಕೆಆರ್ ಮಾಜಿ ಬ್ಯಾಟರ್ ಪ್ರಶ್ನಿಸಿದರು.

'ಮೊದಲ ಪಂದ್ಯದಿಂದಲೇ ನೀವು ಅವರನ್ನು (ಸೂರ್ಯವಂಶಿ) ಆಡುವ ಹನ್ನೊಂದರ ಬಳಗದಲ್ಲಿ ಏಕೆ ಆಡಿಸಲಿಲ್ಲ? ಬದಲಾಗಿ, ಐಪಿಎಲ್‌ಗೂ ಮುನ್ನ ನಡೆದ ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದವರನ್ನೇ ಆಡಿಸಲು ನೀವು ನಿರ್ಧರಿಸಿದಿರಿ. ನಿಮ್ಮ ಆ 'ಪಾರ್ಟ್-ಟೈಮ್' ಆಟಗಾರನ (ವಾಷಿಂಗ್ಟನ್ ಸುಂದರ್) ಮೇಲಿನ ಒಲವು ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಯಿತು; ಅದಕ್ಕಾಗಿಯೇ ನೀವು ಅವರನ್ನು ಕೇವಲ ಒಂದೇ ಪಂದ್ಯದಲ್ಲಿ ಆಡಿಸಿದ್ದು' ಎಂದು ದೂರಿದರು.

ಸಾಮಾಜಿಕ ಜಾಲತಾಣಗಳಲ್ಲಿ ಗೌತಮ್ ಗಂಭೀರ್ ಅವರನ್ನು ಗುರಿಯಾಗಿಸಿಕೊಂಡಿರುವುದು ಇದೇ ಮೊದಲಲ್ಲ. ಈ ಹಿಂದೆ, ಕೆಕೆಆರ್‌ನಲ್ಲಿ ಗಂಭೀರ್ ಜೊತೆ ಆಡಿದ್ದ ತಿವಾರಿ, ಟೆಸ್ಟ್ ಕ್ರಿಕೆಟ್‌ನಿಂದ ಆರ್ ಅಶ್ವಿನ್, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಿವೃತ್ತಿಗೆ ಗಂಭೀರ್ ಕಾರಣ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಮ ಮಂದಿರ ದೇಣಿಗೆ ದುರ್ಬಳಕೆ ಆರೋಪ: 'ಕೋಟ್ಯಾಂತರ ಭಕ್ತರ ನಂಬಿಕೆಗೆ ಮಾಡಿದ ಅಪಮಾನ': ಪ್ರಧಾನಿ ಮೋದಿ ಮೌನದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಹಾವೇರಿ: ಕಾರ ಹುಣ್ಣಿಮೆ, ಹೋರಿ ಓಡಿಸುವಾಗ ಘರ್ಷಣೆ, 8 ಮಂದಿಗೆ ಗಾಯ! ಸರ್ಕಾರದ ಓಲೈಕೆಯೇ ನೇರ ಹೊಣೆ ಎಂದ ವಿಪಕ್ಷ ನಾಯಕ

ಪಶ್ಚಿಮ ಬಂಗಾಳದಲ್ಲಿ ಭಾರೀ ದುರಂತ: ಹಲ್ದಿಯಾ ಪೆಟ್ರೋಕೆಮಿಕಲ್ಸ್‌ನಲ್ಲಿ ಭೀಕರ ಅಗ್ನಿ ಅವಘಡ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ..!

PM-ಕಿಸಾನ್ ಯೋಜನೆಯಡಿ ಮಹಾರಾಷ್ಟ್ರ ರೈತನಿಗೆ ಕೇವಲ '1 ಪೈಸೆ' ಜಮೆ; ಅನ್ನದಾತನಿಗೆ 'ಅಪಹಾಸ್ಯ'

"ಭಾರತದ ಜಲ ಬಾಂಬ್‌ಗೆ ಪಾಕ್ ನಡುಕ": ನಮ್ಮ ಪಾಲಿನ ನೀರು ಮುಟ್ಟಿದರೆ ಆ ಕೈಗಳನ್ನೇ ಕತ್ತರಿಸುತ್ತೇವೆ- ಶತ್ರು ರಾಷ್ಟ್ರದಿಂದ ಮತ್ತೆ ಗೊಡ್ಡು ಬೆದರಿಕೆ..!